ಬೆಳಗಾವಿ: ಯಮಕನಮರಡಿಯ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಬುಧವಾರ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಜೊತೆಗೆ ಕೆಪಿಸಿಸಿ ಅಧ್ಯಕ್ಷರಾಗಿಯೂ ನೇಮಕಗೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಆದಾಗ್ಯೂ, ಸಂಪುಟದಲ್ಲಿ ಸ್ಥಾನ ಪಡೆದರೂ ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸರ್ಕಾರದಲ್ಲಿ ನಿರ್ವಹಿಸಿದ್ದ ಲೋಕೋಪಯೋಗಿ ಖಾತೆಯನ್ನು ಉಳಿಸಿಕೊಳ್ಳುವ ಸಾಧ್ಯತೆ ಕಡಿಮೆ. ಸಚಿವರಾಗಿ ಮತ್ತು ಕೆಪಿಸಿಸಿ ಅಧ್ಯಕ್ಷರಾಗಿ ಜಾರಕಿಹೊಳಿಯ ಎರಡು ಹುದ್ದೆಗೆ ಕಾಂಗ್ರೆಸ್ ನ ಕೆಲ ನಾಯಕರು ವಿರೋಧ ವ್ಯಕ್ತಪಡಿಸಿತು ಎನ್ನಲಾಗಿದೆ.
ಆದಾಗ್ಯೂ ಜಾರಕಿಹೊಳಿ ಅವರ ಬೇಡಿಕೆಯನ್ನು ಡಿಕೆ ಶಿವಕುಮಾರ್ ವೈಯಕ್ತಿಕವಾಗಿ ಬೆಂಬಲಿಸಿದ್ದು, ಪಕ್ಷದ ವರಿಷ್ಠರನ್ನು ಮನವೊಲಿಸಿದ್ದಾರೆ ಎಂದು ತಿಳಿದುಬಂದಿದೆ.
ಇದು ಹೊಸ ಅಧಿಕಾರ ರಚನೆಯಲ್ಲಿ ಉತ್ತರ ಕರ್ನಾಟಕದ ಪ್ರಭಾವಿ ವ್ಯಕ್ತಿಯ ರಾಜಕೀಯ ಪ್ರಾಮುಖ್ಯತೆಯನ್ನು ತಿಳಿಸುತ್ತದೆ. ಮತ್ತೊಂದು ಗಮನಾರ್ಹ ಬದಲಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಭಾಗಿಯಾಗುವ ಸಾಧ್ಯತೆಯಿದೆ.
ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾಗಿ ಸೇವೆ ಸಲ್ಲಿಸಿದ್ದ ಬೆಳಗಾವಿ ಜಿಲ್ಲಾ ನಾಯಕಿ ಅವರನ್ನು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸುವ ನಿರೀಕ್ಷೆಯಿದೆ.