ಹೈಕೋರ್ಟ್  online desk
ರಾಜ್ಯ

HMT ಸಂಸ್ಥೆಗೆ ಬಿಗ್ ರಿಲೀಫ್: ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಬ್ರೇಕ್, ಒಕ್ಕಲೆಬ್ಬಿಸದಂತೆ ಸೂಚನೆ..!

ವಿವಾದಿತ ಉಳಿದ ಜಮೀನನ್ನು ಮಾರಾಟ, ಗುತ್ತಿಗೆ, ಪರವಾನಗಿ ನೀಡುವುದು ಅಥವಾ ಯಾವುದೇ ರೀತಿಯ ಹಕ್ಕು ಸೃಷ್ಟಿಸುವುದು ಸೇರಿದಂತೆ ಅದರ ಸ್ವರೂಪ ಬದಲಾಗುವ ಯಾವುದೇ ವ್ಯವಹಾರ ನಡೆಸುವುದಿಲ್ಲ.

ಬೆಂಗಳೂರು: ಹೆಚ್ಎಂಟಿ ವಿವಾದಕ್ಕೆ ಸಂಬಂಧಿಸಿದಂತೆ ಮಹತ್ವದ ಮಧ್ಯಂತರ ಆದೇಶ ನೀಡಿರುವ ಕರ್ನಾಟಕ ಹೈಕೋರ್ಟ್, ಮುಂದಿನ ವಿಚಾರಣೆ ನಡೆಯುವವರೆಗೆ ಎಚ್‌ಎಂಟಿ ಲಿಮಿಟೆಡ್ ಅನ್ನು ತೆರವುಗೊಳಿಸಬಾರದು ಎಂದು ರಾಜ್ಯ ಸರ್ಕಾರ ಹಾಗೂ ಅರಣ್ಯ ಇಲಾಖೆಗೆ ನಿರ್ದೇಶನ ನೀಡಿದೆ.

ಅದೇ ವೇಳೆ, ಈಗಾಗಲೇ ತೃತೀಯ ವ್ಯಕ್ತಿಗಳಿಗೆ ಮಾರಾಟವಾಗಿರುವ ಜಾಗವನ್ನು ಹೊರತುಪಡಿಸಿ ಉಳಿದ ಪ್ರದೇಶದಲ್ಲಿ ಯಾವುದೇ ಮರಗಳನ್ನು ಕಡಿಯಬಾರದು ಎಂದೂ ಹೆಚ್‌ಎಂಟಿ ಲಿಮಿಟೆಡ್‌ಗೂ ಸೂಚಿಸಿದೆ.

ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರು ಈ ಮಧ್ಯಂತರ ಆದೇಶ ನೀಡಿದ್ದು, ನಗರದಲ್ಲಿರುವ 430 ಎಕರೆ 21.853 ಗುಂಟೆ ಜಮೀನನ್ನು ಸರ್ಕಾರಕ್ಕೆ ಹಸ್ತಾಂತರಿಸುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಜೂನ್ 16ರಂದು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಎಚ್‌ಎಂಟಿ ಲಿಮಿಟೆಡ್ ಹಾಗೂ ಎಚ್‌ಎಂಟಿ ಮಷಿನ್ ಟೂಲ್ಸ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಎಚ್‌ಎಂಟಿ ಪರ ವಕೀಲರು, ಸಂಸ್ಥೆಯ ಅಧ್ಯಕ್ಷರ ಸೂಚನೆಯಂತೆ, ವಿವಾದಿತ ಉಳಿದ ಜಮೀನನ್ನು ಮಾರಾಟ, ಗುತ್ತಿಗೆ, ಪರವಾನಗಿ ನೀಡುವುದು ಅಥವಾ ಯಾವುದೇ ರೀತಿಯ ಹಕ್ಕು ಸೃಷ್ಟಿಸುವುದು ಸೇರಿದಂತೆ ಅದರ ಸ್ವರೂಪ ಬದಲಾಗುವ ಯಾವುದೇ ವ್ಯವಹಾರ ನಡೆಸುವುದಿಲ್ಲ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದರು. ಈ ಹೇಳಿಕೆಯನ್ನು ನ್ಯಾಯಾಲಯ ದಾಖಲಿಸಿಕೊಂಡಿತು.

