ಎಚ್ ಡಿ ಕುಮಾರಸ್ವಾಮಿ 
ರಾಜ್ಯ

ಕಾವೇರಿ ನೀರು ಹಂಚಿಕೆ ವಿವಾದ: AC ರೂಮ್‌ ನಲ್ಲಿ ಕೂತು ತೀರ್ಮಾನ ಸರಿಯಲ್ಲ- ಹೆಚ್.ಡಿ. ಕುಮಾರಸ್ವಾಮಿ

ಸಿಡಬ್ಲ್ಯುಎಂಎ ಸದಸ್ಯರು ಕರ್ನಾಟಕ ಮತ್ತು ತಮಿಳುನಾಡಿನ ಜಲಾಶಯಗಳಾದ ಕೆಆರ್‌ಎಸ್‌, ಹಾರಂಗಿ, ಕಬಿನಿ, ಹೇಮಾವತಿ ಮತ್ತು ಮೆಟ್ಟೂರು ಪ್ರದೇಶಗಳಿಗೆ ಭೇಟಿ ನೀಡಿ, ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿ ಆ ನಂತರ ನಿರ್ಧರಿಸಿ.

ಹಾಸನ: ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿದ್ದ ಆದೇಶ ಎತ್ತಿಹಿಡಿದಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಅವರು ದೆಹಲಿಯ ಎಸಿ ರೂಮ್‌ ಗಳಲ್ಲಿ ಕೂತು ಈ ನಿರ್ಧಾರವನ್ನ ತೆಗೆದುಕೊಳ್ಳುವ ಬದಲು, ಸಿಡಬ್ಲ್ಯುಎಂಎ ಸದಸ್ಯರು ಕರ್ನಾಟಕ ಮತ್ತು ತಮಿಳುನಾಡಿನ ಜಲಾಶಯಗಳಾದ ಕೆಆರ್‌ಎಸ್‌, ಹಾರಂಗಿ, ಕಬಿನಿ, ಹೇಮಾವತಿ ಮತ್ತು ಮೆಟ್ಟೂರು ಪ್ರದೇಶಗಳಿಗೆ ಭೇಟಿ ನೀಡಿ, ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿ ಆ ನಂತರ ನಿರ್ಧರಿಸಿ ಎಂದು ಸಲಹೆ ನೀಡಿದರು.

ಕರ್ನಾಟಕದಲ್ಲಿ ಸದ್ಯ ಲಭ್ಯವಿರುವ 54ರಿಂದ 55 ಟಿಎಂಸಿ ನೀರಲ್ಲಿ, 10 ಟಿಎಂಸಿ ಡೆಡ್ ಸ್ಟೋರೇಜ್ ಆಗಿದೆ. ಉಳಿದ 44 ಟಿಎಂಸಿಯಲ್ಲಿ ಬೆಂಗಳೂರು ನಗರದ ಕುಡಿಯುವ ನೀರಿಗಾಗಿ 30 ಟಿಎಂಸಿ ಮತ್ತು ಪರಿಸರ ಸಂರಕ್ಷಣೆಗೆ 10 ಟಿಎಂಸಿ ಅಗತ್ಯವಿದೆ.

ಇಂತಹ ಸಂದರ್ಭದಲ್ಲಿ, ಮುಂದೆ ಹರಿಯುವ ನೀರನ್ನು ಆಧರಿಸಿ, ಅಂದಾಜು ಲೆಕ್ಕಾಚಾರದ ಮೇಲೆ ನೀರು ಬಿಡುಗಡೆ ಮಾಡಲು ಆದೇಶಿಸುವುದು ಸರಿಯಲ್ಲ ಎಂದು ಹೆಚ್ ಡಿಕೆ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ಜಲ ವಿವಾದ: ಆಗಸ್ಟ್ 13ರಂದು ಅಖಂಡ ಕರ್ನಾಟಕ ಬಂದ್; ವಾಟಾಳ್ ನಾಗರಾಜ್ ಘೋಷಣೆ

Russia-Ukraine war: ಸಂಕಷ್ಟದಲ್ಲಿರುವ ಭಾರತೀಯರ ಕುಟುಂಬಗಳಿಗೆ ನೆರವು; Nodal ಅಧಿಕಾರಿ ನೇಮಿಸುವಂತೆ ಕೇಂದ್ರ ಸರ್ಕಾರಕ್ಕೆ Supreme Court ಸೂಚನೆ

ಮಹಾರಾಷ್ಟ್ರ: ಭಿವಂಡಿಯಲ್ಲಿ ಕಟ್ಟಡ ಕುಸಿತ; ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿಕೆ; ರಕ್ಷಣಾ ಕಾರ್ಯಾಚರಣೆಯ ವೇಳೆ NDRF ಅಧಿಕಾರಿಗೆ ಗಾಯ; Video

Parliament Monsoon Session: ಸಂಸತ್‌ನಲ್ಲಿ ಮತ್ತೆ ಹೈಡ್ರಾಮಾ; ಅಮಿತ್ ಶಾ ವಿಚಾರವಾಗಿ ಭಾರೀ ಗದ್ದಲ, Lok Sabha-Rajya Sabha ಕಲಾಪ ಸೋಮವಾರಕ್ಕೆ ಮುಂದೂಡಿಕೆ..!

Iranಗೆ ಬೆಂಬಲ ಆರೋಪ: ಭಾರತದ ಕಂಪನಿ ಸೇರಿ 6 ಸಂಸ್ಥೆಗಳ ವಿರುದ್ಧ ಅಮೆರಿಕಾ ಕಠಿಣ ಕ್ರಮ, China-Russia ಸಂಸ್ಥೆಗಳೂ Black listಗೆ..!