ಜಿ ಪರಮೇಶ್ವರ 
ರಾಜ್ಯ

ಮುಖ್ಯಮಂತ್ರಿ ಹುದ್ದೆಗೆ ನನ್ನನ್ನು ಕಡೆಗಣಿಸಿರುವ ಪ್ರಶ್ನೆಯೇ ಇಲ್ಲ, ಪಕ್ಷದ ನಿರ್ಧಾರಕ್ಕೆ ಬದ್ಧ: ಜಿ ಪರಮೇಶ್ವರ

ನನಗೂ ಮುಖ್ಯಮಂತ್ರಿಯಾಗುವ ಆಸೆ ಇತ್ತು. ಆದರೆ ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಂಡರೂ, ಪಕ್ಷದ ಶಿಸ್ತಿನ ಸೈನಿಕರಾಗಿ ನಾವು ಅದನ್ನು ಸ್ವೀಕರಿಸಬೇಕು. ಪಕ್ಷದ ನಾಯಕತ್ವಕ್ಕೆ ಧನ್ಯವಾದಗಳು ಎಂದರು.

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ತಮ್ಮನ್ನು ಕಡೆಗಣಿಸಲಾಗಿದೆ ಎಂಬ ಹೇಳಿಕೆಗಳನ್ನು ತಳ್ಳಿಹಾಕಿದ ಹಿರಿಯ ಕಾಂಗ್ರೆಸ್ ನಾಯಕ ಜಿ ಪರಮೇಶ್ವರ, ತಮಗೆ ಯಾವುದೇ ಅನ್ಯಾಯವಾಗಿಲ್ಲ ಮತ್ತು ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ತಾವು ಸಂಪೂರ್ಣ ತೃಪ್ತರಾಗಿರುವುದಾಗಿ ಬುಧವಾರ ಹೇಳಿದರು.

ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿದ್ದ ಪರಮೇಶ್ವರ್, ಪಕ್ಷದ ನಾಯಕತ್ವವು ತಮಗೆ ಒಂದು ಪ್ರಮುಖ ಜವಾಬ್ದಾರಿಯನ್ನು ನೀಡಿದೆ ಮತ್ತು ಕಾಂಗ್ರೆಸ್ ಹೈಕಮಾಂಡ್‌ನ ನಿರ್ಧಾರವನ್ನು ಒಪ್ಪಿಕೊಂಡಿದ್ದೇನೆ ಎಂದು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನನ್ನ ಅನುಭವವನ್ನು ಕಡೆಗಣಿಸಲಾಗಿದೆ ಎನ್ನುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಪಕ್ಷದ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಮತ್ತು ಉಪಮುಖ್ಯಮಂತ್ರಿ ಹುದ್ದೆಯನ್ನು ಜನರಿಗೆ ಸೇವೆ ಸಲ್ಲಿಸುವ ಅವಕಾಶವೆಂದು ಪರಿಗಣಿಸಿರುವುದಾಗಿ ಹೇಳಿದರು.

'ಹೌದು, ನನಗೂ ಮುಖ್ಯಮಂತ್ರಿಯಾಗುವ ಆಸೆ ಇತ್ತು. ಆದರೆ ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಂಡರೂ, ಪಕ್ಷದ ಶಿಸ್ತಿನ ಸೈನಿಕರಾಗಿ ನಾವು ಅದನ್ನು ಸ್ವೀಕರಿಸಬೇಕು. ಪಕ್ಷದ ನಾಯಕತ್ವಕ್ಕೆ ಧನ್ಯವಾದಗಳು. ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ' ಎಂದರು.

'ಏಕೆಂದರೆ, ಸದ್ಯದ ಪರಿಸ್ಥಿತಿಯಲ್ಲಿ, ನನ್ನನ್ನು ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ನನ್ನ ಮೇಲೆ ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ಕಾಂಗ್ರೆಸ್ ಸಿದ್ಧಾಂತ ಮತ್ತು ಪ್ರಣಾಳಿಕೆಗೆ ಅನುಗುಣವಾಗಿ ಕೆಲಸ ಮಾಡಲು ಸಿಕ್ಕ ಮತ್ತೊಂದು ಅವಕಾಶವೆಂದು ಪರಿಗಣಿಸಿದ್ದೇನೆ' ಎಂದು ಪರಮೇಶ್ವರ ಹೇಳಿದರು.

ಮುಖ್ಯಮಂತ್ರಿ ಹುದ್ದೆಯ ಸ್ಪರ್ಧೆಯಲ್ಲಿದ್ದ ನಿಮಗೆ ಉಪಮುಖ್ಯಮಂತ್ರಿ ಹುದ್ದೆ ಸಿಕ್ಕಿರುವುದಕ್ಕೆ ತೃಪ್ತರಾಗಿದ್ದೀರಾ ಎಂದು ಕೇಳಿದಾಗ, ಹುದ್ದೆಗಿಂತ ಸಾರ್ವಜನಿಕ ಸೇವೆ ಮುಖ್ಯವಾಗಿದೆ. ಜನರಿಗೆ ಮತ್ತು ರಾಜ್ಯಕ್ಕೆ ಸೇವೆ ಸಲ್ಲಿಸಲು ಅವಕಾಶವನ್ನು ಒದಗಿಸಿದರೆ ಯಾವುದೇ ಹುದ್ದೆ ಒಳ್ಳೆಯದಲ್ಲವೇ? ಅದೊಂದು ಅವಕಾಶ ಎಂದು ಅವರು ಹೇಳಿದರು.

ಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪರಮೇಶ್ವರ ಅಭಿನಂದಿಸಿದರು. ಇಬ್ಬರೂ ನಾಯಕರು ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯ ಭಾಗವಾಗಿದ್ದರು ಎಂದು ಹೇಳಿದರು.

ಸರ್ಕಾರದಲ್ಲಿ ತಮ್ಮ ಭವಿಷ್ಯದ ಪಾತ್ರದ ಕುರಿತು, ನನಗೆ ಯಾವ ಖಾತೆ ನೀಡಲಾಗುವುದು ಎಂದು ನನಗೆ ತಿಳಿದಿಲ್ಲ. ನನಗೆ ಯಾವುದೇ ಖಾತೆ ವಹಿಸಿದರೂ, ನಾನು ಅದರಲ್ಲಿ ಕೆಲಸ ಮಾಡುತ್ತೇನೆ ಎಂದು ಪರಮೇಶ್ವರ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

DK Shivakumar and cabinet swearing-in LIVE updates | ಕರ್ನಾಟಕ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ

ಕರ್ನಾಟಕದ 18ನೇ ಸಿಎಂ ಆಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್

ಡಿಕೆ ಶಿವಕುಮಾರ್ ಪ್ರಮಾಣವಚನ: 13 ಶಾಸಕರಿಗೆ ಮಂತ್ರಿ ಸ್ಥಾನ, ಯಾರಿಗೆಲ್ಲಾ ಸಚಿವಗಿರಿ? ಇಲ್ಲಿದೆ ಪಟ್ಟಿ

ನೂತನ ಸಿಎಂ ಆಗಿ DK Shivakumar ಪ್ರಮಾಣ ವಚನ: ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ UT Khader ರಾಜೀನಾಮೆ

India vs Afghanistan: ಭಾರತ ನೆಟ್ಸ್‌ನಲ್ಲಿ ಬೌಲಿಂಗ್ ಮಾಡಲು 7 ಆಟಗಾರರಿಗೆ ಆಹ್ವಾನ, ಏನಿದು BCCIನ ಹೊಸ ತಂತ್ರ?

SCROLL FOR NEXT