ತಹಶಿಲ್ದಾರ್ ಮತ್ತು ರೈತ ಮಧ್ಯೆ ಮಾತಿನ ಚಕಮಕಿ  
ರಾಜ್ಯ

ಮಂಡ್ಯ: ರೈತನ ಮೇಲೆ ತಹಶೀಲ್ದಾರ್ ಆಕ್ರೋಶ; ವೈರಲ್ ವಿಡಿಯೊಗೆ ವ್ಯಾಪಕ ಆಕ್ರೋಶ

ವಿಡಿಯೊದಲ್ಲಿ ರೈತ ಅಣ್ಣಯ್ಯ ತಮ್ಮ ಸಮಸ್ಯೆಯನ್ನು ತಹಶೀಲ್ದಾರ್ ಮುಂದೆ ವಿವರಿಸುತ್ತಿರುವ ವೇಳೆ, ತಹಶೀಲ್ದಾರ್ ತಾಳ್ಮೆ ಕಳೆದುಕೊಂಡಿರುವುದು ಕಂಡುಬರುತ್ತದೆ. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಪರಿಹರಿಸಬೇಕಾದ ಅಧಿಕಾರಿಯೊಬ್ಬರು ಈ ರೀತಿ ವರ್ತಿಸಿರುವುದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಮಂಡ್ಯ ಜಿಲ್ಲೆ, ಕೆ.ಆರ್. ಪೇಟೆ: ಜಮೀನಿನ ದಾಖಲೆ ಕುರಿತು ಮಾಹಿತಿ ಪಡೆಯಲು ಮಿನಿ ವಿಧಾನಸೌಧಕ್ಕೆ ಬಂದಿದ್ದ ರೈತನನ್ನು 'ಮಧ್ಯವರ್ತಿ' ಎಂದು ಕರೆದು, ಪೊಲೀಸರನ್ನು ಕರೆಸುವುದಾಗಿ ತಹಶಿಲ್ದಾರ್ ಶ್ರೇಯಸ್ ಬೆದರಿಕೆ ಹಾಕಿದ್ದಾರೆ ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೊದಲ್ಲಿ ರೈತ ಅಣ್ಣಯ್ಯ ತಮ್ಮ ಸಮಸ್ಯೆಯನ್ನು ತಹಶೀಲ್ದಾರ್ ಮುಂದೆ ವಿವರಿಸುತ್ತಿರುವ ವೇಳೆ, ತಹಶೀಲ್ದಾರ್ ತಾಳ್ಮೆ ಕಳೆದುಕೊಂಡಿರುವುದು ಕಂಡುಬರುತ್ತದೆ. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಪರಿಹರಿಸಬೇಕಾದ ಅಧಿಕಾರಿಯೊಬ್ಬರು ಈ ರೀತಿ ವರ್ತಿಸಿರುವುದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಘಟನೆ ಕುರಿತು ಸ್ಪಷ್ಟನೆ ನೀಡಿರುವ ತಹಶೀಲ್ದಾರ್ ಶ್ರೇಯಸ್, ತಾವು ಯಾವಾಗಲೂ ರೈತರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಿರುವುದಾಗಿ ಹೇಳಿದ್ದಾರೆ.

