ಮೇಕೆದಾಟು 
ರಾಜ್ಯ

ಮೇಕೆದಾಟು ಯೋಜನೆಗೆ ಸಿಕ್ಕಿತು ಕೇಂದ್ರದ ಬಲ; ಕರ್ನಾಟಕಕ್ಕೆ ಕಾನೂನುಬದ್ಧ ಹಕ್ಕಿದೆ, ತಮಿಳುನಾಡಿನ ಸಮ್ಮತಿ ಅಗತ್ಯವೇ ಇಲ್ಲ ಎಂದ ಜಲಶಕ್ತಿ ಸಚಿವಾಲಯ

2018ರ ಫೆಬ್ರವರಿ 16ರಂದು ಕಾವೇರಿ ಜಲ ವಿವಾದ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಲ್ಲಿ, ಕಾವೇರಿ ನದಿಗೆ ಅಡ್ಡವಾಗಿ ಯಾವುದೇ ನಿರ್ಮಾಣ ಕೈಗೊಳ್ಳಲು ಕರ್ನಾಟಕವು ಇತರ ತೀರ ರಾಜ್ಯಗಳಾದ ತಮಿಳುನಾಡು, ಕೇರಳ ಹಾಗೂ ಪುದುಚೇರಿಯ ಒಪ್ಪಿಗೆ ಪಡೆಯಬೇಕು ಎಂಬ ಉಲ್ಲೇಖವೇ ಇಲ್ಲ.

ಬೆಂಗಳೂರು: ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದ ಪರವಾಗಿ ಕೇಂದ್ರ ಸರ್ಕಾರ ಮಹತ್ವದ ಸ್ಪಷ್ಟನೆ ನೀಡಿದೆ.

ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕಕ್ಕೆ ತನ್ನ ಭೂಭಾಗದಲ್ಲಿ ಜಲಾಶಯ ನಿರ್ಮಿಸುವ ಕಾನೂನುಬದ್ಧ ಹಕ್ಕಿದ್ದು, ಇದಕ್ಕಾಗಿ ತಮಿಳುನಾಡು, ಕೇರಳ ಅಥವಾ ಪುದುಚೇರಿಯ ಸಮ್ಮತಿ ಪಡೆಯುವ ಅಗತ್ಯವೇ ಇಲ್ಲ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ರಾಜ್ಯಸಭೆಯಲ್ಲಿ ತಿಳಿಸಿದೆ.

ಈ ಹೇಳಿಕೆಯಿಂದ ಬಹುಕಾಲದ ಮೇಕೆದಾಟು ವಿವಾದಕ್ಕೆ ಹೊಸ ತಿರುವು ಸಿಕ್ಕಿದ್ದು, ಕರ್ನಾಟಕದ ನಿಲುವಿಗೆ ಮತ್ತಷ್ಟು ಬಲ ದೊರೆತಿದೆ.

ರಾಜ್ಯಸಭೆಯಲ್ಲಿ ತಮಿಳುನಾಡಿನ ಸಂಸದ ಡಾ. ಅನ್ಬುಮಣಿ ರಾಮದಾಸ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ ಅವರು, 2018ರ ಫೆಬ್ರವರಿ 16ರಂದು ಕಾವೇರಿ ಜಲ ವಿವಾದ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಲ್ಲಿ, ಕಾವೇರಿ ನದಿಗೆ ಅಡ್ಡವಾಗಿ ಯಾವುದೇ ನಿರ್ಮಾಣ ಕೈಗೊಳ್ಳಲು ಕರ್ನಾಟಕವು ಇತರ ತೀರ ರಾಜ್ಯಗಳಾದ ತಮಿಳುನಾಡು, ಕೇರಳ ಹಾಗೂ ಪುದುಚೇರಿಯ ಒಪ್ಪಿಗೆ ಪಡೆಯಬೇಕು ಎಂಬ ಉಲ್ಲೇಖವೇ ಇಲ್ಲ ಎಂದು ತಿಳಿಸಿದರು.

