ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ 
ರಾಜ್ಯ

ಆಳಂದ ಗಲಭೆ ಪ್ರಕರಣ: ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ!

ಸಂವಿಧಾನವಿರೋಧಿ ಹಾಗೂ ಜನವಿರೋಧಿಯಾದ ಈ ಆದೇಶವನ್ನು ತಕ್ಷಣವೇ ರದ್ದುಪಡಿಸುವಂತೆ ರಾಜ್ಯಪಾಲರಿಗೆ ಇಂದು ಮನವಿ ಸಲ್ಲಿಸಲಾಗಿದೆ.

ಬೆಂಗಳೂರು: ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಮತ್ತು ಅಲ್ಪಸಂಖ್ಯಾತರನ್ನು ಓಲೈಸಲು ಆಳಂದದ ರಾಘವ ಚೈತನ್ಯ ಮಂದಿರದ ಮೇಲೆ ದಾಳಿ ಮಾಡಿದವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ವಾಪಸ್ ಪಡೆದಿದೆ ಎಂದು ವಿಧಾನಪರಿಷತ್ತಿನ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ.

ಕಲಬುರ್ಗಿಯ ಆಳಂದದಲ್ಲಿ ರಾಘವ ಚೈತನ್ಯ ಶಿವಲಿಂಗಕ್ಕೆ ಅಪಮಾನ ಎಸಗಿ, ಕೋಮು ಉದ್ವಿಗ್ನತೆ ಸೃಷ್ಟಿಸಿದ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟುಮಾಡಿದ ಹಾಗೂ ಪೊಲೀಸ್ ಅಧಿಕಾರಿಗಳ ಮೇಲೆಯೇ ಹಲ್ಲೆ ನಡೆಸಿದ ಗಂಭೀರ ಪ್ರಕರಣಗಳ ಹಲವು ಕೇಸ್‍ಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ಮುಂದಾಗಿರುವುದು ಅತ್ಯಂತ ಆಘಾತಕಾರಿ ಮತ್ತು ಖಂಡನೀಯ ಎಂದಿದ್ದಾರೆ.

ಇಂತಹ ಸಮಾಜವಿರೋಧಿ ಹಾಗೂ ಕ್ರಿಮಿನಲ್ ತತ್ವಗಳ ಬೆನ್ನಿಗೆ ನಿಲ್ಲುವ ಮೂಲಕ ಕಾಂಗ್ರೆಸ್ ಸರ್ಕಾರ ತಾನು ಜನವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಈ ಹಿನ್ನೆಲೆಯಲ್ಲಿ, ಸಂವಿಧಾನವಿರೋಧಿ ಹಾಗೂ ಜನವಿರೋಧಿಯಾದ ಈ ಆದೇಶವನ್ನು ತಕ್ಷಣವೇ ರದ್ದುಪಡಿಸುವಂತೆ ರಾಜ್ಯಪಾಲರಿಗೆ ಇಂದು ಮನವಿ ಸಲ್ಲಿಸಲಾಗಿದೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ಘಟನೆಯ ವಿಚಾರಣೆ ಕೋರ್ಟ್‍ನಲ್ಲಿ ಬಾಕಿ ಇರುವಾಗಲೇ ಸರ್ಕಾರ ದಾಳಿಕೋರರ ಮೇಲಿನ ಪ್ರಕರಣವನ್ನು ವಾಪಸ್ ಪಡೆದಿದೆ. ಇದನ್ನು ವಾಪಸ್ ಪಡೆಯಬಾರದು ಎಂದು ಆಗ್ರಹಿಸಿ ಮಾನ್ಯ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದರು. ರಾಘವ ಚೈತನ್ಯ ಮಂದಿರದಲ್ಲಿನ ಶಿವಲಿಂಗಕ್ಕೆ ಆರು ನೂರು ವರ್ಷಗಳ ಇತಿಹಾಸವಿದೆ. ಇಲ್ಲಿ ಪದೇ ಪದೇ ಗಲಭೆಗಳು ಆಗಿವೆ. ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವಿವರಿಸಿದರು.

ಶಿವಲಿಂಗದ ಮೇಲೆ ಮಲಮೂತ್ರ ಮಾಡಿದ್ದನ್ನು ಸ್ವಚ್ಛಗೊಳಿಸುತ್ತಿದ್ದವರ ಮೇಲೆ, ಪೂಜೆ ಮಾಡಲು ಸೇರಿದ್ದ ಹಿಂದೂಗಳ ಮೇಲೆ ಸಾವಿರಾರು ಸಂಖ್ಯೆಯಲ್ಲಿ ಜನರು ತಲವಾರು ಮಚ್ಚಿನಿಂದ ದಾಳಿ ಮಾಡಿದ್ದಾರೆ. ಸ್ಥಳಕ್ಕೆ ಬಂದ ಪೆÇಲೀಸರಿಗೂ ರಕ್ತ ಬರುವಂತೆ ಹಲ್ಲೆ ಮಾಡಿದ್ದಾರೆ. ಪೊಲೀಸ್ ವಾಹನಗಳನ್ನು ಜಖಂ ಮಾಡಿದ್ದಾರೆ. ಜಿಲ್ಲಾಧಿಕಾರಿ ಮೇಲೂ ದಾಳಿ ನಡೆದಿದೆ. ಇದೊಂದು ದೊಡ್ಡ ಘಟನೆ. ಆದರೆ ರಾಜ್ಯ ಸರ್ಕಾರ ಇಷ್ಟೇಲ್ಲಾ ಆದರೂ ಏನೂ ಆಗಿಲ್ಲವೆಂಬಂತೆ ಪ್ರಕರಣವನ್ನು ಹಿಂದಕ್ಕೆ ಪಡೆದಿದೆ ಎಂದು ದೂರಿದರು.

