ವಿಧಾನಸೌಧದಲ್ಲಿ ನಡೆದ ತಮ್ಮ ನೇತೃತ್ವದ ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಡಿಕೆ ಶಿವಕುಮಾರ್ ಮಾತನಾಡಿದರು. 
ರಾಜ್ಯ

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್; ಯುವಕರ ಸಂಘಕ್ಕೆ 10 ಲಕ್ಷ ರೂ.: ನೂತನ CM ಡಿಕೆಶಿಯಿಂದ ಹಲವು ಘೋಷಣೆ

ಇಂದು ಸಂಜೆ ವಿಧಾನಸೌಧದಲ್ಲಿ ನಡೆದ ತಮ್ಮ ನೇತೃತ್ವದ ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲಾಗುವುದು ಎಂದರು.

ಬೆಂಗಳೂರು: ಡಿಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಎಲ್ಲಾ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಇಂದು ಸಂಜೆ ವಿಧಾನಸೌಧದಲ್ಲಿ ನಡೆದ ತಮ್ಮ ನೇತೃತ್ವದ ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ರಾಜ್ಯದಲ್ಲಿ ಹೊಸ ಯುಗ ಆರಂಭಿಸಲು, ನಾವು ಮೊದಲ ಸಚಿವ ಸಂಪುಟ ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ ಎಂದರು.

ರಾಜ್ಯದಲ್ಲಿ ಇನ್ಮುಂದೆ ವಿದ್ಯಾರ್ಥಿನಿಯರಂತೆ ಎಲ್ಲಾ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೂ ಕೂಡ ಉಚಿತ ಬಸ್ ಪಾಸ್ ನೀಡಲಾಗುವುದು. ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶೀಘ್ರದಲ್ಲೇ ಉಚಿತ ಬಸ್ ಪಾಸ್ ವಿತರಿಸಲು ಅರ್ಜಿ ಕರೆಯಲಾಗುವುದು ಎಂದರು.

ಭಾರತ್ ಜೋಡೋ ಯುವ ಸಂಘಕ್ಕೆ 10 ಲಕ್ಷ

ಯುವಕರಲ್ಲಿ ನಾಯಕತ್ವ ಗುಣ ಬೆಳೆಸುವ ಉದ್ದೇಶದಿಂದ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ‘ಭಾರತ್ ಜೋಡೋ ಯುವಕ ಸಂಘ’ ರಚನೆ ಮಾಡುವ ಚಿಂತನೆ ಇದೆ ಎಂದು ಸಿಎಂ ಡಿ.ಕೆ. ಶಿವಕುಮಾರ್​ ಹೇಳಿದರು.

ರಾಜ್ಯಾದ್ಯಂತ ಒಟ್ಟು 10 ಸಾವಿರ ಯುವಕರ ಸಂಘಗಳನ್ನು ರಚಿಸಲು ಉದ್ದೇಶಿಸಲಾಗಿದ್ದು, ಪ್ರತಿ ಸಂಘಕ್ಕೆ ಸರ್ಕಾರದಿಂದ 10 ಲಕ್ಷ ರೂ ಅನುದಾನ ನೀಡಲಾಗುವುದು ಎಂದು ತಿಳಿಸಿದರು.

ಬಿ ಖಾತಾಯಿಂದ ಎ ಖಾತೆ ಯೋಜನೆ ರಾಜ್ಯಕ್ಕೆ ವಿಸ್ತರಣೆ

ಬೆಂಗಳೂರಿಗಷ್ಟೇ ಸೀಮಿತವಾಗಿದ್ದ ಬಿ ಖಾತಾಯಿಂದ ಎ ಖಾತೆ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು. ಅನಧಿಕೃತ ಕಟ್ಟಡಗಳಿಗೆ ಎ-ಖಾತಾ ದಾಖಲೆ ನೀಡುವ ಅಭಿಯಾನವನ್ನು ಇಡೀ ರಾಜ್ಯಕ್ಕೆ ವಿಸ್ತರಿಸುತ್ತೇವೆ ಎಂದರು.

ಮೊದಲ ಸಚಿವ ಸಂಪುಟದ ಘೋಷಣೆಗಳು

ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

ರಸ್ತೆಗಳ ನಿರ್ಮಾಣಕ್ಕೆ 2000 ಕೋಟಿ ರೂ. ಘೋಷಣೆ

2,500 ಚದರ ಅಡಿವರೆಗೂ ಒಸಿ ವಿನಾಯಿತಿ. ಇದರೊಂದಿಗೆ 2,500 ಚ.ಅಡಿ ವಿಸ್ತೀರ್ಣ ಕಟ್ಟಡಕ್ಕೆ ಅರ್ಜಿ ಹಾಕಿದವರಿಗೆ ರಿಲೀಫ್.

ಪ್ರತಿ‌ ಪಂಚಾಯತ್ ಗೂ ಭಾರತ್ ಜೋಡೋ ಯುವಕ ಸಂಘ ಸ್ಥಾಪನೆಗೆ 10 ಸಾವಿರ ರೂಪಾಯಿ ಘೋಷಣೆ.

ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಹುಡುಕುತ್ತಿದ್ದವರಿಗೆ private employment exchange centre ಸ್ಥಾಪನೆ.

ಬೆಂಗಳೂರಿಗಷ್ಟೇ ಸೀಮಿತವಾಗಿದ್ದ ಬಿ ಖಾತಾಯಿಂದ ಎ ಖಾತೆ ಯೋಜನೆ ರಾಜ್ಯಕ್ಕೆ ವಿಸ್ತರಣೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೆತನ್ಯಾಹು 'ಹುಚ್ಚ'; ಇರಾನ್ ಜೊತೆಗಿನ ಶಾಂತಿ ಮಾತುಕತೆ ಹಳ್ಳಹಿಡಿಸುತ್ತಿದ್ದಾರೆ: ಡೊನಾಲ್ಡ್ ಟ್ರಂಪ್

KPCC ಅಧ್ಯಕ್ಷ ಸ್ಥಾನಕ್ಕೆ CM ಡಿಕೆಶಿ ರಾಜೀನಾಮೆ: ಬಿ.ಕೆ ಹರಿಪ್ರಸಾದ್ ನೂತನ ಸಾರಥಿ; ಸತೀಶ್ ಜಾರಕಿಹೊಳಿಗೆ ತೀವ್ರ ನಿರಾಸೆ!

ಡಿಕೆಶಿ ಸಂಪುಟದಲ್ಲಿ ಅಹಿಂದಕ್ಕೆ ಆದ್ಯತೆ: ಯಾವ ಸಮುದಾಯಕ್ಕೆ ಎಷ್ಟು ಸಚಿವ ಸ್ಥಾನ? ಇಲ್ಲಿದೆ ಸಂಕ್ಷಿಪ್ತ ವಿವರ

ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆರ್ಥಿಕ ಸಲಹೆಗಾರರಾಗಿ IAS ಎಲ್.ಕೆ ಅತೀಕ್ ನೇಮಕ!

ಏನಾಗ್ತಿದೆ ಜಮ್ಮು-ಕಾಶ್ಮೀರದಲ್ಲಿ?: ನೆಟ್ವರ್ಕ್ ಇಲ್ಲದ ಸ್ಥಳಕ್ಕೆ ಶಾಸಕರು ಶಿಫ್ಟ್; ಸಿಎಂ Omar Abdullah ಮಾಡ್ತಿರೋದೇನು?

SCROLL FOR NEXT