ಬೆಂಗಳೂರಿನ ಊರ್ವಶಿ ಚಿತ್ರಮಂದಿರದಲ್ಲಿ ಜನ ನಾಯಗನ್ ಚಿತ್ರದ ಪೋಸ್ಟರ್ ತೆರವುಗೊಳಿಸಿರುವುದು 
ರಾಜ್ಯ

ತಮಿಳುನಾಡು ಸಿಎಂ ವಿಜಯ್‌ಗೂ ತಟ್ಟಿದ ಕಾವೇರಿ ಕಿಚ್ಚು: ರಾಜ್ಯದ ಹಲವು ಚಿತ್ರಮಂದಿರಗಳಿಂದ 'ಜನ ನಾಯಗನ್' ಎತ್ತಂಗಡಿ!

ಜುಲೈ 23 ರಂದು ಬಿಡುಗಡೆಯಾದ 'ಜನ ನಾಯಗನ್' ಚಿತ್ರವು ಕರ್ನಾಟಕದಾದ್ಯಂತ ಸುಮಾರು 125 ರಿಂದ 150 ಚಿತ್ರಮಂದಿರಗಳಲ್ಲಿ (75ಕ್ಕೂ ಹೆಚ್ಚು ಸಿಂಗಲ್-ಸ್ಕ್ರೀನ್ ಚಿತ್ರಮಂದಿರಗಳು ಮತ್ತು ಸುಮಾರು 50 ಮಲ್ಟಿಪ್ಲೆಕ್ಸ್ ಸೇರಿದಂತೆ) ಬಿಡುಗಡೆಯಾಗಿತ್ತು.

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಗಳು, ಕರ್ನಾಟಕದಲ್ಲಿ ನಟ ದಳಪತಿ ವಿಜಯ್ ಅವರ 'ಜನ ನಾಯಕನ್' ಚಿತ್ರದ ಮೇಲೆ ಪರಿಣಾಮ ಬೀರಿವೆ.

ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಚಿತ್ರಮಂದಿರಗಳು ವಿಜಯ್ ಅವರ ಚಿತ್ರದ ಪೋಸ್ಟರ್‌ಗಳನ್ನು ತೆರವುಗೊಳಿಸಿವೆ ಮತ್ತು ಚಿತ್ರ ಪ್ರದರ್ಶನವನ್ನು ಸ್ಥಗಿತಗೊಳಿಸಿವೆ. ರೈತರು ಹಾಗೂ ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಅನೇಕ ಚಿತ್ರಮಂದಿರಗಳು 'ಜನ ನಾಯಗನ್' ಚಿತ್ರದ ಪ್ರದರ್ಶನಗಳನ್ನು ರದ್ದುಗೊಳಿಸಿವೆ.

ಜುಲೈ 23 ರಂದು ಬಿಡುಗಡೆಯಾದ 'ಜನ ನಾಯಗನ್' ಚಿತ್ರವು ಕರ್ನಾಟಕದಾದ್ಯಂತ ಸುಮಾರು 125 ರಿಂದ 150 ಚಿತ್ರಮಂದಿರಗಳಲ್ಲಿ (75ಕ್ಕೂ ಹೆಚ್ಚು ಸಿಂಗಲ್-ಸ್ಕ್ರೀನ್ ಚಿತ್ರಮಂದಿರಗಳು ಮತ್ತು ಸುಮಾರು 50 ಮಲ್ಟಿಪ್ಲೆಕ್ಸ್ ಸೇರಿದಂತೆ) ಬಿಡುಗಡೆಯಾಗಿತ್ತು.

ಕಾವೇರಿ ಪ್ರತಿಭಟನೆಗಳು ತೀವ್ರಗೊಂಡಂತೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಗಳನ್ನು ತಪ್ಪಿಸಲು ಹಲವು ಚಿತ್ರಮಂದಿರಗಳ ಮಾಲೀಕರು ಸ್ವಯಂಪ್ರೇರಣೆಯಿಂದ ಚಲನಚಿತ್ರ ಪ್ರದರ್ಶನಗಳನ್ನು ಸ್ಥಗಿತಗೊಳಿಸಿದ್ದಾರೆ. ಕೆಲವು ಚಿತ್ರಮಂದಿರಗಳ ಸಿಬ್ಬಂದಿ ಆವರಣದಲ್ಲಿದ್ದ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳನ್ನು ಸಹ ತೆರವುಗೊಳಿಸಿದ್ದಾರೆ.

