ಡಿ.ಕೆ ಶಿವಕುಮಾರ್ 
ರಾಜ್ಯ

ಮಾಧ್ಯಮಗಳಲ್ಲಿ ಬರುತ್ತಿರುವ ಹೆಸರುಗಳು ಅಧಿಕೃತವಲ್ಲ: ಬುಧವಾರ ಸಚಿವರ ಪಟ್ಟಿ ಪ್ರಕಟ; ಡಿ.ಕೆ ಶಿವಕುಮಾರ್

ಸಚಿವರ ಆಯ್ಕೆ ವಿಚಾರವಾಗಿ ಹೈಕಮಾಂಡ್ ನಾಯಕರು ಚರ್ಚೆ ಮಾಡಿದ್ದು, ನಮ್ಮ ಅಭಿಪ್ರಾಯವನ್ನು ತಿಳಿಸಿದ್ದೇವೆ. ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಮಾಡಲಿದ್ದಾರೆ.

ಬೆಂಗಳೂರು: ಸಚಿವರ ಆಯ್ಕೆ ವಿಚಾರವಾಗಿ ಮಾಧ್ಯಮಗಳಲ್ಲಿ ಬರುತ್ತಿರುವ ಹೆಸರುಗಳು ಅಧಿಕೃತವಲ್ಲ. ನಾಳೆ ಬೆಳಗ್ಗೆ 10 ಗಂಟೆ ಅಥವಾ ಮಧ್ಯಾಹ್ನದ ವೇಳೆಗೆ ಹೈಕಮಾಂಡ್ ನಾಯಕರು ಸಚಿವರ ಪಟ್ಟಿ ಬಿಡುಗಡೆ ಮಾಡಲಿದ್ದಾರೆ" ಎಂದು ಕಾಂಗ್ರೆಸ್ಶಾ ಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಸಚಿವರ ಆಯ್ಕೆ ವಿಚಾರವಾಗಿ ಹೈಕಮಾಂಡ್ ನಾಯಕರು ಚರ್ಚೆ ಮಾಡಿದ್ದು, ನಮ್ಮ ಅಭಿಪ್ರಾಯವನ್ನು ತಿಳಿಸಿದ್ದೇವೆ. ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಮಾಡಲಿದ್ದಾರೆ. ದೆಹಲಿ ನಾಯಕರು ನಮಗೆ ಪಟ್ಟಿ ರವಾನೆ ಮಾಡಿದ ಬಳಿಕ, ನಾವು ಅದನ್ನು ರಾಜಭವನಕ್ಕೆ ಕಳುಹಿಸಿಕೊಡುತ್ತೇವೆ" ಎಂದು ತಿಳಿಸಿದರು.

ಬೇರೆ ದಿನ ಕಾಂಗ್ರೆಸ್ ಭವನ ಶಂಕುಸ್ಥಾಪನೆ ನಾಳೆ ಸಂಜೆ ನಡೆಯಬೇಕಿದ್ದ ಕಾಂಗ್ರೆಸ್ ಭವನ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಬೇರೊಂದು ದಿನ ನಡೆಸಲು ತೀರ್ಮಾನಿಸಿದ್ದೇವೆ. ಆಹ್ವಾನ ಪತ್ರಿಕೆ ಪಡೆದಿರುವ ಬ್ಲಾಕ್, ಜಿಲ್ಲಾ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಗ್ಯಾರಂಟಿ ಸಮಿತಿಯವರು ಕಾಂಗ್ರೆಸ್ ಕಚೇರಿಯ ಭಾರತ ಜೋಡೋ ಭವನಕ್ಕೆ ಆಗಮಿಸಬೇಕು.

ನಾನು ಸಚಿವ ಸಂಪುಟ ಸಭೆ ಮಾಡಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೀಳ್ಕೊಟ್ಟು ನಂತರ ಭಾರತ ಜೋಡೋ ಭವನದಲ್ಲಿ ಭೇಟಿ ಮಾಡುವೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET Paper Leak: ವಿದ್ಯಾರ್ಥಿಗಳ ಪ್ರತಿಭಟನೆ ನಡುವೆಯೇ ಕೇಂದ್ರ ಸರ್ಕಾರದಿಂದ ಮೊದಲ ಕ್ರಮ, ಶಿಕ್ಷಣ ಇಲಾಖೆ ಕಾರ್ಯದರ್ಶಿ ಎತ್ತಂಗಡಿ

INDIA bloc march to Gandhi Smriti: 'ನಮ್ಮನ್ನು ತಡೆಯಲು ಸಾಧ್ಯವೇ ಇಲ್ಲ.. ಧರ್ಮೇಂದ್ರ ಪ್ರಧಾನ್ ರಾಜಿನಾಮೆ ನೀಡಲೇಬೇಕು': ರಾಹುಲ್ ಗಾಂಧಿ

CJP Protest: 'ಕಠಿಣ ಪರಿಶ್ರಮಕ್ಕೆ ಪ್ರತಿಫಲ ಸಿಗುವ ಸಂಸ್ಕೃತಿ ಸೃಷ್ಟಿಸಬೇಕು': ಕೊನೆಗೂ ಮೌನ ಮುರಿದ Sachin Tendulkar

ಇಂಟರ್ನೆಟ್ ಸೇವೆ ಸ್ಥಗಿತ; ಇಂದು ರಾತ್ರಿ ಪ್ರತಿಭಟನೆ ದಮನ ಮಾಡುವ ಯಾವುದೇ ಯೋಜನೆ ಇಲ್ಲ: ದೆಹಲಿ ಪೊಲೀಸರು

'ಧರ್ಮೇಂದ್ರ ಪ್ರಧಾನ್ ರನ್ನು ವಜಾ ಮಾಡಿ; ಇಲ್ಲದಿದ್ದರೆ ನಿಮ್ಮ ರಾಜೀನಾಮೆಯನ್ನೂ ಕೇಳುತ್ತೇವೆ': ಪ್ರಧಾನಿ ಮೋದಿಗೆ CJP ಮುಖ್ಯಸ್ಥ Abhijeet Dipke ಒತ್ತಾಯ