ಕೋಟ ಶ್ರೀನಿವಾಸ ಪೂಜಾರಿ 
ರಾಜ್ಯ

'ಜಿರಳೆ, ಹೆಗ್ಗಣ, ಸೊಳ್ಳೆಗಳಿಗೆ ಹೆದರುವ ಕಾಲ ಇದಲ್ಲ': Cockroach Janta Party ಬಗ್ಗೆ ಕೋಟ ಶ್ರೀನಿವಾಸ ಪೂಜಾರಿ

ಸಾಲ ತೀರಿಸಲಾಗದೆ ದೇಶದ ಚಿನ್ನವನ್ನು ಅಡವಿಟ್ಟ ಕಾಲವೊಂದಿತ್ತು. ಆದರೆ, ಇಂದು ಭಾರತ 60 ರಾಷ್ಟ್ರಗಳಿಗೆ ಸಾಲ ನೀಡುತ್ತಿದೆ ಎಂದು ಹೇಳಿದರು.

ಮಂಗಳೂರು: ಕಾಕ್ರೋಚ್ ಜನತಾ ಪಾರ್ಟಿ ಹೆಸರಿನಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಯನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಪ್ರಯತ್ನ ನಡೆದಿದೆ. ಜಿರಳೆ, ಹೆಗ್ಗಣ, ಸೊಳ್ಳೆಗಳಿಗೆ ಹೆದರುವ ಕಾಲ ಇದಲ್ಲ ಎಂದು ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದಿಂದ ಆಯೋಜಿಸಿರುವ ಎರಡು ದಿನಗಳ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ಉದ್ಘಾಟಿಸಿ ಮಾತನಾಡಿದ ಅವರು, ಸಾಲ ತೀರಿಸಲಾಗದೆ ದೇಶದ ಚಿನ್ನವನ್ನು ಅಡವಿಟ್ಟ ಕಾಲವೊಂದಿತ್ತು. ಆದರೆ, ಇಂದು ಭಾರತ 60 ರಾಷ್ಟ್ರಗಳಿಗೆ ಸಾಲ ನೀಡುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ 1.5 ಲಕ್ಷ ದಲಿತ, ಹಿಂದುಗಳಿದ ವರ್ಗಗಳ ವಿದ್ಯಾರ್ಥಿಗಳು ಹಾಸ್ಟೆಲ್ ಇಲ್ಲದೆ ಸಮಸ್ಯೆ ಎದುರಿಸುತ್ತಿದ್ದಾರೆ. ಕೆಲವರು ಶಾಲೆ ತೊರೆದಿದ್ದಾರೆ. ಪರಿಶಿಷ್ಟರ ಆರೋಗ್ಯ, ಶಿಕ್ಷಣಕ್ಕಾಗಿ ಮೀಸಲಿಟ್ಟ ₹60 ಸಾವಿರ ಕೋಟಿಯನ್ನು ಬೇರೆ ಉದ್ದೇಶಕ್ಕೆ ಸರ್ಕಾರ ಬಳಸಿದೆ. ಕಡಲ ಮೀನುಗಾರಿಕೆ ಮತ್ತಿತರ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ₹22 ಸಾವಿರ ಕೋಟಿ ಬಿಡುಗಡೆ ಮಾಡಿತ್ತು. ಕೇಂದ್ರದ ಅನುದಾನವನ್ನು ರಾಜ್ಯ ಸರ್ಕಾರ ತನ್ನದೇ ಎಂದು ಬಿಂಬಿಸಿದೆ. ಕಾರ್ಯಕರ್ತರು ಜನತೆಗೆ ಸತ್ಯ ತಿಳಿಸಬೇಕು’ ಎಂದು ಹೇಳಿದರು.

ಸಂಸದ ಬ್ರಿಜೇಶ್ ಚೌಟ ಮಾತನಾಡಿ, 2014ರ ಬಳಿಕ ಭಾರತ ಬದಲಾಗಿದೆ. ಜನರ ಸಮಸ್ಯೆಗಳಿಗೆ ಉತ್ತರವಾಗಿ ಬಿಜೆಪಿ ದೇಶದಲ್ಲಿದೆ. ಗೆಲ್ಲಲು ಸಾಧ್ಯವೇ ಇಲ್ಲ ಎಂಬಂತಿದ್ದ ಪಶ್ಚಿಮ ಬಂಗಾಳದಲ್ಲೂ ಈಗ ಬಿಜೆಪಿ ಆಡಳಿತ ನಡೆಸುತ್ತಿದೆ. ರಾಜ್ಯದಲ್ಲಿ 2028ರಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆಯಾಗಬೇಕು’ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವರಿಗೆ ED ಶಾಕ್‌; ಸತೀಶ್ ಜಾರಕಿಹೊಳಿ ಡಾಲರ್ಸ್ ಕಾಲೋನಿ ಮನೆ ಮೇಲೆ ದಾಳಿ !

US-Iran ಸಂಘರ್ಷ ತಾರಕಕ್ಕೆ: ತೈಲ ಟ್ಯಾಂಕರ್ ದಾಳಿಗೆ Tehran ಪ್ರತಿಕಾರ; ಜೋರ್ಡಾನ್‌ ಅಮೆರಿಕ ಸೇನಾ ನೆಲೆ ಮೇಲೆ ಭೀಕರ ಕ್ಷಿಪಣಿ ದಾಳಿ, Hormuz ಬಿಕ್ಕಟ್ಟು ಮತ್ತಷ್ಟು ಉಲ್ಬಣ..!

West Asia Conflict: ಇರಾನ್ ಆರ್ಥಿಕ ಬೆನ್ನೆಲುಬಿಗೆ ಅಮೆರಿಕ ಪೆಟ್ಟು: ಸಮುದ್ರದ ಮಧ್ಯದಲ್ಲೇ 5 ಬೃಹತ್ ತೈಲ ಹಡಗುಗಳು ಗುರಿಯಾಗಿಸಿ ದಾಳಿ, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ..!

West Asia Conflict ಎಫೆಕ್ಟ್: ಗಗನಕ್ಕೇರುತ್ತಿದೆ ಜಾಗತಿಕ ತೈಲ ದರ, $100 ತಲುಪಿದ ಕಚ್ಚಾ ತೈಲ ಬೆಲೆ..!

'ಬ್ರಿಟನ್ ತೊರೆಯದಂತೆ ಕಾನೂನುಬದ್ಧ ನಿರ್ಬಂಧ, ಭಾರತ ಸರ್ಕಾರದಿಂದ ನನಗೆ ಅನ್ಯಾಯವಾಗಿದೆ': ವಿಜಯ್ ಮಲ್ಯ