ಕಲಬುರಗಿ: ಎಮ್ಮೆಯನ್ನು ವಾಪಸ್ ಕರೆತರುವ ಸಲುವಾಗಿ ಭೀಮಾ ನದಿಗೆ ಇಳಿದಿದ್ದ ತಂದೆ ಮಗನ ಕಣ್ಣೆದುರೇ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಮನಕಲಕುವ ಘಟನೆ ಕಲಬುರಗಿಯ ಜೇವರ್ಗಿ ತಾಲೂಕಿನ ಕಟ್ಟಿ ಸಂಗಾವಿ ಗ್ರಾಮದಲ್ಲಿ ನಡೆದಿದೆ.
ಈಜು ಬಾರದಿದ್ದರೂ ವಿಜಯ್ ರಾಜು ಎಂಬುವವರು ನದಿಗೆ ಇಳಿದಿದ್ದರು. ನದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ನೀರು ಸೊಂಟದ ಮೇಲಕ್ಕೆ ಬಂದಿದೆ. ಈ ವೇಳೆ ಈಜಲು ಪ್ರಯತ್ನಿಸಿದ್ದಾರೆ. ಆದರೆ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಲು ಪ್ರಾರಂಭಿಸಿದರು. ಈ ವೇಳೆ ಕಾಪಾಡಿ, ಕಾಪಾಡಿ ಎಂದು ಕೂಗಿದ್ದರೂ ಆದರೆ ದಡದ ಮೇಲೆ ಇದ್ದ ಮಗನಿಗೆ ಏನು ಮಾಡಬೇಕೆಂದು ತೋಚದೆ ಅಸಹಾಯಕನಾಗಿ ನಿಂತಿದ್ದನು. ಇನ್ನು ತಂದೆ ನೀರಿನಲ್ಲಿ ಮುಳುಗುತ್ತಿರುವ ದೃಶ್ಯ ಮಗನ ಮೊಬೈಲ್ ನಲ್ಲಿ ಸೆರೆಯಾಗಿದೆ.