ಅಣ್ಣಯ್ಯ ಹಲವು ಕಡತಗಳನ್ನು ತೆಗೆದುಕೊಂಡು ಕಚೇರಿಗೆ ಬಂದಿದ್ದರು. ಅವರು ಸಿಬ್ಬಂದಿ ಮೇಲೆ ಜೋರಾಗಿ ಕೂಗಾಡುತ್ತಿದ್ದರು. ಅವರ ವರ್ತನೆ ನೋಡಿದರೆ ಮದ್ಯದ ಅಮಲಿನಲ್ಲಿದ್ದಂತೆ ಕಂಡುಬಂತು. ಕಚೇರಿಯಲ್ಲಿ ಶಿಸ್ತು ಕಾಪಾಡುವ ಉದ್ದೇಶದಿಂದ ಗಲಾಟೆ ಮುಂದುವರಿಸಿದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದೆ. ಅಮಾಯಕ ನಾಗರಿಕರನ್ನು ಮಧ್ಯವರ್ತಿಗಳು ವಂಚಿಸುವ ಘಟನೆಗಳು ನಡೆಯುತ್ತಿರುತ್ತವೆ. ಆ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಿದ್ದೆ. ಆದರೆ ಅವರ ವಿರುದ್ಧ ಯಾವುದೇ ಪೊಲೀಸ್ ದೂರು ದಾಖಲಿಸಿಲ್ಲ ಎಂದು ಶ್ರೇಯಸ್ ತಿಳಿಸಿದ್ದಾರೆ.

ಇನ್ನೊಂದೆಡೆ, ರೈತ ಅಣ್ಣಯ್ಯ ತಮ್ಮ ನೈಜ ಸಮಸ್ಯೆಯನ್ನು ವಿವರಿಸಲು ತಹಶೀಲ್ದಾರ್ ಅವರನ್ನು ಭೇಟಿಯಾದಾಗ, ತಮಗೆ 'ಮಧ್ಯವರ್ತಿ' ಎಂಬ ಹಣೆಪಟ್ಟಿ ಕಟ್ಟಿದರು. ಅಲ್ಲದೆ, ಸಿಬ್ಬಂದಿಗೆ ತಮ್ಮನ್ನು ಒಂದು ಕೊಠಡಿಯಲ್ಲಿ ಕೂಡಿ ಹಾಕುವಂತೆ ಸೂಚಿಸಿ, ಪೊಲೀಸರನ್ನು ಕರೆಸಿ ಸಾರ್ವಜನಿಕವಾಗಿ ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಹಾರಾಷ್ಟ್ರ: 4 ಅಂತಸ್ತಿನ ಕಟ್ಟಡ ಕುಸಿತ, ಓರ್ವ ಸಾವು; ಅವಶೇಷಗಳ ಅಡಿಯಲ್ಲೇ ಹಲವರು ಸಿಲುಕಿರುವ ಶಂಕೆ

Iranಗೆ ಬೆಂಬಲ ಆರೋಪ: ಭಾರತದ ಕಂಪನಿ ಸೇರಿ 6 ಸಂಸ್ಥೆಗಳ ವಿರುದ್ಧ ಅಮೆರಿಕಾ ಕಠಿಣ ಕ್ರಮ, China-Russia ಸಂಸ್ಥೆಗಳೂ Black listಗೆ..!

ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್: ಸೋಮವಾರ ಸಂಜೆ ಪ್ರಮಾಣವಚನ ಸಾಧ್ಯತೆ, 18 ಸಚಿವರ ಸೇರ್ಪಡೆ ನಿರೀಕ್ಷೆ..!

ಪ್ರಶ್ನೆಪತ್ರಿಗೆ ಲೀಕ್ ದಂಧೆಗೆ ಬಿತ್ತು ಬ್ರೇಕ್: 'ಮಕ್ಕಳ ಭವಿಷ್ಯದ ಜೊತೆ ಆಟವಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ': ಸೆಲ್ಫೀ ವಿಡಿಯೋ ಮೂಲಕ ಪ್ರಧಾನಿ ಮೋದಿ ಖಡಕ್ ಎಚ್ಚರಿಕೆ..!

ಅಂತ್ಯದತ್ತ ಸಾಗಿದ ಇಸ್ರೇಲ್-ಹಮಾಸ್ ಯುದ್ಧ: 14 ದಿನಗಳಲ್ಲಿ ಶಸ್ತ್ರಾಸ್ತ್ರ ಹಸ್ತಾಂತರಕ್ಕೆ ಹಮಾಸ್ ಒಪ್ಪಿಗೆ, ಶಾಂತಿ ಒಪ್ಪಂದ ಘೋಷಿಸಿದ ಟ್ರಂಪ್..!