ಚುನಾವಣಾ ಅಧಿಕಾರಿ ವಿ ಅನ್ಬುಕುಮಾರ್ 
ರಾಜ್ಯ

ರಾಜ್ಯದಲ್ಲಿ SIR ಶಾಕ್! ಮತದಾರರ ಪಟ್ಟಿಯಿಂದ 84.31 ಲಕ್ಷ ಮಂದಿ ಡಿಲೀಟ್; ಬೆಂಗಳೂರಿನಲ್ಲಿಯೇ ಅತಿ ಹೆಚ್ಚು- ಚುನಾವಣಾ ಆಯೋಗ; Video

ಈ ಕುರಿತು ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರು: ರಾಜ್ಯಾದ್ಯಂತ ಪ್ರಸ್ತುತ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸುಮಾರು ಶೇ. 15 ರಷ್ಟು ಬರೋಬ್ಬರಿ 84,31,612 ಮತದಾರರನ್ನು ಮೊದಲ ಕರಡು ಮತದಾರರ ಪಟ್ಟಿಯಿಂದ ಹೊರಗಿಡಲು ಗುರುತಿಸಲಾಗಿದೆ.

ಈ ಕುರಿತು ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಪ್ರತಿಯೊಬ್ಬ ಮತದಾರರ ಮನೆ ಬಾಗಿಲಿಗೆ ತೆರಳಿ ಸ್ಥಳ ಮಹಜರು ಮಾಡಲಾಗಿದ್ದು, ಮೃತರ ಡೆತ್ ಸರ್ಟಿಫಿಕೇಟ್ ಸಂಗ್ರಹಿಸುವುದರ ಜೊತೆಗೆ ಸಂಬಂಧಪಟ್ಟವರಿಂದ ಸಹಿ ಕೂಡ ಪಡೆಯಲಾಗಿದೆ. ಹೀಗಾಗಿ ಈ 84 ಲಕ್ಷಕ್ಕೂ ಅಧಿಕ ಜನರನ್ನು ಮೊದಲ ಕರಡು ಪಟ್ಟಿಯಲ್ಲಿ ಪರಿಗಣಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಚುನಾವಣಾ ಆಯೋಗವು ಮೊದಲ ಕರಡು ಪಟ್ಟಿಯಿಂದ ಹೊರಗಿಡಲು ಗುರುತಿಸಿರುವ ಒಟ್ಟು 84,31,612 ಮತದಾರರಲ್ಲಿ ಶಾಶ್ವತವಾಗಿ ಸ್ಥಳಾಂತರಗೊಂಡವರ ಸಂಖ್ಯೆ ಅತ್ಯಂತ ಹೆಚ್ಚಿದ್ದು, ಬರೋಬ್ಬರಿ 51,74,968 ಜನರು ಈ ವ್ಯಾಪ್ತಿಗೆ ಬರುತ್ತಾರೆ.

ಇನ್ನು 14,99,799 ಮೃತಪಟ್ಟ ಮತದಾರರನ್ನು ಗುರುತಿಸಲಾಗಿದ್ದು, 11,61,231 ಜನರು ಯಾವುದೇ ಸುಳಿವು ಸಿಗದೆ ನಾಪತ್ತೆಯಾಗಿರುವುದು ಕಂಡುಬಂದಿದೆ. ಇದರ ಜೊತೆಗೆ 5,62,572 ನಕಲಿ ಅಥವಾ ಎರಡೆರಡು ಕಡೆ ಮತ ಹಕ್ಕು ಹೊಂದಿರುವವರನ್ನು ಹಾಗೂ ಸಹಿ ಮಾಡಲು ನಿರಾಕರಿಸಿದ 33,042 ಇತರ ಜನರನ್ನು ಕರಡು ಪಟ್ಟಿಯಿಂದ ಹೊರಗಿಡಲು ಪಟ್ಟಿ ಮಾಡಲಾಗಿದೆ.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಒಟ್ಟು 1.3 ಕೋಟಿ ಮತದಾರರಿದ್ದು, ಈ ಪೈಕಿ ಇದುವರೆಗೆ ಕೇವಲ 47.97 ಲಕ್ಷ ಜನರು ಮಾತ್ರ ಅರ್ಜಿ ವಾಪಸ್ ಕೊಟ್ಟಿದ್ದಾರೆ. ಬರೋಬ್ಬರಿ 39.38 ಲಕ್ಷ ಎಂದರೆ ಸುಮಾರು ಶೇಕಡಾ 40 ರಷ್ಟು ಮತದಾರರ ಯಾವುದೇ ಸುಳಿವೇ ಸಿಕ್ಕಿಲ್ಲ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಇನ್ನುಳಿದ 16.57 ಲಕ್ಷ ಮತದಾರರು ಅರ್ಜಿಗಳನ್ನು ವಾಪಸ್ ನೀಡಬೇಕಿದೆ ಎಂದು ಮುಖ್ಯ ಚುನಾವಣಾಧಿಕಾರಿಗಳು ವಿವರಿಸಿದ್ದಾರೆ.

ರಾಜ್ಯಾದ್ಯಂತ ಎಸ್‌ಐಆರ್‌ ಪ್ರಕ್ರಿಯೆಯ ಪ್ರಸ್ತುತ ಪ್ರಗತಿ ವರದಿ: ರಾಜ್ಯಾದ್ಯಂತ ಒಟ್ಟು 5,54,32,314 ಎನ್ಯೂಮರೇಷನ್ ಫಾರ್ಮ್‌ಗಳನ್ನು ವಿತರಿಸಲಾಗಿದ್ದು, ಈ ಪೈಕಿ 4,26,75,861 ಅರ್ಜಿಗಳನ್ನು ವಾಪಸ್ ಸ್ವೀಕರಿಸಿ ಡಿಜಿಟೈಸೇಷನ್ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ.