ಇದೇ ವೇಳೆ 2007ರ ಕಾವೇರಿ ಜಲ ವಿವಾದ ನ್ಯಾಯಮಂಡಳಿ (CWDT) ತೀರ್ಪಿನ 18ನೇ ವಿಧಿಯನ್ನು ಸುಪ್ರೀಂ ಕೋರ್ಟ್ ಸಮರ್ಥಿಸಿದ ಅವರು, "ಈ ನ್ಯಾಯಮಂಡಳಿಯ ಆದೇಶವು ಯಾವುದೇ ರಾಜ್ಯವು ತನ್ನ ಗಡಿಗಳೊಳಗೆ ನೀರಿನ ಬಳಕೆಯನ್ನು ನಿಯಂತ್ರಿಸುವ ಅಥವಾ ಆ ರಾಜ್ಯದ ನೀರಿನ ಪ್ರಯೋಜನವನ್ನು ಪಡೆಯುವ ಹಕ್ಕು, ಅಧಿಕಾರ ಅಥವಾ ಶಕ್ತಿಯನ್ನು ಹಾನಿಗೊಳಿಸುವುದಿಲ್ಲ. ಆದರೆ, ಅದು ನ್ಯಾಯಮಂಡಳಿಯ ಆದೇಶಕ್ಕೆ ವಿರುದ್ಧವಾಗಿರಬಾರದು ಎಂದು ಪುನರುಚ್ಚರಿಸಿದೆ ಎಂದು ಹೇಳಿದರು.

ಪರಿಷ್ಕೃತ ಡಿಪಿಆರ್ ಸಲ್ಲಿಸಲು ಸೂಚನೆ

ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ವಿವರವಾದ ಯೋಜನಾ ವರದಿ (DPR)ಯನ್ನು ಕಾವೇರಿ ಜಲ ವಿವಾದ ನ್ಯಾಯಮಂಡಳಿಯ ತೀರ್ಪು ಹಾಗೂ ಪ್ರಸ್ತುತ ಕೇಂದ್ರ ಜಲ ಆಯೋಗದ (CWC) ಮಾರ್ಗಸೂಚಿಗಳಿಗೆ ಅನುಗುಣವಾಗಿ ಪರಿಷ್ಕರಿಸಿ ಮರುಸಲ್ಲಿಸುವಂತೆ ಯೋಜನಾ ಪ್ರಾಧಿಕಾರಕ್ಕೆ ಹಿಂದಿರುಗಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಡಿಕೆ ಶಿವಕುಮಾರ್ ಸ್ವಾಗತ

ಕೇಂದ್ರ ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸುಪ್ರೀಂ ಕೋರ್ಟ್ ತೀರ್ಪು ಕರ್ನಾಟಕ ಹಾಗೂ ತಮಿಳುನಾಡು ಎರಡಕ್ಕೂ ಅನ್ವಯವಾಗುವಂತೆ ಸ್ಪಷ್ಟವಾಗಿದೆ ಎಂದು ಹೇಳಿದರು.

ನವದೆಹಲಿಯಲ್ಲಿ ಕರ್ನಾಟಕದ ಸಂಸದರ ಸಭೆಯಲ್ಲಿ ಸೋಮವಾರ ಮಾತನಾಡಿದ ಅವರು, "ಕರ್ನಾಟಕದ ಭೂಭಾಗದಲ್ಲಿ ಸಮತೋಲನ ಜಲಾಶಯ ನಿರ್ಮಿಸಲು ಬೇರೆ ಯಾವುದೇ ರಾಜ್ಯದ ಅನುಮತಿ ಅಗತ್ಯವಿಲ್ಲ. ಇದಕ್ಕೆ ಇತರ ರಾಜ್ಯಗಳಿಗೆ ಆಕ್ಷೇಪಿಸುವ ಹಕ್ಕೂ ಇಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಇಂದು ರಾಜ್ಯಸಭೆಯಲ್ಲಿ ಜಲಶಕ್ತಿ ಸಚಿವರೂ ಇದೇ ವಿಷಯವನ್ನು ಪುನರುಚ್ಚರಿಸಿದ್ದಾರೆ. ಕರ್ನಾಟಕದ ಪರವಾಗಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು.