ಅರ್ಜಿಯಲ್ಲಿ, ಕರ್ನಾಟಕ ಅರಣ್ಯ ಕಾಯ್ದೆಯ ಸೆಕ್ಷನ್ 64(ಎ) ಅಡಿಯಲ್ಲಿ ಜೂನ್ 15ರಂದು ಆದೇಶ ಹೊರಡಿಸಲಾಗಿದ್ದು, ಅದರ ಪ್ರತಿಯನ್ನು ಜುಲೈ 2ರಂದು ಅರ್ಜಿದಾರರಿಗೆ ನೀಡಲಾಗಿದೆ ಎಂದು ತಿಳಿಸಲಾಗಿದೆ.

ಈ ವರ್ಷದ ಜನವರಿ 6ರಂದು ಆದೇಶ ಕಾಯ್ದಿರಿಸಲಾಗಿದ್ದರೂ, ಹಲವು ತಿಂಗಳ ಬಳಿಕ ತಡವಾಗಿ ಆದೇಶ ಹೊರಡಿಸಿರುವುದು ದುರುದ್ದೇಶಪೂರಿತ ಕ್ರಮವನ್ನು ಸೂಚಿಸುತ್ತದೆ ಎಂದು ಎಚ್‌ಎಂಟಿ ಆರೋಪಿಸಿದೆ. ಪ್ರಕರಣದ ಮುಂದಿನ ವಿಚಾರಣೆ ನಡೆಯುವವರೆಗೆ ಈ ಮಧ್ಯಂತರ ಆದೇಶ ಜಾರಿಯಲ್ಲಿರಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷಾಂತರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: DCC ಅಧ್ಯಕ್ಷರ ನೇಮಕಕ್ಕೆ ಹೊಸ ತಂತ್ರ, ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ಫುಲ್ ಕಂಟ್ರೋಲ್...!

ಇನ್ನಿಬ್ಬರು DCM ನೇಮಕಕ್ಕೆ ಕಾಂಗ್ರೆಸ್ ಕಸರತ್ತು? 'ನನಗೂ ಅವಕಾಶ ಸಿಗುವ ವಿಶ್ವಾಸವಿದೆ' ಎಂದ ಸತೀಶ್ ಜಾರಕಿಹೊಳಿ..!

ಮತದಾರರ ಪಟ್ಟಿಯಿಂದ 84 ಲಕ್ಷ ಹೆಸರು ಡಿಲೀಟ್? ಸ್ಪಷ್ಟನೆ ಕೊಟ್ಟ CEO, ಹೇಳಿದ್ದೇನು..?

ವಿದ್ಯಾರ್ಥಿಗಳ ಮೇಲೆ ಪೆಲ್ಲೆಟ್ ಗುಂಡಿನ ದಾಳಿ: ಶಾ ಅವರೇ ಆದೇಶ ನೀಡಿದ್ದಾರೆ, ಇಲ್ಲವೇ ಅವರು ಅಸಮರ್ಥ; ವಜಾಗೊಳಿಗೊಳಿಸಿ- ಪ್ರಧಾನಿಗೆ ರಾಹುಲ್ ಒತ್ತಾಯ

CWRC ಆದೇಶದ ವಿರುದ್ಧ ಮೇಲ್ಮನವಿ: ಕಾವೇರಿ ಜಲಾನಯನ ಪ್ರದೇಶದ ಪರಿಸ್ಥಿತಿ ಅರಿಯಲು ಸಿಎಂ ವಿಜಯ್ ಗೆ ಹೆಲಿಕಾಪ್ಟರ್ ವ್ಯವಸ್ಥೆ- ಸಿಎಂ ಡಿಕೆ ಶಿವಕುಮಾರ್!