ಅಂಗವಿಕಲನಂತೆ ನಟಿಸಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿ 
ರಾಜ್ಯ

ಅಂಗವಿಕಲನಂತೆ ನಟಿಸಿ ಭಿಕ್ಷೆ, ಮೊಬೈಲ್ ಕಳ್ಳತನದ ಆರೋಪ! ಬೆಂಗಳೂರಿನಲ್ಲಿ ಉತ್ತರ ಪ್ರದೇಶ ಮೂಲದ ವ್ಯಕ್ತಿ ಸೆರೆ, Video

ಬೆಂಗಳೂರಿನ ಬ್ಯಾಟರಾಯನಪುರ ಸಮೀಪದ ಐಟಿಐ ಲೇಔಟ್ ನಲ್ಲಿ ಈ ಘಟನೆ ನಡೆದಿದ್ದು, ಬಂಧಿತ ಆರೋಪಿಯನ್ನು ಮುಕೇಶ್ ಎಂದು ಗುರುತಿಸಲಾಗಿದೆ.

ಬೆಂಗಳೂರು: ಅಂಗವಿಕಲನಂತೆ ನಟಿಸಿ ಭಿಕ್ಷೆ ಬೇಡುತ್ತಾ ಜನರ ಮೊಬೈಲ್ ಕಳವು ಮಾಡುತ್ತಿದ್ದಾನೆ ಎಂಬ ಆರೋಪದ ಮೇಲೆ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬನನ್ನು ಸ್ಥಳೀಯರೇ ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬೆಂಗಳೂರಿನ ಬ್ಯಾಟರಾಯನಪುರ ಸಮೀಪದ ಐಟಿಐ ಲೇಔಟ್ ನಲ್ಲಿ ಈ ಘಟನೆ ನಡೆದಿದ್ದು, ಬಂಧಿತ ಆರೋಪಿಯನ್ನು ಮುಕೇಶ್ ಎಂದು ಗುರುತಿಸಲಾಗಿದೆ.

ಆತ ಕಾಲು ಊನವಾದಂತೆ ಕುಂಟುತ್ತಾ ನಡೆದು ಜನರ ಅನುಕಂಪ ಗಳಿಸಿ ಭಿಕ್ಷೆ ಬೇಡುತ್ತಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅನುಮಾನಗೊಂಡ ಸ್ಥಳೀಯರು ಹಿಡಿದು ವಿಚಾರಣೆ

ಇತ್ತೀಚಿನ ದಿನಗಳಲ್ಲಿ ಆತನ ಚಲನವಲನ ಅನುಮಾನಾಸ್ಪದವಾಗಿದ್ದರಿಂದ ಸ್ಥಳೀಯರು ಆತನನ್ನು ತಡೆದು ಪ್ರಶ್ನಿಸಿದ್ದಾರೆ. ಈ ವೇಳೆ ಆತ ನಿಜವಾಗಿ ಅಂಗವಿಕಲನಲ್ಲ ಎಂಬುದು ಬೆಳಕಿಗೆ ಬಂದಿರುವುದಾಗಿ ಹೇಳಲಾಗಿದೆ.

ಸ್ಥಳೀಯರ ಪ್ರಕಾರ, ಮುಕೇಶ್ ಯಾವುದೇ ದೈಹಿಕ ಅಂಗವೈಕಲ್ಯವಿಲ್ಲದಿದ್ದರೂ ಅಂಗವಿಕಲನಂತೆ ನಟಿಸಿ ಭಿಕ್ಷೆ ಬೇಡುವ ನೆಪದಲ್ಲಿ ಮೊಬೈಲ್‌ಗಳನ್ನು ಕಳವು ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.

ನೇರವಾಗಿ ನಿಂತು ಕ್ಷಮೆ ಕೇಳಿದ ಆರೋಪಿ!

ಇತ್ತ ಸ್ಥಳೀಯರು ಪ್ರಶ್ನಿಸಿದ ಬಳಿಕ ಮುಕೇಶ್ ನೇರವಾಗಿ ನಿಂತು ಕೈಮುಗಿದು ಕ್ಷಮೆ ಕೇಳಿದನೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಬಳಿಕ ನಿವಾಸಿಗಳು ಆತನನ್ನು ಪೊಲೀಸರಿಗೆ ಒಪ್ಪಿಸಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ವಿಡಿಯೊ

ಈ ಘಟನೆಯ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪೊಲೀಸರು ವೈರಲ್ ವಿಡಿಯೊಗಳನ್ನೂ ಪರಿಶೀಲಿಸುತ್ತಿದ್ದು, ಮೊಬೈಲ್ ಕಳವು ಆರೋಪ ಸೇರಿದಂತೆ ಪ್ರಕರಣದ ಎಲ್ಲ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಪಕ್ಷಗಳ ಗದ್ದಲದ ನಡುವೆ ಸಾರ್ವಜನಿಕ ಪರೀಕ್ಷೆಗಳ ಅಕ್ರಮ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ!

ವಂದೇ ಮಾತರಂ ಅವಮಾನಿಸುವುದು ಶಿಕ್ಷಾರ್ಹ ಅಪರಾಧ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ!

ಬಾಂಗ್ಲಾದವರ ಬಗ್ಗೆ ಮಾಹಿತಿ ಕೊಟ್ಟ 15 ನಿಮಿಷದಲ್ಲೇ ಭಾರತೀಯನ ವಿರುದ್ಧವೇ ಹಲ್ಲೆ ಕೇಸ್: ನಿಮ್ಮ ಓಲೈಕೆ ನಿಲ್ಲಿಸಿ, ಸರ್ಕಾರಕ್ಕೆ ಹೈಕೋರ್ಟ್ ಚಾಟಿ!

ಪಂಜಾಬ್ ವಿವಿಯಲ್ಲಿ ಘೋರ ದುರಂತ: ಕ್ಯಾಂಪಸ್‌ನಲ್ಲೇ ವಿದ್ಯುತ್ ತಗುಲಿ ಪಿಎಚ್‌ಡಿ ವಿದ್ಯಾರ್ಥಿನಿ ಸಾವು; ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ

Neet ಪ್ರಶ್ನೆ ಪತ್ರಿಕೆ ಸೋರಿಕೆ: ಅಂಧಭಕ್ತ.. ಈಡಿಯಟ್.. RSS, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ, ಸಂಸತ್ ನಲ್ಲಿ ಹೈಡ್ರಾಮಾ