ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರ ಸಾವು; ಪೋಷಕರು-ಬೈಕ್ ಮಾಲೀಕರ ವಿರುದ್ಧ ಪೊಲೀಸ್ ಕೇಸ್!

ಮೃತ ಬಾಲಕನನ್ನು ಸರ್ವಭೌಮನಗರದ 1ನೇ ಮುಖ್ಯರಸ್ತೆಯ ನಿವಾಸಿ ಸೂರಜ್ ಕುಮಾರ್ (16) ಎಂದು ಗುರುತಿಸಲಾಗಿದೆ. ಅವನು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.

ಬೆಂಗಳೂರು: ಶನಿವಾರ ರಾತ್ರಿ ನಗರದಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಅಪ್ರಾಪ್ತ ಬಾಲಕರು ಮೃತಪಟ್ಟಿದ್ದಾರೆ.

ಹಿಟ್ ಅಂಡ್ ರನ್ ಪ್ರಕರಣವೊಂದರಲ್ಲಿ, ಮೈಕೋ ಲೇಔಟ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಆರ್‌ಟಿಒ ರಸ್ತೆಯಲ್ಲಿ ಟ್ರ್ಯಾಕ್ಟರ್‌ವೊಂದು ಅವರ ಸ್ಕೂಟರ್‌ಗೆ ತಗುಲಿದ ಪರಿಣಾಮ 16 ವರ್ಷದ ಬಾಲಕ ಮೃತಪಟ್ಟಿದ್ದು, ಆತನ ಸ್ನೇಹಿತ ಗಾಯಗೊಂಡಿದ್ದಾನೆ.

ಮೃತ ಬಾಲಕನನ್ನು ಸರ್ವಭೌಮನಗರದ 1ನೇ ಮುಖ್ಯರಸ್ತೆಯ ನಿವಾಸಿ ಸೂರಜ್ ಕುಮಾರ್ (16) ಎಂದು ಗುರುತಿಸಲಾಗಿದೆ. ಅವನು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಆತನ ಸ್ನೇಹಿತ ಹಾಗೂ ಸಹಪಾಠಿಯಾದ 16 ವರ್ಷದ ಪುಷ್ಕರ್ ರಾಮ್ ಲೋಹರ್ ಗಾಯಗಳೊಂದಿಗೆ ಪಾರಾಗಿದ್ದಾನೆ.

ರಾತ್ರಿ 8.45ರ ಸುಮಾರಿಗೆ ಕುಮಾರ್ ಸ್ಕೂಟರ್ ಚಲಾಯಿಸುತ್ತಿದ್ದು, ಲೋಹರ್ ಹಿಂಬದಿಯಲ್ಲಿ ಕುಳಿತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವಿಜಯ ಬ್ಯಾಂಕ್ ಲೇಔಟ್ ವೃತ್ತದ ಸಮೀಪದ ಪೆಟ್ರೋಲ್ ಬಂಕ್‌ನಲ್ಲಿ ಇಂಧನ ತುಂಬಿಸಿಕೊಂಡ ಬಳಿಕ ಅವರು ಮನೆಗೆ ತೆರಳುತ್ತಿದ್ದರು.

ಅವರ ಎಡಭಾಗದಿಂದ ಸಾಗುತ್ತಿದ್ದ ಟ್ರ್ಯಾಕ್ಟರ್ ಅತಿ ವೇಗದಲ್ಲಿ ಚಲಾಯಿಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.

ಟ್ರ್ಯಾಕ್ಟರ್ ಚಾಲಕ ಹಠಾತ್ ಬ್ರೇಕ್ ಹಾಕಿದಾಗ ಅದರ ಟ್ರೇಲರ್ ಸ್ಕೂಟರ್‌ನ ಎಡಭಾಗದ ಹ್ಯಾಂಡಲ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ಇಬ್ಬರೂ ಬಾಲಕರು ರಸ್ತೆಗೆ ಬಿದ್ದಿದ್ದು, ಟ್ರೇಲರ್‌ನ ಹಿಂಬದಿ ಚಕ್ರ ಸೂರಜ್‌ನ ತಲೆಯ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಲೋಹರ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಬಳಿಕ ಟ್ರ್ಯಾಕ್ಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆತನನ್ನು ಪತ್ತೆಹಚ್ಚಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ಚಲಾಯಿಸಲು ಅವಕಾಶ ನೀಡಿದ ಕಾರಣ ಪೋಷಕರ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಮುಖಾಮುಖಿ ಡಿಕ್ಕಿ

