ಮಿಸ್ ಯೂನಿವರ್ಸ್ ಇಂಡಿಯಾ 2026  
ರಾಜ್ಯ

ಬೆಂಗಳೂರಿನಲ್ಲಿ Miss Universe India 2026: ಸ್ವಿಮ್‌ಸೂಟ್ ಸುತ್ತಿನಲ್ಲಿ ಮಿಂಚಿದ 52 ಫೈನಲಿಸ್ಟ್‌ಗಳು..!

ಸ್ವಿಮ್‌ಸೂಟ್ ಸುತ್ತು ಸ್ಪರ್ಧೆಯ ಪ್ರಮುಖ ಹಂತಗಳಲ್ಲಿ ಒಂದಾಗಿದ್ದು, ಸ್ಪರ್ಧಿಗಳ ಆತ್ಮವಿಶ್ವಾಸ, ವ್ಯಕ್ತಿತ್ವ, ವೇದಿಕೆ ಮೇಲಿನ ನಡಿಗೆ ಹಾಗೂ ಒಟ್ಟಾರೆ ಪ್ರಸ್ತುತಿಯನ್ನು ತೀರ್ಪುಗಾರರು ಸೂಕ್ಷ್ಮವಾಗಿ ಪರಿಶೀಲಿಸಿದರು.

ಬೆಂಗಳೂರು: ಮಿಸ್ ಯೂನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಸ್ವಿಮ್‌ಸೂಟ್ ಸುತ್ತು ಬುಧವಾರ ಬೆಂಗಳೂರಿನ ವಂಡರ್‌ಲಾದಲ್ಲಿ ಅದ್ದೂರಿಯಾಗಿ ನಡೆಯಿತು.

ದೇಶದ ವಿವಿಧ ರಾಜ್ಯಗಳಿಂದ ಆಯ್ಕೆಯಾಗಿರುವ 52 ಫೈನಲಿಸ್ಟ್‌ಗಳು ಪೂಲ್‌ಸೈಡ್ ರ್ಯಾಂಪ್‌ನಲ್ಲಿ ಆತ್ಮವಿಶ್ವಾಸದಿಂದ ಹೆಜ್ಜೆ ಹಾಕಿ ತೀರ್ಪುಗಾರರ ಗಮನ ಸೆಳೆದರು.

ಗ್ರ್ಯಾಂಡ್ ಫಿನಾಲೆಗೂ ಮುನ್ನ ಸ್ಪರ್ಧೆ ನಿರ್ಣಾಯಕ ಹಂತ ತಲುಪಿದ್ದು, ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆಗಳ ಮಾನದಂಡಗಳ ಆಧಾರದ ಮೇಲೆ ಸ್ಪರ್ಧಿಗಳ ಪ್ರದರ್ಶನವನ್ನು ಮೌಲ್ಯಮಾಪನ ಮಾಡಲಾಯಿತು.

ಸ್ವಿಮ್‌ಸೂಟ್ ಸುತ್ತು ಸ್ಪರ್ಧೆಯ ಪ್ರಮುಖ ಹಂತಗಳಲ್ಲಿ ಒಂದಾಗಿದ್ದು, ಸ್ಪರ್ಧಿಗಳ ಆತ್ಮವಿಶ್ವಾಸ, ವ್ಯಕ್ತಿತ್ವ, ವೇದಿಕೆ ಮೇಲಿನ ನಡಿಗೆ ಹಾಗೂ ಒಟ್ಟಾರೆ ಪ್ರಸ್ತುತಿಯನ್ನು ತೀರ್ಪುಗಾರರು ಸೂಕ್ಷ್ಮವಾಗಿ ಪರಿಶೀಲಿಸಿದರು.

ಈ ಬಾರಿ ಸ್ಪರ್ಧೆಯಲ್ಲಿ ದೇಶದ ವಿವಿಧ ಭಾಗಗಳಿಂದ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಹಿನ್ನೆಲೆಯಿಂದ ಬಂದಿರುವ ಸ್ಪರ್ಧಿಗಳು ಭಾಗವಹಿಸಿದ್ದು, ಭಾರತದ ಸಾಂಸ್ಕೃತಿಕ ವೈವಿಧ್ಯತೆಯೂ ಕಾರ್ಯಕ್ರಮದಲ್ಲಿ ಪ್ರತಿಬಿಂಬಿತವಾಯಿತು.