ಪ್ರಸ್ತುತ ಎಸ್‌ಐಆರ್ ಕಾರ್ಯವು ಶೇಕಡಾ 76.99 ರಷ್ಟು ಪ್ರಗತಿ ಸಾಧಿಸಿದೆ. ಇನ್ನು 43,24,841 ಮತದಾರರ ಮಾಹಿತಿ ಸಿಗಬೇಕಿದ್ದು, ಆಗಸ್ಟ್ 08ರ ನಂತರ ಇವರ ಬಗ್ಗೆ ಸಂಪೂರ್ಣ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ. ಇದರ ಜೊತೆಗೆ 3.22 ಲಕ್ಷ ಆನ್‌ಲೈನ್ ಅರ್ಜಿಗಳು, 2,283 ಫಾರ್ಮ್ 6A ಅರ್ಜಿಗಳು ಹಾಗೂ 7.73 ಲಕ್ಷ ಫಾರ್ಮ್ 7 ಅರ್ಜಿಗಳು ಸ್ವೀಕೃತಗೊಂಡಿವೆ.

ಇದುವರೆಗೆ ಅರ್ಜಿ ವಾಪಸ್ ಕೊಡದೇ ಇರುವವರು ಆಗಸ್ಟ್ 8ರ ಒಳಗಾಗಿ ಬಿಎಲ್‌ಒ (BLO) ಸಹಾಯ ಪಡೆದು ಅರ್ಜಿ ಸಲ್ಲಿಸಬೇಕಾಗಿದೆ. ಸುಮಾರು 29 ಲಕ್ಷ ಮತದಾರರು '2002ರ ಮಾಹಿತಿ ಇಲ್ಲ' ಎಂಬ ಕಾರಣ ನೀಡಿ ಅರ್ಜಿ ವಾಪಸ್ ಕೊಟ್ಟಿದ್ದಾರೆ. ಆದಾಗ್ಯೂ, ಮಾಹಿತಿ ಲಭ್ಯವಿಲ್ಲದಿದ್ದರೂ ಬಿಎಲ್‌ಒಗಳ ನೆರವಿನಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಶಾಶ್ವತವಾಗಿ ಸ್ಥಳಾಂತರಗೊಂಡಿರುವ 51.74 ಲಕ್ಷ ಮತದಾರರು ಪ್ರಸ್ತುತ ಕರ್ನಾಟಕದ ಯಾವುದೇ ಕ್ಷೇತ್ರದಲ್ಲಿ ವಾಸವಿದ್ದು, ದೇಶದ ಬೇರೆ ಎಲ್ಲೂ ಮತ ಹೊಂದಿರದಿದ್ದರೆ ಫಾರ್ಮ್-6 ಮೂಲಕ ಸೂಕ್ತ ವಿಳಾಸದ ದಾಖಲೆ ನೀಡಿ ಅರ್ಜಿ ಸಲ್ಲಿಸಬಹುದು. ಅವರು ಕರ್ನಾಟಕದಲ್ಲಿ ವಾಸ ಮಾಡುತ್ತಿರುವುದಕ್ಕೆ ಸರಿಯಾದ ದಾಖಲೆ ಸಲ್ಲಿಸಿದರೆ ಅವರ ಹೆಸರನ್ನು ಪರಿಗಣಿಸಲಾಗುತ್ತದೆ, ಇಲ್ಲವಾದಲ್ಲಿ ಅಂತಿಮ ಪಟ್ಟಿಯಿಂದಲೂ ಅವರನ್ನು ಹೊರಗಿಡಲಾಗುತ್ತದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿದ್ಯಾರ್ಥಿಗಳ ಮೇಲೆ ಪೆಲ್ಲೆಟ್ ಗುಂಡಿನ ದಾಳಿ: ಶಾ ಅವರೇ ಆದೇಶ ನೀಡಿದ್ದಾರೆ, ಇಲ್ಲವೇ ಅವರು ಅಸಮರ್ಥ; ವಜಾಗೊಳಿಗೊಳಿಸಿ- ಪ್ರಧಾನಿಗೆ ರಾಹುಲ್ ಒತ್ತಾಯ

ಕಾವೇರಿ ನೀರು ಬಿಡುಗಡೆ ಸಮಿತಿಯ ಆದೇಶವು 'ಅವೈಜ್ಞಾನಿಕ', ಕರ್ನಾಟಕಕ್ಕೆ 'ಮಾರಕ': ಕೇಂದ್ರ ಸಚಿವ ಕುಮಾರಸ್ವಾಮಿ

ಚೆನ್ನೈ ಮೆಟ್ರೋ ರೈಲಿನಲ್ಲಿ ಸಿಎಂ ವಿಜಯ್ ಪ್ರಯಾಣ: ಜನರೊಂದಿಗೆ ಸಂವಾದ, ಸರಳತೆಗೆ ಫ್ಯಾನ್ಸ್ ಫಿದಾ! Video

Beat the f**king sh*t out: ಅಮೆರಿಕದ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ, ಟ್ರಂಪ್ ಆಕ್ರೋಶ!

ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ಯಶಸ್ಸು ಗೌತಮ್ ಗಂಭೀರ್ ಮೇಲೆ ಒತ್ತಡ ಹೇರಲಿದೆ: RCB ಮಾಜಿ ಬ್ಯಾಟರ್ ಡಿವಿಲಿಯರ್ಸ್