ಶಿವರುದ್ರಮ್ಮ 
ರಾಜ್ಯ

ಮೈಸೂರು: ವೃದ್ಧೆ ಕೊಂದು, ಚಿರತೆ ದಾಳಿ ಎಂದು ಬಿಂಬಿಸಿದ್ದ ವ್ಯಕ್ತಿ ಬಂಧನ!

ಶಿವರುದ್ರಮ್ಮ ಅವರು ಪೂಜೆಗಾಗಿ ಬಿಲ್ವಪತ್ರೆ ಸಂಗ್ರಹಿಸಲು ಗ್ರಾಮದ ಹೊರವಲಯದಲ್ಲಿರುವ ಮಹಾಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂಜನಗೂಡು: ನಿಗೂಢವಾಗಿ ನಾಪತ್ತೆಯಾಗಿದ್ದ ತಾಲೂಕಿನ ಕಸುವಿನಹಳ್ಳಿಯ ವೃದ್ಧೆ ಶಿವರುದ್ರಮ್ಮ (63) ಶವವಾಗಿ ಪತ್ತೆಯಾಗಿದ್ದು, ಜಮೀನೊಂದರ ಇಂಗು ಗುಂಡಿಯಲ್ಲಿ ಮೃತ ದೇಹ ಸಿಕ್ಕಿದೆ. ಮಹದೇವಪ್ಪ ಬಂಧಿತ ವ್ಯಕ್ತಿ.

ನಂಜನಗೂಡು ತಾಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ 63 ವರ್ಷದ ಮಹಿಳೆಯನ್ನು ಕೊಲೆ ಮಾಡಿದ್ದ ಮಹದೇವ ಚಿರತೆಯ ನಕಲಿ ಗುರುತುಗಳನ್ನು ಸೃಷ್ಟಿಸಿ, ಕಾಡು ಪ್ರಾಣಿಗಳ ದಾಳಿಯಂತೆ ಬಿಂಬಿಸಲು ಪ್ರಯತ್ನಿಸಿ ಸಿಕ್ಕಿಬಿದ್ದಿದ್ದಾನೆ.

ಶಿವರುದ್ರಮ್ಮ ಅವರು ಪೂಜೆಗಾಗಿ ಬಿಲ್ವಪತ್ರೆ ಸಂಗ್ರಹಿಸಲು ಗ್ರಾಮದ ಹೊರವಲಯದಲ್ಲಿರುವ ಮಹಾಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು 70 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ಧರಿಸಿದ್ದರು.

ದೇವಾಲಯದ ಆವರಣದಲ್ಲಿ ಬಿಲ್ವಪತ್ರೆ ಸಂಗ್ರಹಿಸಲು ಮಹದೇವಪ್ಪ ಅವರ ಸಹಾಯ ಪಡೆದರು. ಮಹದೇವಪ್ಪ ಬಿಲ್ವ ಪತ್ರೆ ಎಲೆಗಳನ್ನು ಸಂಗ್ರಹಿಸಲು ಸಹಾಯ ಮಾಡಿ ಹತ್ತಿರದ ಹೊಲಕ್ಕೆ ಕರೆದೊಯ್ದಿದ್ದಾನೆ. ನಂತರ ಆಕೆಯನ್ನು ಕೊಲೆ ಮಾಡಿ, ಚಿನ್ನವನ್ನು ಕದ್ದು ಇಂಗು ಗುಂಡಿಯಲ್ಲಿ ಮುಳುಗಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿವರುದ್ರಮ್ಮ ಅವರ ಪತಿ ಗುರುಸ್ವಾಮಪ್ಪ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಶೋಧ ಕಾರ್ಯಾಚರಣೆಯ ಸಮಯದಲ್ಲಿ, ಮಹಾದೇವಪ್ಪ ಸಕ್ರಿಯವಾಗಿ ಭಾಗವಹಿಸಿದ್ದ. ಈ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದೆ ಹೀಗಾಗಿ ಮಹಿಳೆ ಚಿರತೆ ದಾಳಿಗೆ ಬಲಿಯಾಗಿರಬಹುದು ಎಂದು ಪದೇ ಪದೇ ಹೇಳುತ್ತಿದ್ದ. ಚಿರತೆಯ ಬಗ್ಗೆ ಅವನು ಪದೇ ಪದೇ ಉಲ್ಲೇಖಿಸಿದ್ದರಿಂದ ತನಿಖಾಧಿಕಾರಿಗಳಲ್ಲಿ ಅನುಮಾನ ಹುಟ್ಟಿತು.

ಹೀಗಾಗಿ ವಿಚಾರಣೆಗಾಗಿ ಅವನನ್ನು ವಶಕ್ಕೆ ತೆಗೆದುಕೊಳ್ಳಲಾಯಿತು. ನಂತರ ಮಹದೇವಪ್ಪ ತಾನು ಹಣಕಾಸಿನ ಒತ್ತಡದಲ್ಲಿದ್ದೆ ಹೀಗಾಗಿ ಆಕೆಯ ಆಭರಣಗಳನ್ನು ಕದಿಯಲು ಮತ್ತು ಸಾಲವನ್ನು ಮರುಪಾವತಿಸಲು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಪೊಲೀಸರು ಆರೋಪಿಯಿಂದ 53 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET Paper Leak: ವಿದ್ಯಾರ್ಥಿಗಳ ಪ್ರತಿಭಟನೆ ನಡುವೆಯೇ ಕೇಂದ್ರ ಸರ್ಕಾರದಿಂದ ಮೊದಲ ಕ್ರಮ, ಶಿಕ್ಷಣ ಇಲಾಖೆ ಕಾರ್ಯದರ್ಶಿ ಎತ್ತಂಗಡಿ

INDIA bloc march to Gandhi Smriti: 'ನಮ್ಮನ್ನು ತಡೆಯಲು ಸಾಧ್ಯವೇ ಇಲ್ಲ.. ಧರ್ಮೇಂದ್ರ ಪ್ರಧಾನ್ ರಾಜಿನಾಮೆ ನೀಡಲೇಬೇಕು': ರಾಹುಲ್ ಗಾಂಧಿ

CJP Protest: 'ಕಠಿಣ ಪರಿಶ್ರಮಕ್ಕೆ ಪ್ರತಿಫಲ ಸಿಗುವ ಸಂಸ್ಕೃತಿ ಸೃಷ್ಟಿಸಬೇಕು': ಕೊನೆಗೂ ಮೌನ ಮುರಿದ Sachin Tendulkar

ಇಂಟರ್ನೆಟ್ ಸೇವೆ ಸ್ಥಗಿತ; ಇಂದು ರಾತ್ರಿ ಪ್ರತಿಭಟನೆ ದಮನ ಮಾಡುವ ಯಾವುದೇ ಯೋಜನೆ ಇಲ್ಲ: ದೆಹಲಿ ಪೊಲೀಸರು

'ಧರ್ಮೇಂದ್ರ ಪ್ರಧಾನ್ ರನ್ನು ವಜಾ ಮಾಡಿ; ಇಲ್ಲದಿದ್ದರೆ ನಿಮ್ಮ ರಾಜೀನಾಮೆಯನ್ನೂ ಕೇಳುತ್ತೇವೆ': ಪ್ರಧಾನಿ ಮೋದಿಗೆ CJP ಮುಖ್ಯಸ್ಥ Abhijeet Dipke ಒತ್ತಾಯ