ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ ದುರ್ಗಾ ಸ್ಟಾಲಿನ್ 
ರಾಜ್ಯ

ಪತಿ-ಪುತ್ರನಿಂದ ಸನಾತನ ಧರ್ಮ ನಾಶದ ಹೇಳಿಕೆ: ಚಾಮುಂಡಿ ಬೆಟ್ಟದಲ್ಲಿ ದುರ್ಗಾ ಸ್ಟಾಲಿನ್ ವಿಶೇಷ ಪೂಜೆ! ಜಿಟಿಡಿ ದಂಪತಿಗಳಿಂದ ಆಶೀರ್ವಾದ, Video

ಕರ್ನಾಟಕದ ಪ್ರಸಿದ್ಧ ದೇವಾಲಯಗಳಾದ ಮೈಸೂರಿನ ಚಾಮುಂಡಿಬೆಟ್ಟ ಹಾಗೂ ಮಂಡ್ಯದ ಶ್ರೀರಂಗಪಟ್ಟಣದ ನಿಮಿಷಾಂಬಾ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಕೆ ಮಾಡಿದ್ದಾರೆ‌.

ಮೈಸೂರು: ತಮಿಳುನಾಡಲ್ಲಿ ಮಾಜಿ ಸಿಎಂ ಎಂಕೆ ಸ್ಟಾಲಿನ್ ಪುತ್ರ ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ ಕೆಲವೇ ದಿನಗಳಲ್ಲಿ , ಅವರ ತಾಯಿ ಹಿಂದೂ ದೇಗುಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಹೌದು.. ತಮಿಳುನಾಡು ಮಾಜಿ ಸಿಎಂ ಎಂಕೆ ಸ್ಟಾಲಿನ್ ಪತ್ನಿ ದುರ್ಗಾ ಸ್ಟಾಲಿನ್ ಅಪಾರ ದೈವಭಕ್ತರು. ಮೈಸೂರು-ಮಂಡ್ಯದ ದೇವಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಕೆ ಮಾಡಿದ್ದಾರೆ‌.

ಕರ್ನಾಟಕದ ಪ್ರಸಿದ್ಧ ದೇವಾಲಯಗಳಾದ ಮೈಸೂರಿನ ಚಾಮುಂಡಿಬೆಟ್ಟ ಹಾಗೂ ಮಂಡ್ಯದ ಶ್ರೀರಂಗಪಟ್ಟಣದ ನಿಮಿಷಾಂಬಾ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಕೆ ಮಾಡಿದ್ದಾರೆ‌.

ಮಡಿಲು ತುಂಬಿಸುವ ಉಡಿಸೇವೆ ನಡೆಸಿ, ಬಳೆ, ರೇಷ್ಮೆಸೀರೆಯ ಉಡಿ ಸಲ್ಲಿಸಿದ್ದಾರೆ. ಮಗನ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ತಾಯಿಯ ಈ ದೈವಭಕ್ತಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಜಿಟಿಡಿ ಮನೆಗೂ ದುರ್ಗಾ ಸ್ಟಾಲಿನ್ ಭೇಟಿ

ಧಾರ್ಮಿಕ ಕಾರ್ಯಕ್ರಮಗಳ ಬಳಿಕ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಅವರ ನಿವಾಸಕ್ಕೆ ಅಚ್ಚರಿ ಭೇಟಿ ನೀಡಿದ ದುರ್ಗಾ ಸ್ಟಾಲಿನ್ ಅವರು ದಂಪತಿಯ ಆಶೀರ್ವಾ ಪಡೆದಿದ್ದಾರೆ. ಈ ಕುರಿತ ವಿಡಿಯೋ ಕೂಡ ವ್ಯಾಪಕ ವೈರಲ್ ಆಗುತ್ತಿದೆ.

ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂದಿದ್ದ ಉದಯನಿಧಿ ಸ್ಟಾಲಿನ್

ಇನ್ನು ತಮಿಳುನಾಡಲ್ಲಿ ನೂತನವಾಗಿ ವಿಜಯ್ ಸರಕಾರ ಆಡಳಿತಕ್ಕೆ ಬಂದ ಬಳಿಕ, 2ನೇ ದಿನದ ಆಡಳಿತದಲ್ಲಿ ಮಾಜಿ ಸಿಎಂ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಅವರು 'ಸನಾತನ ಧರ್ಮ ಜನರನ್ನು ವಿಭಜಿಸುತ್ತದೆ. ಇದನ್ನು ನಿರ್ಮೂಲನೆ ಮಾಡಬೇಕು ಎಂದಿದ್ದರು.

ಇದಕ್ಕೂ‌ ಮೊದಲು ನಡೆದ ಸಮಾವೇಶವೊಂದರಲ್ಲಿ ಸನಾತನ ಧರ್ಮವಬ್ನು ವಿರೋಧಿಸಿದರೆ ಸಾಲದು, ನಿರ್ಮೂಲನೆ ಮಾಡಬೇಕು . ಡೆಂಗ್ಯೂ, ಸೊಳ್ಳೆ ,ಮಲೇರಿಯಾ, ಕೊರೊನಾವನ್ನು ನಿರ್ಮೂಲನೆ ಮಾಡಿದ ರೀತಿ ಮಾಡಬೇಕು, ಸನಾತನ ಜಾತಿಯ ಆಧಾರದಲ್ಲಿ ನಿರ್ಮೂಲನೆ ಮಾಡುತ್ತದೆ ಎಂದಿದ್ದರು.

ಉದಯನಿಧಿ ಅವರ ಈ ಮಾತಿಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ನಟ ಅರ್ಜುನ್ ಸರ್ಜಾ ಕೂಡಾ ವಿರೋಧಿಸಿ ಸನಾತನ ಧರ್ಮವೇ ಬೇಡ ಅಂತಾದ್ರೆ, ಅಂತಹವರು ತಮ್ಮ ತಂದೆ ತಾಯಿಯನ್ನೂ ದೂರ ಮಾಡಬೇಕು ಇದು ಸಾಧ್ಯವೇ ಎಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿ.ಕೆ. ಶಿವಕುಮಾರ್ ಜೊತೆ ಪ್ರಮಾಣವಚನ ಸ್ವೀಕರಿಸಲಿರುವ 10-12 ಸಚಿವರ ಪಟ್ಟಿ ಇಂದು ಪ್ರಕಟ ಸಾಧ್ಯತೆ

ಬೆನ್ನಿಗೆ ಚೂರಿ ಹಾಕುವ ಕೆಲಸ, ಬಿಜೆಪಿಗೆ ಸಹಾಯ ಮಾಡಲು ಹೀಗೆ ಮಾಡಿದ್ದಾರೆ: ಜಮೀರ್ ವಿರುದ್ಧ SS ಮಲ್ಲಿಕಾರ್ಜುನ್ ಆಕ್ರೋಶ

JOB Alert: DCC ಬ್ಯಾಂಕ್ ನಲ್ಲಿ 82 ಹುದ್ದೆಗಳು ಖಾಲಿ, ಈಗಲೇ ಅರ್ಜಿ ಸಲ್ಲಿಸಿ

Blue-Collar Blackout: ಇನ್ನೈದು ವರ್ಷಗಳಲ್ಲಿ ಪ್ಲಂಬರ್‌, ಎಲೆಕ್ಟ್ರಿಷಿಯನ್ ಗಳೇ ಸಿಗಲ್ಲ.. ತಜ್ಞರ ಎಚ್ಚರಿಕೆ

'ಗರ್ಭಿಣಿನೂ ಇಲ್ಲ.. ಮಹಿಳೆಯೂ ಇಲ್ಲ.. ಕಾರಿನಲ್ಲಿ ಒಬ್ಬರೇ ಬಂದಿದ್ದರು': ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಯಲು ಮಾಡಿದ ಪೊಲೀಸರು!

SCROLL FOR NEXT