ಬೆಂಗಳೂರಿನ ಊರ್ವಶಿ ಚಿತ್ರಮಂದಿರದಲ್ಲಿ, ಪೊಲೀಸರ ಸಲಹೆಯ ಮೇರೆಗೆ 'ಜನ ನಾಯಗನ್' (Jana Nayagan) ಚಿತ್ರದ ಪ್ರದರ್ಶನಗಳನ್ನು ಸ್ಥಗಿತಗೊಳಿಸಲಾಯಿತು. ಚಿತ್ರಮಂದಿರದ ಸಿಬ್ಬಂದಿ ಚಿತ್ರದ ಪೋಸ್ಟರ್‌ಗಳು ಮತ್ತು ಕಟ್-ಔಟ್‌ಗಳನ್ನು ತೆರವುಗೊಳಿಸಿದ್ದಾರೆ ಹಾಗೂ ನಿಗದಿತ ಜನ ನಾಯಗನ್ ಪ್ರದರ್ಶನಗಳ ಬದಲಿಗೆ ಕನ್ನಡ ಚಲನಚಿತ್ರ 'ಕರಾವಳಿ'ಯನ್ನು ಪ್ರದರ್ಶಿಸಿದ್ದಾರೆ.

ಕರ್ನಾಟಕದಾದ್ಯಂತ ಕಾವೇರಿ ಪ್ರತಿಭಟನೆಗಳು ಮುಂದುವರಿದಿರುವ ಹಿನ್ನೆಲೆಯಲ್ಲಿ, ಯಾವುದೇ ಅಹಿತಕರ ಘಟನೆಗಳನ್ನು ತಡೆಯುವ ಮುನ್ನೆಚ್ಚರಿಕೆ ಕ್ರಮವಾಗಿ ಊರ್ವಶಿ ಚಿತ್ರಮಂದಿರದ ಹೊರಗೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಕಾವೇರಿ ನದಿ ನೀರು ಹಂಚಿಕೆ ವಿವಾದದ ಹಿನ್ನೆಲೆಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ, ಮಂಡ್ಯದಲ್ಲಿ ಕನ್ನಡ ಪರ ಕಾರ್ಯಕರ್ತರು 'ಜನ ನಾಯಗನ್' (Jana Nayagan) ಚಿತ್ರದ ಪ್ರಚಾರದ ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಾರೆ.

ಜನ ನಾಯಗನ್ ಚಿತ್ರದ ಶೋಗಳ ರದ್ದತಿಗೆ ಸಂಬಂಧಿಸಿದಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಸಭೆ ಕರೆದಿದೆ.

ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು (CWRC) ನೀಡಿದ್ದ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು (CWMA) ಎತ್ತಿಹಿಡಿದಿದೆ.

ಕರ್ನಾಟಕವೇ ನೀರಿನ ಕೊರತೆಯನ್ನು ಎದುರಿಸುತ್ತಿದ್ದು, ನೀರನ್ನು ಬಿಡುಗಡೆ ಮಾಡುವುದರಿಂದ ರಾಜ್ಯದ ರೈತರಿಗೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ ಎಂದು ವಾದಿಸಿ, ಕನ್ನಡ ಪರ ಸಂಘಟನೆಗಳು ಮತ್ತು ರೈತರು ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ಜಲ ವಿವಾದ: ಆಗಸ್ಟ್ 13ರಂದು ಅಖಂಡ ಕರ್ನಾಟಕ ಬಂದ್; ವಾಟಾಳ್ ನಾಗರಾಜ್ ಘೋಷಣೆ

'ಒಣಗಿಹೋದ ಕುರುವೈ ಭತ್ತ ನೋಡಲು ಡಿಕೆ ಶಿವಕುಮಾರನ್ನೇ ತಮಿಳುನಾಡಿಗೆ ಕರೆ ತನ್ನಿ': ಸಿಎಂ ವಿಜಯ್‌ಗೆ ಡೆಲ್ಟಾ ಜಿಲ್ಲೆಗಳ ರೈತರ ಆಗ್ರಹ!

ತಮಿಳು ನಾಡಿಗೆ ಹೆಚ್ಚಿನ ನೀರು ಬಿಟ್ಟಿಲ್ಲ, ಸಿಎಂ ವಿಜಯ್ ಭೇಟಿ ಮುಂದೂಡಿಕೆ: CM ಡಿ ಕೆ ಶಿವಕುಮಾರ್-Video

Russia-Ukraine war: ಸಂಕಷ್ಟದಲ್ಲಿರುವ ಭಾರತೀಯರ ಕುಟುಂಬಗಳಿಗೆ ನೆರವು; Nodal ಅಧಿಕಾರಿ ನೇಮಿಸುವಂತೆ ಕೇಂದ್ರ ಸರ್ಕಾರಕ್ಕೆ Supreme Court ಸೂಚನೆ

Parliament Monsoon Session: ಸಂಸತ್‌ನಲ್ಲಿ ಮತ್ತೆ ಹೈಡ್ರಾಮಾ; ಅಮಿತ್ ಶಾ ವಿಚಾರವಾಗಿ ಭಾರೀ ಗದ್ದಲ, Lok Sabha-Rajya Sabha ಕಲಾಪ ಸೋಮವಾರಕ್ಕೆ ಮುಂದೂಡಿಕೆ..!