ಮತ್ತೊಂದು ಪ್ರಕರಣದಲ್ಲಿ ಶನಿವಾರ ರಾತ್ರಿ ಜೆಬಿ ನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಎಸ್‌ಎಂವಿಟಿ ರೈಲು ನಿಲ್ದಾಣದ ಬಳಿ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 15 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಮೃತ ಬಾಲಕನನ್ನು ಮರ್ಫಿ ಟೌನ್‌ನ ಅನಂತನಾಯರ್ ರಸ್ತೆಯ ನಿವಾಸಿ ಹಾಗೂ 10ನೇ ತರಗತಿ ವಿದ್ಯಾರ್ಥಿ ರಿಯಾನ್ (15) ಎಂದು ಗುರುತಿಸಲಾಗಿದೆ. ರಾತ್ರಿ 8.30ರ ಸುಮಾರಿಗೆ ಆತ ಓಲ್ಡ್ ಮದ್ರಾಸ್ ರಸ್ತೆಯಿಂದ ರೈಲು ನಿಲ್ದಾಣದ ಕಡೆಗೆ ಮೋಟಾರ್‌ಸೈಕಲ್ ಚಲಾಯಿಸುತ್ತಿದ್ದನು.

ವಿರುದ್ಧ ದಿಕ್ಕಿನಿಂದ ಸ್ಕೂಟರ್‌ನಲ್ಲಿ ಬರುತ್ತಿದ್ದ ಅರುಣ್ (32) ಅವರ ವಾಹನ ರಿಯಾನ್‌ನ ಮೋಟಾರ್‌ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಇಬ್ಬರೂ ರಸ್ತೆಗೆ ಬಿದ್ದಿದ್ದು, ರಿಯಾನ್ ತಲೆಗೆ ಗಂಭೀರ ಗಾಯಗಳಾಗಿವೆ. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ರಿಯಾನ್ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ. ಅರುಣ್ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಜೆಬಿ ನಗರ ಸಂಚಾರ ಪೊಲೀಸರು ಅರುಣ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಪೋಷಕರ ವಿರುದ್ಧವೇ ಕೇಸ್

ಅಪ್ರಾಪ್ತ ಬಾಲಕನಿಗೆ ಮೋಟಾರ್‌ಸೈಕಲ್ ಚಲಾಯಿಸಲು ಅವಕಾಶ ನೀಡಿದ ಕಾರಣ ರಿಯಾನ್‌ನ ಪೋಷಕರು ಹಾಗೂ ವಾಹನದ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರದ ಭರವಸೆಗೆ ಮಣಿದ Sonam Wangchuk: 26 ದಿನಗಳ ಉಪವಾಸ ಅಂತ್ಯ, Dharmendra Pradhan ರಾಜೀನಾಮೆ ನೀಡದ ಹೊರತು ಪ್ರತಿಭಟನೆ ನಿಲ್ಲಲ್ಲ ಎಂದ CJP..!

NEET Paper Leak: ವಿದ್ಯಾರ್ಥಿಗಳ ಪ್ರತಿಭಟನೆ ನಡುವೆಯೇ ಕೇಂದ್ರ ಸರ್ಕಾರದಿಂದ ಮೊದಲ ಕ್ರಮ, ಶಿಕ್ಷಣ ಇಲಾಖೆ ಕಾರ್ಯದರ್ಶಿ ಎತ್ತಂಗಡಿ

INDIA bloc march to Gandhi Smriti: 'ನಮ್ಮನ್ನು ತಡೆಯಲು ಸಾಧ್ಯವೇ ಇಲ್ಲ.. ಧರ್ಮೇಂದ್ರ ಪ್ರಧಾನ್ ರಾಜಿನಾಮೆ ನೀಡಲೇಬೇಕು': ರಾಹುಲ್ ಗಾಂಧಿ

CJP Protest: 'ಕಠಿಣ ಪರಿಶ್ರಮಕ್ಕೆ ಪ್ರತಿಫಲ ಸಿಗುವ ಸಂಸ್ಕೃತಿ ಸೃಷ್ಟಿಸಬೇಕು': ಕೊನೆಗೂ ಮೌನ ಮುರಿದ Sachin Tendulkar

ಇಂಟರ್ನೆಟ್ ಸೇವೆ ಸ್ಥಗಿತ; ಇಂದು ರಾತ್ರಿ ಪ್ರತಿಭಟನೆ ದಮನ ಮಾಡುವ ಯಾವುದೇ ಯೋಜನೆ ಇಲ್ಲ: ದೆಹಲಿ ಪೊಲೀಸರು