ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ 
ರಾಜ್ಯ

ಸರ್ವ ಪಕ್ಷ ಸಭೆಯಲ್ಲಿ ನಿರ್ಧಾರ ಆಗುವವರೆಗೆ ತಮಿಳುನಾಡಿಗೆ ನೀರು ಬಿಡುವುದಿಲ್ಲ: ರಾಮಲಿಂಗಾ ರೆಡ್ಡಿ ಖಡಕ್ ಹೇಳಿಕೆ

ಭಾನುವಾರ ಮುಖ್ಯಮಂತ್ರಿಗಳು ಸರ್ವಪಕ್ಷ ಸಭೆ ಕರೆದಿದ್ದಾರೆ. ವಿಪಕ್ಷಗಳ ಸಲಹೆ ಪಡೆದು ಮುಂದಿನ ತೀರ್ಮಾನ ಮಾಡ್ತೀವಿ. ಸಭೆ ಆಗೋವರೆಗೂ ನೀರು ಬಿಡಲ್ಲ ಎಂದು ಖಡಕ್ಕಾಗಿ ಹೇಳಿದ್ದಾರೆ.

ಬೆಂಗಳೂರು: ಸರ್ವಪಕ್ಷ ಸಭೆಯಲ್ಲಿ ತೀರ್ಮಾನ ಆಗೋವರೆಗೂ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ 15 ದಿನಗಳ ಕಾಲ 3,500 ಕ್ಯೂಸೆಕ್‌ ನೀರು ಹರಿಸಬೇಕೆಂಬ CWMA ಆದೇಶ ಕುರಿತು ಪ್ರತಿಕ್ರಿಯಿಸಿದರು. ಸದ್ಯಕ್ಕೆ ಕುಡಿಯೋ ನೀರಿಗೆ ಸಮಸ್ಯೆಯಿಲ್ಲ, ಆದ್ರೆ ರೈತರಿಗೆ ಬೆಳೆ ಬೆಳೆಯೋಕೆ ನೀರು ಕೊಡಲು ಆಗಲ್ಲ ಎಂದಿದ್ದಾರೆ.

CWMA ನೀರು ಬಿಡೋಕೆ ಹೇಳಿದೆ. ಕಳೆದ 30 ವರ್ಷಗಳಿಂದ ವಾದ ಮಾಡಿದ್ದವರೇ ಈಗಲೂ ವಾದ ಮಾಡಿದ್ದಾರೆ. ಭಾನುವಾರ ಮುಖ್ಯಮಂತ್ರಿಗಳು ಸರ್ವಪಕ್ಷ ಸಭೆ ಕರೆದಿದ್ದಾರೆ. ವಿಪಕ್ಷಗಳ ಸಲಹೆ ಪಡೆದು ಮುಂದಿನ ತೀರ್ಮಾನ ಮಾಡ್ತೀವಿ. ಸಭೆ ಆಗೋವರೆಗೂ ನೀರು ಬಿಡಲ್ಲ ಎಂದು ಖಡಕ್ಕಾಗಿ ಹೇಳಿದ್ದಾರೆ.

CWRC ನಿರ್ಧಾರವನ್ನು ಎತ್ತಿಹಿಡಿದಿದ್ದ CWMA, ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್‌ನಂತೆ ಒಟ್ಟು ಸುಮಾರು 4 ಟಿಎಂಸಿ ನೀರನ್ನು ಹರಿಸುವಂತೆ ಸೂಚಿಸಿತ್ತು. ಆದರೆ, ರಾಜ್ಯದಲ್ಲಿ ಎದುರಾಗಿರುವ ಭೀಕರ ಬರ ಪರಿಸ್ಥಿತಿ ಮತ್ತು ಜಲಾಶಯಗಳಲ್ಲಿನ ನೀರಿನ ಕೊರತೆಯನ್ನು ಗಣನೆಗೆ ತೆಗೆದುಕೊಂಡು, ಭಾನುವಾರದವರೆಗೆ ಯಾವುದೇ ಕಾರಣಕ್ಕೂ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಹಾರಾಷ್ಟ್ರ: ಬಿವಂಡಿಯಲ್ಲಿ ಕಟ್ಟಡ ಕುಸಿತ- ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿಕೆ; ರಕ್ಷಣಾ ಕಾರ್ಯಾಚರಣೆಯ ವೇಳೆ NDRF ಅಧಿಕಾರಿಗೆ ಗಾಯ

Parliament Monsoon Session: ಸಂಸತ್‌ನಲ್ಲಿ ಮತ್ತೆ ಹೈಡ್ರಾಮಾ; ಅಮಿತ್ ಶಾ ವಿಚಾರವಾಗಿ ಭಾರೀ ಗದ್ದಲ, Lok Sabha-Rajya Sabha ಕಲಾಪ ಸೋಮವಾರಕ್ಕೆ ಮುಂದೂಡಿಕೆ..!

Iranಗೆ ಬೆಂಬಲ ಆರೋಪ: ಭಾರತದ ಕಂಪನಿ ಸೇರಿ 6 ಸಂಸ್ಥೆಗಳ ವಿರುದ್ಧ ಅಮೆರಿಕಾ ಕಠಿಣ ಕ್ರಮ, China-Russia ಸಂಸ್ಥೆಗಳೂ Black listಗೆ..!

ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್: ಸೋಮವಾರ ಸಂಜೆ ಪ್ರಮಾಣವಚನ ಸಾಧ್ಯತೆ, 18 ಸಚಿವರ ಸೇರ್ಪಡೆ ನಿರೀಕ್ಷೆ..!

ಪ್ರಶ್ನೆಪತ್ರಿಗೆ ಲೀಕ್ ದಂಧೆಗೆ ಬಿತ್ತು ಬ್ರೇಕ್: 'ಮಕ್ಕಳ ಭವಿಷ್ಯದ ಜೊತೆ ಆಟವಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ': ಸೆಲ್ಫೀ ವಿಡಿಯೋ ಮೂಲಕ ಪ್ರಧಾನಿ ಮೋದಿ ಖಡಕ್ ಎಚ್ಚರಿಕೆ..!