ಅಮಾನತು (ಸಾಂಕೇತಿಕ ಚಿತ್ರ) online desk
ರಾಜ್ಯ

ಕಚೇರಿ ಸಮಯದಲ್ಲಿ ಎಣ್ಣೆ ಪಾರ್ಟಿ ವಿಡಿಯೋ ವೈರಲ್: 6 PDO ಸೇರಿ 9 ಗ್ರಾಮ ಪಂಚಾಯತ್ ಸಿಬ್ಬಂದಿ ಅಮಾನತು

ಮಾಧ್ಯಮಗಳ ವರದಿ ಗಮನಿಸಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರು, ಪಾರ್ಟಿಯಲ್ಲಿ ಭಾಗವಹಿಸಿದವರಿಗೆ ಶೋ-ಕಾಸ್ ನೋಟಿಸ್ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.

ಬೆಂಗಳೂರು: ಕಚೇರಿ ಸಮಯದಲ್ಲಿ ಎಣ್ಣೆ ಪಾರ್ಟಿ ಮಾಡಿದ ಆರೋಪದ ಮೇಲೆ ರಾಜ್ಯ ಸರ್ಕಾರ ಬುಧವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್‌ಗಳ ಆರು ಪಿಡಿಒಗಳು ಸೇರಿದಂತೆ ಸಿಬ್ಬಂದಿಯನ್ನು ಅಮಾನತು ಮಾಡಿದೆ.

ಅಧಿಕಾರಿಗಳು ಸಿದ್ದರಬೆಟ್ಟದ ತಪ್ಪಲಿನಲ್ಲಿ ಸಭೆ ಸೇರಿದ್ದು, ಅಲ್ಲಿ ಅವರು ಕಚೇರಿ ಸಮಯದಲ್ಲಿ ಮದ್ಯ ಮತ್ತು ಮಾಂಸ ಸೇವಿಸಿದ್ದಾರೆ. ಅಲ್ಲದೆ ಮನರಂಜನಾ ಚಟುವಟಿಕೆಗಳಲ್ಲಿ ತೊಡಗಿದ್ದರು ಎಂದು ಮಾಧ್ಯಮಗಳು ವರದಿ ಮಾಡಿದ್ದನ್ನು ಅನುಸರಿಸಿ ಈ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್​ಗಳ ಅಭಿವೃದ್ಧಿ ಅಧಿಕಾರಿ, ಇಬ್ಬರು ಕಾರ್ಯದರ್ಶಿ ಮತ್ತು ಒಬ್ಬ ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಶುಕ್ರವಾರ ಸಂಜೆ ಸಿದ್ದರಬೆಟ್ಟದ ಬಳಿ ಮದ್ಯ, ಮಾಂಸ ಸೇವಿಸಿ ಮೋಜು ಮಸ್ತಿ ಮಾಡಿದ ಬಗ್ಗೆ ಹಲವು ಮಾಧ್ಯಮಗಳಲ್ಲಿ ವಿಡಿಯೋ ಸಹಿತ ವರದಿ ಪ್ರಸಾರವಾಗಿತ್ತು.

ಮಾಧ್ಯಮಗಳ ವರದಿ ಗಮನಿಸಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರು, ಪಾರ್ಟಿಯಲ್ಲಿ ಭಾಗವಹಿಸಿದವರಿಗೆ ಶೋ-ಕಾಸ್ ನೋಟಿಸ್ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.

ಬಳಿಕ ಈ ಪಾರ್ಟಿಯಲ್ಲಿ ಪಾಲ್ಗೊಂಡ ಎಲ್ಲರಿಗೂ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ಕರ್ತವ್ಯದ ಸಮಯದಲ್ಲಿ ಒಂದು ಕಡೆ ಸೇರಿ ಪಾರ್ಟಿ ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ.

ಸಚಿವರ ನಿರ್ದೇಶನದ ಮೇರೆಗೆ ಕಾರ್ಯನಿರ್ವಹಿಸಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಸಂತಿ ಅಮರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಶೋ-ಕಾಸ್ ನೋಟಿಸ್‌ಗಳನ್ನು ನೀಡಿದರು ಮತ್ತು ನಂತರ ಇಲಾಖಾ ವಿಚಾರಣೆಯವರೆಗೆ ಅವರನ್ನು ಅಮಾನತುಗೊಳಿಸಿ ಆದೇಶಿಸಿ ಹೊರಡಿಸಿದ್ದಾರೆ.

