ಕರ್ನಾಟಕ ಪರೀಕ್ಷಾ ಪ್ರಾಧಿಕಾರ  
ರಾಜ್ಯ

ಎಂಜಿನಿಯರಿಂಗ್ ಪ್ರವೇಶದ ಗಡುವು ವಿಸ್ತರಿಸಿ: AICTEಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮನವಿ

ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ವೈದ್ಯಕೀಯ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಪ್ರಕಟಿಸುವಲ್ಲಿ ವಿಳಂಬವಾಗಿರುವುದು ಹಾಗೂ ವೈದ್ಯಕೀಯ ಕೋರ್ಸ್‌ಗಳ ಸೀಟು ಮ್ಯಾಟ್ರಿಕ್ಸ್‌ ನ್ನು ರಾಜ್ಯ ಸರ್ಕಾರದಿಂದ ಪಡೆಯುವಲ್ಲಿ ತಡವಾಗಿರುವ ಕಾರಣ ವೈದ್ಯಕೀಯ ಕೌನ್ಸೆಲಿಂಗ್ ಪ್ರಕ್ರಿಯೆ ವಿಳಂಬವಾಗುತ್ತಿದೆ.

ಬೆಂಗಳೂರು: ವೈದ್ಯಕೀಯ ಕೋರ್ಸ್‌ಗಳ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ, ಎಂಜಿನಿಯರಿಂಗ್ ಪ್ರವೇಶದ ಕೊನೆಯ ದಿನಾಂಕವನ್ನು ವಿಸ್ತರಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE)ಗೆ ಮನವಿ ಮಾಡಿದೆ. ಇದೇ ವಿಷಯವಾಗಿ ಕಾಮೆಡ್-ಕೆ (COMEDK) ಕೂಡ ಎಐಸಿಟಿಇಗೆ ಪತ್ರ ಬರೆದು ಪ್ರವೇಶದ ಗಡುವು ವಿಸ್ತರಿಸುವಂತೆ ಕೋರಿದೆ.

ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ವೈದ್ಯಕೀಯ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಪ್ರಕಟಿಸುವಲ್ಲಿ ವಿಳಂಬವಾಗಿರುವುದು ಹಾಗೂ ವೈದ್ಯಕೀಯ ಕೋರ್ಸ್‌ಗಳ ಸೀಟು ಮ್ಯಾಟ್ರಿಕ್ಸ್‌ ನ್ನು ರಾಜ್ಯ ಸರ್ಕಾರದಿಂದ ಪಡೆಯುವಲ್ಲಿ ತಡವಾಗಿರುವ ಕಾರಣ ವೈದ್ಯಕೀಯ ಕೌನ್ಸೆಲಿಂಗ್ ಪ್ರಕ್ರಿಯೆ ವಿಳಂಬವಾಗುತ್ತಿದೆ.

ಎಐಸಿಟಿಇ ಪ್ರಕಟಿಸಿರುವ ವೇಳಾಪಟ್ಟಿಯ ಪ್ರಕಾರ, ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆಯನ್ನು ಆಗಸ್ಟ್ 14ರೊಳಗೆ ಪೂರ್ಣಗೊಳಿಸಬೇಕು. ಆದರೆ, ಪ್ರಥಮ ವರ್ಷದ ತರಗತಿಗಳು ಆಗಸ್ಟ್ 1ರಿಂದಲೇ ಆರಂಭವಾಗಬೇಕೆಂದು ಕಡ್ಡಾಯಗೊಳಿಸಲಾಗಿದೆ.