ದಾಳಿಕೋರರಿಗೆ ಶಿಕ್ಷೆ ಕೊಡಿಸುವ ಬದಲು ಸರ್ಕಾರ ಪ್ರೋತ್ಸಾಹ ನೀಡಿದೆ. ಇದು ಜನರಿಗೆ ಮತ್ತು ಹಿಂದೂತ್ವಕ್ಕೆ ಮಾಡಿದ ಅವಮಾನ. ಹಿಂದೂ, ಮುಸ್ಲಿಂ ಎನ್ನುವುದಕ್ಕಿಂತ ಜನರು ನೆಮ್ಮದಿಯಿಂದ ಬದುಕಬೇಕು. ಎಲ್ಲರಿಗೂ ನ್ಯಾಯಕೊಡುವ ಬದಲು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಮೂಲಕ ಪತ್ರ ಕೊಡಿಸಿ ಪ್ರಕರಣ ವಾಪಸ್ ಪಡೆದಿದ್ದಾರೆ. ಇದು ಖಂಡನೀಯ ಕ್ರಮ ಎಂದರು.

ದಲಿತರು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಿದರೆ ಅವರ ಮೇಲೆ ಕ್ರಿಮಿನಲ್ ಕೇಸ್ ಹಾಕುತ್ತಾರೆ. ಕನ್ನಡ ಪರ ಸಂಘಟನೆಗಳ ಮುಖಂಡರು ಕನ್ನಡದ ಪರ ಹೋರಾಟ ಮಾಡಿದರೆ ಕ್ರಿಮಿನಲ್ ಪ್ರಕರಣ ದಾಖಲಿಸುತ್ತಾರೆ. ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡರನ್ನು ಜೈಲಿಗೆ ಕಳಿಸಿದ್ದರು. ಆದರೆ ಬಾಂಬ್ ಹಾಕಿದವರ ಮೇಲೆ, ತಲವಾರುಗಳಿಂದ ಹಲ್ಲೆ ಮಾಡಿದವರ ಮೇಲೆ ದೂರು ದಾಖಲಿಸಿ ಶಿಕ್ಷೆ ಕೊಡಿಸುವುದು ಬಿಟ್ಟು ಪ್ರಕರಣ ವಾಪಸ್ ಪಡೆಯುತ್ತಾರೆ. ರಾಜ್ಯ ಸರ್ಕಾರದ ಇಂತಹ ನೀಚ ಓಲೈಕೆ ರಾಜಕಾರಣವನ್ನು ಖಂಡಿಸಲಾಗುವುದು. ರಾಜ್ಯ ಸಚಿವ ಸಂಪುಟ ಕೈಗೊಂಡ ತೀರ್ಮಾನವನ್ನು ಪಾಪಸ್ ಪಡೆಯಬೇಕು ಎಂದು ಮಾನ್ಯ ರಾಜ್ಯಪಾಲರಲ್ಲಿ ಮನವಿ ಮಾಡಿದ್ದೇವೆ ಎಂದು ವಿವರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿಯಾಗಿ ನಾಳೆ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಹೀಗಿದೆ ಕಾರ್ಯಕ್ರಮದ ಭದ್ರತೆ

ವಿಧಾನಸೌಧದಲ್ಲಿರುವ CM ಕಚೇರಿಗೆ ಜ್ಯೋತಿಷಿಗಳ ಭೇಟಿ; ಕುರ್ಚಿ ದಿಕ್ಕು ಬದಲು, ಅಜ್ಜಯ್ಯನ ಫೋಟೋ ಅಳವಡಿಕೆ!

ಪಕ್ಷಕ್ಕೆ ರಾಜೀನಾಮೆ ವದಂತಿಗಳ ನಡುವೆ ಕುತೂಹಲ ಮೂಡಿಸಿದ Annamalai- Amit shah ಶಾ ಭೇಟಿ

ಸಂಪುಟ ರಚನೆ ಬಗ್ಗೆ ಖರ್ಗೆ ನಿವಾಸದಲ್ಲಿ ಸಭೆ ಅಂತ್ಯ: ಹೊಸ ಸಚಿವರ ಹೆಸರು ಫೈನಲ್, ಕೆಲವೇ ಕ್ಷಣಗಳಲ್ಲಿ ಬಿಡುಗಡೆ

'ಭವಿಷ್ಯ ಕಾಣುತ್ತಿಲ್ಲ'; ಬಿಜೆಪಿ ನಾಯಕತ್ವ ಭೇಟಿ ಮಾಡಿದ Annamalai; ಸ್ವತಂತ್ರ ರಾಜಕೀಯ ಪಯಣದ ಸುಳಿವು!

SCROLL FOR NEXT