ಯುಟಿ ಖಾದರ್ ರಾಜಿನಾಮೆ 
ರಾಜ್ಯ

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ UT Khader ರಾಜೀನಾಮೆ

ನೂತನ ಡಿ.ಕೆ. ಶಿವಕುಮಾರ್ ಸರ್ಕಾರದ ಭಾಗವಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನಸಭೆ ಸ್ಪೀಕರ್ ಹುದ್ದೆಗೆ ಯು.ಟಿ. ಖಾದರ್ ರಾಜೀನಾಮೆ ನೀಡಿದ್ದು, ಡೆಪ್ಯುಟಿ ಸ್ಪೀಕರ್‌ ರುದ್ರಪ್ಪ ಲಮಾಣಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಬೆಂಗಳೂರು: ಕರ್ನಾಟಕ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ಸ್ವೀಕರಿಸುತ್ತಿರುವ ಬೆನ್ನಲ್ಲೇ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಮಂಗಳೂರು ಶಾಸಕ ಯುಟಿ ಖಾದರ್ ಬುಧವಾರ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ನೂತನ ಡಿ.ಕೆ. ಶಿವಕುಮಾರ್ ಸರ್ಕಾರದ ಭಾಗವಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನಸಭೆ ಸ್ಪೀಕರ್ ಹುದ್ದೆಗೆ ಯು.ಟಿ. ಖಾದರ್ ರಾಜೀನಾಮೆ ನೀಡಿದ್ದು, ಡೆಪ್ಯುಟಿ ಸ್ಪೀಕರ್‌ ರುದ್ರಪ್ಪ ಲಮಾಣಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಲೋಕಭವನದಲ್ಲೇ ಡೆಪ್ಯುಟಿ ಸ್ಪೀಕರ್​ಗೆ ಖಾದರ್​​ ರಾಜೀನಾಮೆ ಪತ್ರ ಸಲ್ಲಿಸಿದ್ದು, ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಬರುವಂತೆ ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್​​ ಅವರಿಂದ ಕರೆ ಬೆನ್ನಲ್ಲೇ ಈ ವಿದ್ಯಮಾನ ನಡೆದಿದೆ ಎನ್ನಲಾಗಿದೆ.

ಸಚಿವ ಸ್ಥಾನದ ವಿಚಾರವಾಗಿ ಪ್ರತಿಕ್ರಿಯಿಸಿರುವ ಯು.ಟಿ. ಖಾದರ್​​, 'ನಾನು ಯಾವುದೇ ಖಾತೆಗೆ ಬೇಡಿಕೆ ಇಟ್ಟಿಲ್ಲ. ಆದರೆ ಆರೋಗ್ಯ ಖಾತೆ ಅಥವಾ ವಸತಿ ಖಾತೆ ಸಿಕ್ಕರೆ ಒಳಿತೆಂಬ ಬಯಕೆ ಇದೆ. ನಾಯಕರು ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. ಉಪಮುಖ್ಯಮಂತ್ರಿ ಸ್ಥಾನ ಕೊಟ್ಟರೂ ನಿಭಾಯಿಸಲು ತಾನು ಸಿದ್ಧ. ಯಾವ ಬಾಲ್ ಬಂದರೂ ಬ್ಯಾಟಿಂಗ್ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ರಾಜ್ಯಪಾಲರಿಗೆ ಧನ್ಯವಾದ

ಸ್ಪೀಕರ್ ಆಗಿ ಮೂರು ವರ್ಷಗಳ ಅವಧಿಯಲ್ಲಿ ಸಹಕಾರ ನೀಡಿದ್ದಕ್ಕೆ ರಾಜ್ಯಪಾಲ ಥಾವರ್​​ಚಂದ್​ ಗೆಹ್ಲೋಟ್​​ಗೆ ಯು.ಟಿ. ಖಾದರ್​​ ಧನ್ಯವಾದ ತಿಳಿಸಿದ್ದಾರೆ. ಲೋಕಭವನಕ್ಕೆ ತೆರಳಿ ಗವರ್ನರ್​​ ಭೇಟಿಯಾಗಿರುವ ಅವರು, ರಾಜ್ಯಪಾಲರಿಗೆ ರಾಜೀನಾಮೆ ವಿಷಯ ತಿಳಿಸಿದ್ದಾರೆ ಎನ್ನಲಾಗಿದೆ.

ಇನ್ನು ಈ ಹಿಂದೆ ಆರೋಗ್ಯ ಸಚಿವರಾಗಿ ಸೇವೆ ಸಲ್ಲಿಸಿರುವ ಅನುಭವ ಹೊಂದಿರುವ ಖಾದರ್​​ಗೆ ಡಿಕೆಶಿ ಸರ್ಕಾರದಲ್ಲೂ ಅದೇ ಖಾತೆ ಸಿಗಬಹುದೆಂಬ ನಿರೀಕ್ಷೆ ಇದೆ.

ಇನ್ನು ಯು.ಟಿ. ಖಾದರ್ ಸಚಿವರಾಗುವುದು ಖಚಿತವಾಗಿರುವ ಹಿನ್ನೆಲೆ ಬೆಂಬಲಿಗರಿಂದ ಸಂಭ್ರಮಾಚರಣೆ ನಡೆದಿದೆ. ಬೆಂಗಳೂರಿನ ಗಾಲ್ಫ್ ಗ್ರೌಂಡ್ ಬಳಿ ಇರುವ ಖಾದರ್​ ನಿವಾಸಕ್ಕೆ ಆಗಮಿಸಿ ಹಲವರು ಶುಭ ಕೋರುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CJP Protest: ಸೋನಂ ವಾಂಗ್ಚುಕ್‌ಗೆ ಹೈಕೋರ್ಟ್ ಬಿಗ್ ರಿಲೀಫ್: ಸಫ್ದರ್‌ಜಂಗ್‌ನಿಂದ ಮೆದಾಂತ ಆಸ್ಪತ್ರೆಗೆ ಸ್ಥಳಾಂತರ

New delhi: ಪ್ರಧಾನಿ ನಿವಾಸದ ಹೊರಗಡೆ ಪ್ರತಿಭಟನೆ; ರಾಹುಲ್, ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್ ವಶಕ್ಕೆ ಪಡೆದ ಪೊಲೀಸರು! Video

ಏನಿದು 'ಗ್ರೇಟರ್ ಇಂಟಿಗ್ರೇಟೆಡ್ ಟೌನ್‌ಶಿಪ್'? ಬಿಡದಿಯೇ ಏಕೆ? 7,431 ಎಕರೆ 'AI ಸಿಟಿ'ಯ ಸಂಪೂರ್ಣ ಮಾಹಿತಿ ಇಲ್ಲಿದೆ!

ಯುವಜನತೆಯ ಪ್ರತಿಭಟನೆ ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರ: ಬಂಧನಕ್ಕೆ ಹೆದರಲ್ಲ, ನ್ಯಾಯ ಸಿಗುವವರೆಗೂ ಹೋರಾಟ- CM ಡಿಕೆ ಶಿವಕುಮಾರ್! Video

ಜಮ್ಮು-ಕಾಶ್ಮೀರದಲ್ಲಿ ಮಳೆಯ ರೌದ್ರನರ್ತನ: ಭೂಕುಸಿತಕ್ಕೆ ಒಂದೇ ಕುಟುಂಬದ 7 ಮಂದಿ ಬಲಿ; ಸಾವಿನ ಸಂಖ್ಯೆ 27ಕ್ಕೆ ಏರಿಕೆ, Video