ಗ್ರಾಮ ಪಂಚಾಯತ್​ ಅಭಿವೃದ್ಧಿ ಅಧಿಕಾರಿಗಳಾದ ಶಿವಗಂಗೆ ಗ್ರಾಮ ಪಂಚಾಯತ್​ನ ಗಿರೀಶ್; ಅಗಳಕುಪ್ಪೆ ಗ್ರಾ. ಪಂಚಾಯತ್​ನ ಹರೀಶ್, ಗೊಲ್ಲಹಳ್ಳಿ ಗ್ರಾಮ ಪಂಚಾಯತ್​ನ ಪ್ರಶಾಂತ್ ಡಿ, ಮಣ್ಣೆ ಗ್ರಾಮ ಪಂಚಾಯತ್​ನ ಚಿರಂಜೀವಿ, ಸೋಂಪುರ ಗ್ರಾಮ ಪಂಚಾಯತ್​ನ ರವಿಶಂಕರ್, ಬೆಟ್ಟಕೋಟೆ ಗ್ರಾಮ ಪಂಚಾಯತ್​ನ ದಿನೇಶ್ ಬಿ.ಎಂ, ಅಗಳಕುಪ್ಪೆ ಗ್ರೇಡ್ 1 ಕಾರ್ಯದರ್ಶಿ ಕೆಂಪರಂಗಯ್ಯ, ಬೂದಿಹಾಲ್ ಗ್ರಾಮ ಪಂಚಾಯತ್​ನ ಗ್ರೇಡ್ 2 ಕಾರ್ಯದರ್ಶಿ ಗಂಗಾಧರ್, ಸೋಂಪುರ ಗ್ರಾಮ ಪಂಚಾಯತ್​ನ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಮಂಜುನಾಥ್ ಅವರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿದ್ಯಾರ್ಥಿಗಳ ಮೇಲೆ ಪೆಲ್ಲೆಟ್ ಗುಂಡಿನ ದಾಳಿ: ಶಾ ಅವರೇ ಆದೇಶ ನೀಡಿದ್ದಾರೆ, ಇಲ್ಲವೇ ಅವರು ಅಸಮರ್ಥರು! ವಜಾಗೊಳಿಗೊಳಿಸಿ, ಪ್ರಧಾನಿಗೆ ರಾಹುಲ್ ಒತ್ತಾಯ

ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ಯಶಸ್ಸು ಗೌತಮ್ ಗಂಭೀರ್ ಮೇಲೆ ಒತ್ತಡ ಹೇರಲಿದೆ: RCB ಮಾಜಿ ಬ್ಯಾಟರ್ ಡಿವಿಲಿಯರ್ಸ್

ರಾಜ್ಯದಲ್ಲಿ SIR ಶಾಕ್! ಮತದಾರರ ಪಟ್ಟಿಯಿಂದ 84.31 ಲಕ್ಷ ಮಂದಿ ಡಿಲೀಟ್; ಬೆಂಗಳೂರಿನಲ್ಲಿಯೇ ಅತಿ ಹೆಚ್ಚು- ಚುನಾವಣಾ ಆಯೋಗ

ಕಂಟೆಂಟ್ ಕ್ರಿಯೇಟರ್ ಆಗಲು ₹35 ಲಕ್ಷ ಸಂಬಳದ ಉದ್ಯೋಗ ತೊರೆದ ಟೆಕ್ಕಿ ದಂಪತಿ; ಒಂದೇ ವರ್ಷದಲ್ಲಿ ₹1 ಕೋಟಿಗೂ ಹೆಚ್ಚು ಆದಾಯ!

E20 ಇಂಧನದಿಂದ ವಾಹನಗಳ ಭಾಗಗಳಿಗೆ ಹಾನಿ?: ರಾಜ್ಯಸಭೆಯಲ್ಲಿ ಗಡ್ಕರಿ ಕೊಟ್ರು ಬಿಗ್ ಅಪ್ಡೇಟ್!