ಇದೇ ವೇಳೆ, ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ತಮ್ಮನ್ನು ಭೇಟಿ ಮಾಡಲು ಬಯಸಿದ್ದಾರೆ ಎಂಬ ಮಾಹಿತಿಯನ್ನೂ ಸಂಸದರಿಗೆ ನೀಡಿದರು.

ಬೆಂಗಳೂರುದಿಂದ ಸುಮಾರು 100 ಕಿಲೋಮೀಟರ್ ದೂರದಲ್ಲಿರುವ ಕಾವೇರಿ ನದಿಯ ಮೇಕೆದಾಟು ಪ್ರದೇಶದಲ್ಲಿ 67 ಟಿಎಂಸಿ ಅಡಿ ಸಾಮರ್ಥ್ಯದ ಸಮತೋಲನ ಜಲಾಶಯ ನಿರ್ಮಿಸಲು ಕರ್ನಾಟಕ ಸರ್ಕಾರ ಉದ್ದೇಶಿಸಿದೆ.

ರಾಜ್ಯ ಸರ್ಕಾರ ಈ ಯೋಜನೆಯಿಂದ ಬರಗಾಲದ ಸಂದರ್ಭದಲ್ಲೂ ತಮಿಳುನಾಡಿಗೆ ನೀರನ್ನು ನಿಯಮಿತವಾಗಿ ಬಿಡುಗಡೆ ಮಾಡಲು ನೆರವಾಗಲಿದ್ದು, ಬೆಂಗಳೂರಿಗೆ ಕುಡಿಯುವ ನೀರಿನ ಪೂರೈಕೆಯನ್ನು ಬಲಪಡಿಸಲಿದೆ. ಸುಮಾರು 400 ಮೆಗಾವಾಟ್ ವಿದ್ಯುತ್ ಉತ್ಪಾದನೆ ಸಾಧ್ಯವಾಗಿ ರಾಜ್ಯದ ಇಂಧನ ಕ್ಷೇತ್ರಕ್ಕೂ ಲಾಭವಾಗಲಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನವದೆಹಲಿ: ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದ ಸಂಸದರ ಸಭೆ; ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ 13 ಅಂಶಗಳ ಮಂಡನೆ!

'ಕಾಕ್ರೋಚ್​' ಪಾರ್ಟಿಗೆ 1 ಕೋಟಿ ರೂ ದೇಣಿಗೆ, ಉಚಿತ ಕಾನೂನು ನೆರವು ಘೋಷಿಸಿದ ಕಪಿಲ್‌ ಸಿಬಲ್!

CJP ಪ್ರತಿಭಟನೆಯಲ್ಲಿ 2,873 ಕ್ರಿಮಿನಲ್ ಗಳು ಭಾಗಿ: ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ ದೆಹಲಿ ಪೊಲೀಸರು!

ರಾಜ್ಯದ ರೇಷನ್ ಅಂಗಡಿಗಳಲ್ಲಿ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಸಿನಿಮಾ ಪ್ರೀಮಿಯರ್ ಶೋ ಟಿಕೆಟ್ ಮಾರಾಟ! ಜನರ ಆಕ್ರೋಶ

ತನಗಿಂತ 9 ವರ್ಷ ಕಿರಿಯನಾದ Team India ಕ್ರಿಕೆಟಿಗನ ಜೊತೆ ಮೃಣಾಲ್ ಠಾಕೂರ್ ಡೇಟಿಂಗ್? ಸಿಕ್ಕಿಬಿದ್ದ ನಟಿ, Video!