ಈಗ ನೀಟ್ ಮರುಪರೀಕ್ಷೆಯ ಫಲಿತಾಂಶ ಪ್ರಕಟವಾಗಿರುವ ಹಿನ್ನೆಲೆಯಲ್ಲಿ, ವೈದ್ಯಕೀಯ ಕೌನ್ಸೆಲಿಂಗ್‌ನ ಮೊದಲ ಸುತ್ತು ಪೂರ್ಣಗೊಳ್ಳುವವರೆಗೆ ಕೆಇಎ ಕಾಯಬೇಕಾಗಿದೆ. ಏಕೆಂದರೆ ಮೊದಲ ಸುತ್ತಿನ ವೈದ್ಯಕೀಯ ಸೀಟು ಹಂಚಿಕೆಯ ನಂತರ ಎಷ್ಟು ಎಂಜಿನಿಯರಿಂಗ್ ಸೀಟುಗಳು ಮರಳುತ್ತವೆ ಎಂಬುದು ಆಗ ಮಾತ್ರ ತಿಳಿಯಲಿದೆ.

ಕೆಲವು ವಿದ್ಯಾರ್ಥಿಗಳು ಎಂಜಿನಿಯರಿಂಗ್ ಸೀಟುಗಳನ್ನು ಆಯ್ಕೆಯಾಗಿ ಪಡೆದಿದ್ದರೂ ವೈದ್ಯಕೀಯ ಕೋರ್ಸ್‌ಗೆ ಸೇರುವ ಉದ್ದೇಶ ಹೊಂದಿದ್ದಾರೆ. ವೈದ್ಯಕೀಯ ಸೀಟು ಹಂಚಿಕೆಯ ಮೊದಲ ಸುತ್ತಿನ ನಂತರ ಅವರು ಎಂಜಿನಿಯರಿಂಗ್ ಸೀಟುಗಳನ್ನು ಹಿಂತಿರುಗಿಸುತ್ತಾರೆ. ಆ ಸೀಟುಗಳನ್ನು ಮತ್ತೆ ಎಂಜಿನಿಯರಿಂಗ್ ಸೀಟುಗಳ ಪಟ್ಟಿಗೆ ಸೇರಿಸಬೇಕಾಗುತ್ತದೆ ಎಂದು ಕೆಇಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವೈದ್ಯಕೀಯ ಪ್ರವೇಶಾಕಾಂಕ್ಷಿಗಳು ಆಯ್ಕೆ ಮಾಡಿಕೊಂಡಿರುವ ಕೆಲವು ಪ್ರಮುಖ ಎಂಜಿನಿಯರಿಂಗ್ ಕಾಲೇಜುಗಳ ಸೀಟುಗಳಿಗೆ ಅರ್ಹ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳುವ ಉದ್ದೇಶದಿಂದ, ಪ್ರವೇಶದ ಗಡುವು ವಿಸ್ತರಿಸುವಂತೆ ಕೆಇಎ ಮನವಿ ಮಾಡಿದೆ.

ಕೆಇಎ ಅಧಿಕಾರಿಗಳ ಪ್ರಕಾರ, ರಾಜ್ಯ ಸರ್ಕಾರದಿಂದ ಸೀಟು ಮ್ಯಾಟ್ರಿಕ್ಸ್ ಸಲ್ಲಿಕೆಯಲ್ಲಿ ವಿಳಂಬವಾಗಿದ್ದರಿಂದ ರಾಜ್ಯದಲ್ಲಿ ಕೌನ್ಸೆಲಿಂಗ್ ಪ್ರಕ್ರಿಯೆಯೇ ತಡವಾಗಿದೆ. ಹೀಗಾಗಿ, ಎಐಸಿಟಿಇ ಪ್ರಕಟಿಸಿರುವ ವೇಳಾಪಟ್ಟಿಯಂತೆ ಎಲ್ಲಾ ಸುತ್ತಿನ ಕೌನ್ಸೆಲಿಂಗ್ ಪೂರ್ಣಗೊಳಿಸಿ ಪ್ರವೇಶ ಪ್ರಕ್ರಿಯೆಯನ್ನು ಮುಗಿಸುವುದು ಅಸಾಧ್ಯವಾಗಿದೆ.