ಇದಕ್ಕೂ ಮುನ್ನ ಸ್ಯಾಶಿಂಗ್ ಸಮಾರಂಭ, ಪರಿಚಯಾತ್ಮಕ ರ್ಯಾಂಪ್ ವಾಕ್, ಭಾಷಣ ಸುತ್ತು ಹಾಗೂ ಗಾಲಾ ಡಿನ್ನರ್ ಸೇರಿದಂತೆ ಹಲವು ಸುತ್ತುಗಳು ಯಶಸ್ವಿಯಾಗಿ ನಡೆದಿದ್ದವು.

ಗ್ರ್ಯಾಂಡ್ ಫಿನಾಲೆಗೂ ಮುನ್ನ ಇನ್ನೂ ಹಲವು ಮೌಲ್ಯಮಾಪನ ಸುತ್ತುಗಳು ನಡೆಯಲಿದ್ದು, ಬಳಿಕ ಎಲ್ಲ ಫೈನಲಿಸ್ಟ್‌ಗಳು ಆಗಸ್ಟ್ 23ರಂದು ಜೈಪುರದಲ್ಲಿ ನಡೆಯಲಿರುವ ಅಂತಿಮ ಸುತ್ತಿನಲ್ಲಿ ಭಾಗವಹಿಸಲಿದ್ದಾರೆ.

ಮಿಸ್ ಯೂನಿವರ್ಸ್ ಇಂಡಿಯಾ 2026 ಕಿರೀಟ ಗೆಲ್ಲುವ ಸ್ಪರ್ಧಿಗೆ ಭಾರತವನ್ನು ಪ್ರತಿನಿಧಿಸಿ ಅಂತಾರಾಷ್ಟ್ರೀಯ ಮಿಸ್ ಯೂನಿವರ್ಸ್ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ಲಭಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಭಟನಾನಿರತ ವಿದ್ಯಾರ್ಥಿ ವಿರುದ್ಧ ಪೆಲೆಟ್ ಗನ್ ಬಳಕೆ ವಿವಾದ; ಸಿಬ್ಬಂದಿಗಳ ಬೆನ್ನಿಗೆ ನಿಂತ CRPF ಮುಖ್ಯಸ್ಥ; ‘ನಿರ್ಭಯದಿಂದ ಕರ್ತವ್ಯ ನಿರ್ವಹಿಸುವಂತೆ ಸೂಚನೆ..!

Trump ಎಚ್ಚರಿಕೆ ಬೆನ್ನಲ್ಲೇ Iran ಮೇಲೆ ಅಮೆರಿಕ ಭೀಕರ ದಾಳಿ; ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ, ತೈಲ ಬೆಲೆ ಭಾರೀ ಏರಿಕೆ..!

ಅಧಿವೇಶನಕ್ಕೂ ಮುನ್ನ ಬಸವರಾಜ್ ಹೊರಟ್ಟಿಗೆ ಸರ್ಕಾರ ಶಾಕ್: ಸಭಾಪತಿ ಸ್ಥಾನ ರಾಜೀನಾಮೆ ನೀಡುವಂತೆ ಸೂಚನೆ, ಸಂಘರ್ಷ ಫಿಕ್ಸ್..!

ಪಕ್ಷಾಂತರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: DCC ಅಧ್ಯಕ್ಷರ ನೇಮಕಕ್ಕೆ ಹೊಸ ತಂತ್ರ, ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ಫುಲ್ ಕಂಟ್ರೋಲ್...!

ಇನ್ನಿಬ್ಬರು DCM ನೇಮಕಕ್ಕೆ ಕಾಂಗ್ರೆಸ್ ಕಸರತ್ತು? 'ನನಗೂ ಅವಕಾಶ ಸಿಗುವ ವಿಶ್ವಾಸವಿದೆ' ಎಂದ ಸತೀಶ್ ಜಾರಕಿಹೊಳಿ..!