ಸ್ಟಿಕರ್ ತೆರವು 
ರಾಜ್ಯ

Video: ಕರ್ನಾಟಕದಲ್ಲಿ 'ಕನ್ನಡಿಗ'ನಿಗೆ ಜಾಗ ಇಲ್ಲವೇ? BMTC ಬಸ್ಸಿನ ಮೇಲೆ ಅಂಟಿಸಿದ್ದ ಸ್ಟಿಕ್ಕರ್ ತೆರವು ಖಂಡಿಸಿದ JDS

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು ಕನ್ನಡಿಗರ ಸರ್ಕಾರವೋ ಅಥವಾ ಕನ್ನಡ ವಿರೋಧಿ ಸರ್ಕಾರವೋ?

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಎಲೆಕ್ಟ್ರಿಕ್ ಬಸ್ ಮೇಲೆ ಹಾಕಲಾಗಿದ್ದ "ಕನ್ನಡಿಗ" ಸ್ಟಿಕ್ಕರ್ ಅನ್ನು ತೆಗೆದು ಹಾಕಲಾಗಿದ್ದು, ಇದಕ್ಕೆ ಪ್ರತಿಪಕ್ಷ ಜೆಡಿಎಸ್ ತೀವ್ರ ಆಕ್ರೇಶ ವ್ಯಕ್ತಪಡಿಸಿದೆ.

ಬಿಎಂಟಿಸಿ ಬಸ್ ಚಾಲಕನಿಗೆ "ಕನ್ನಡಿಗ" ಸ್ಟಿಕ್ಕರ್ ಅನ್ನು ತೆಗೆದು ಹಾಕುವಂತೆ ಅಧಿಕಾರಿಯೊಬ್ಬರು ಸೂಚಿಸಿದ್ದಾರೆ ಎಂಬ ಆರೋಪದ ನಂತರ ವಿವಾದ ಭುಗಿಲೆದ್ದಿದೆ.

ಕರ್ನಾಟಕದಲ್ಲೇ "ಕನ್ನಡಿಗ" ಅನ್ನೋ ಪದಕ್ಕೆ ಜಾಗವಿಲ್ಲವೇ ?

BMTC ಬಸ್ಸಿನ ಮೇಲೆ ಅಂಟಿಸಿದ್ದ 'ಕನ್ನಡಿಗ' ಸ್ಟಿಕರ್ ತೆರವುಗೊಳಿಸಲು ಪಟ್ಟು ಹಿಡಿದ ಅಧಿಕಾರಿಯ ಈ ಕನ್ನಡ ವಿರೋಧಿ ಧೋರಣೆಯನ್ನು ಜೆಡಿಎಸ್ ಪಕ್ಷವು ಉಗ್ರವಾಗಿ ಖಂಡಿಸುತ್ತದೆ ಎಂದು ಜೆಡಿಎಸ್ ಎಕ್ಸ್ ನಲ್ಲಿ ವಿಡಿಯೋ ಸಮೇತ ಪೋಸ್ಟ್ ಮಾಡಿದೆ.

ಖಾಸಗಿ ಸಂಸ್ಥೆಗಳ ಜಾಹೀರಾತುಗಳಿಗೆ ಜಾಗ ಕೊಡುವ ಸರ್ಕಾರಕ್ಕೆ, 'ಕನ್ನಡಿಗ' ಎನ್ನುವ ಹೆಮ್ಮೆಯ ಸಾಲು ನಿಷೇಧವೇ ?

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು ಕನ್ನಡಿಗರ ಸರ್ಕಾರವೋ ಅಥವಾ ಕನ್ನಡ ವಿರೋಧಿ ಸರ್ಕಾರವೋ?

ರಾಜ್ಯ ಸರ್ಕಾರ ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಈ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತರುವುದನ್ನು ನಿಲ್ಲಿಸಬೇಕು ಎಂದು ಜೆಡಿಎಸ್ ಒತ್ತಾಯಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಹ್ಲಾದ್ ಜೋಶಿ ಕೊಳಕು ಮನುಷ್ಯ; ಅತ್ಯಾಚಾರಿಯನ್ನು ರಕ್ಷಿಸುವವರು ನೂತನ ಶಿಕ್ಷಣ ಸಚಿವರಾಗಿದ್ದಾರೆ: ರಾಹುಲ್ ಗಂಭೀರ ಆರೋಪ, Video

ದೆಹಲಿಗೆ ಬಂದು ನಾಟಕವಾಡುವ ನಿಮಗೆ KPSC ಹಗರಣ ಅನ್ಯಾಯ ಅನಿಸಲಿಲ್ಲವೇ?: ಲೋಕಸಭೆಯಲ್ಲಿ ಸಿಎಂ ಶಿವಕುಮಾರ್ ವಿರುದ್ಧ ತೇಜಸ್ವಿ ವಾಗ್ದಾಳಿ!

ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 13 ರಿಂದ ಆರಂಭ; ಟಾಪ್‌ 10 ಚರ್ಚಾ ವಿಷಯಗಳಿವು

ಪಾಕ್ ತನ್ನ ಅತಿಕ್ರಮಣವನ್ನು ಮುಚ್ಚಿಹಾಕಲು PoKನಲ್ಲಿ ಚುನಾವಣೆ ನಡೆಸುವ ಪ್ರಯತ್ನ: ಭಾರತ ತೀವ್ರ ಖಂಡನೆ

ಶಾಸಕರ ಭವನದ 7ನೇ ಮಹಡಿಯಿಂದ ಬಿದ್ದು ಮಾಜಿ ಸಚಿವ ನಾನಕ್ ರಾಮ್ ಭುರ್ಜಿ ಸಾವು; ಕೊಲೆಯೋ, ಆತ್ಮಹತ್ಯೆಯೋ?