ಇದರ ಮಧ್ಯೆ, ಎಂಜಿನಿಯರಿಂಗ್ ಕಾಲೇಜುಗಳ ಪ್ರಾಂಶುಪಾಲರು ಎಂಜಿನಿಯರಿಂಗ್ ಪ್ರವೇಶಕ್ಕೆ ನಿಗದಿಪಡಿಸಿರುವ ಗಡುವಿನ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.

ಈ ವೇಳಾಪಟ್ಟಿ ಸುಪ್ರೀಂ ಕೋರ್ಟ್ ಆದೇಶದಂತೆ ಇದೆ ಎಂಬುದನ್ನು ನಾವು ಒಪ್ಪುತ್ತೇವೆ. ಆದರೆ ನಿಯಂತ್ರಣ ಸಂಸ್ಥೆಯು ಪಿಯುಸಿ ದ್ವಿತೀಯ ವರ್ಷದ (12ನೇ ತರಗತಿ) ಫಲಿತಾಂಶ ಪ್ರಕಟಣೆಗೆ ಗಡುವನ್ನು ನಿಗದಿಪಡಿಸದಿದ್ದರೆ ಅದರ ಪ್ರಯೋಜನವೇನು? ಕೆಲವು ರಾಜ್ಯಗಳು ಕೇವಲ 15 ದಿನಗಳ ಹಿಂದಷ್ಟೇ 12ನೇ ತರಗತಿ ಫಲಿತಾಂಶವನ್ನು ಪ್ರಕಟಿಸಿವೆ ಎಂದು ಬೆಂಗಳೂರಿನ ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರೊಬ್ಬರು ಹೇಳುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾಕ್‌ನಲ್ಲಿ ಅಮೆರಿಕ-ಸೌದಿ ಜಂಟಿ ವಾಯುದಾಳಿ: ಇರಾನ್ ಬೆಂಬಲಿತ ಉಗ್ರ ನೆಲೆಗಳು ಧ್ವಂಸ, ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ..!

ಸುಪ್ರೀಂನ ಮಧ್ಯಂತರ ಆದೇಶ ವಿದ್ಯಾರ್ಥಿಗಳ ವಿರುದ್ಧ ದುರ್ಬಳಕೆಯಾಗುವ ಸಾಧ್ಯತೆ: 'ಕಿರುಕುಳ' ಮುಂದುವರಿದರೆ ಸರಿ ಇರಲ್ಲ- ದೀಪ್ಕೆ ವಾರ್ನಿಂಗ್!

ಪ್ರಹ್ಲಾದ್ ಜೋಶಿ ಕೊಳಕು ಮನುಷ್ಯ; ಅತ್ಯಾಚಾರಿಯನ್ನು ರಕ್ಷಿಸುವವರು ನೂತನ ಶಿಕ್ಷಣ ಸಚಿವರಾಗಿದ್ದಾರೆ: ರಾಹುಲ್ ಗಂಭೀರ ಆರೋಪ, Video

Gen-Z ಗಳಿಗೆ ʻಜನರೇಷನ್‌ ಗಟರ್‌ʼಎಂದ ಕಂಗನಾ ರಣಾವತ್; ಅವರನ್ನು ಬಿಜೆಪಿಯೇ ಗಂಭೀರವಾಗಿ ಪರಿಗಣಿಸಿಲ್ಲ, ಸಿಜೆಪಿ ತಿರುಗೇಟು! Video

ದೆಹಲಿಗೆ ಬಂದು ನಾಟಕವಾಡುವ ನಿಮಗೆ KPSC ಹಗರಣ ಅನ್ಯಾಯ ಅನಿಸಲಿಲ್ಲವೇ?: ಲೋಕಸಭೆಯಲ್ಲಿ ಸಿಎಂ ಶಿವಕುಮಾರ್ ವಿರುದ್ಧ ತೇಜಸ್ವಿ ವಾಗ್ದಾಳಿ!