ಸತೀಶ್ ಜಾರಕಿಹೊಳಿ 
ರಾಜ್ಯ

ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನದ ಜೊತೆಗೆ KPCC ಅಧ್ಯಕ್ಷ ಪಟ್ಟ! ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕ ಸಾಧ್ಯತೆ

ಜಾರಕಿಹೊಳಿ ಅವರ ಬೇಡಿಕೆಯನ್ನು ಡಿಕೆ ಶಿವಕುಮಾರ್ ವೈಯಕ್ತಿಕವಾಗಿ ಬೆಂಬಲಿಸಿದ್ದು, ಪಕ್ಷದ ವರಿಷ್ಠರನ್ನು ಮನವೊಲಿಸಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗಾವಿ: ಯಮಕನಮರಡಿಯ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಬುಧವಾರ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಜೊತೆಗೆ ಕೆಪಿಸಿಸಿ ಅಧ್ಯಕ್ಷರಾಗಿಯೂ ನೇಮಕಗೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಆದಾಗ್ಯೂ, ಸಂಪುಟದಲ್ಲಿ ಸ್ಥಾನ ಪಡೆದರೂ ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸರ್ಕಾರದಲ್ಲಿ ನಿರ್ವಹಿಸಿದ್ದ ಲೋಕೋಪಯೋಗಿ ಖಾತೆಯನ್ನು ಉಳಿಸಿಕೊಳ್ಳುವ ಸಾಧ್ಯತೆ ಕಡಿಮೆ. ಸಚಿವರಾಗಿ ಮತ್ತು ಕೆಪಿಸಿಸಿ ಅಧ್ಯಕ್ಷರಾಗಿ ಜಾರಕಿಹೊಳಿಯ ಎರಡು ಹುದ್ದೆಗೆ ಕಾಂಗ್ರೆಸ್ ನ ಕೆಲ ನಾಯಕರು ವಿರೋಧ ವ್ಯಕ್ತಪಡಿಸಿತು ಎನ್ನಲಾಗಿದೆ.

ಆದಾಗ್ಯೂ ಜಾರಕಿಹೊಳಿ ಅವರ ಬೇಡಿಕೆಯನ್ನು ಡಿಕೆ ಶಿವಕುಮಾರ್ ವೈಯಕ್ತಿಕವಾಗಿ ಬೆಂಬಲಿಸಿದ್ದು, ಪಕ್ಷದ ವರಿಷ್ಠರನ್ನು ಮನವೊಲಿಸಿದ್ದಾರೆ ಎಂದು ತಿಳಿದುಬಂದಿದೆ.

ಇದು ಹೊಸ ಅಧಿಕಾರ ರಚನೆಯಲ್ಲಿ ಉತ್ತರ ಕರ್ನಾಟಕದ ಪ್ರಭಾವಿ ವ್ಯಕ್ತಿಯ ರಾಜಕೀಯ ಪ್ರಾಮುಖ್ಯತೆಯನ್ನು ತಿಳಿಸುತ್ತದೆ. ಮತ್ತೊಂದು ಗಮನಾರ್ಹ ಬದಲಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಭಾಗಿಯಾಗುವ ಸಾಧ್ಯತೆಯಿದೆ.

ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾಗಿ ಸೇವೆ ಸಲ್ಲಿಸಿದ್ದ ಬೆಳಗಾವಿ ಜಿಲ್ಲಾ ನಾಯಕಿ ಅವರನ್ನು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿಕೆಶಿ ಪದಗ್ರಹಣಕ್ಕೂ ಮುನ್ನವೇ ಸಿದ್ದರಾಮಯ್ಯಗೆ ಮಹತ್ವದ ಸ್ಥಾನ: ಕಾಂಗ್ರೆಸ್‌ ಪರಮೋಚ್ಚ ಸಮಿತಿಗೆ ನೇಮಕ

ರಾಜ್ಯ ವಿಧಾನಸಭೆಗೆ ಹೊಸ ಸ್ಪೀಕರ್, ಸಭಾಪತಿ ಆಯ್ಕೆ ಸಾಧ್ಯತೆ; ಖಾದರ್ ಸಚಿವ ಸ್ಥಾನದ ಆಕಾಂಕ್ಷಿ!

DCM ಕುರ್ಚಿ ಮೇಲೆ ಕಣ್ಣಿಟ್ಟವರಿಗೆ ಶಾಕ್! ಒಬ್ಬರಿಗೆ ಮಾತ್ರ ಉಪ ಮುಖ್ಯಮಂತ್ರಿ ಸ್ಥಾನ; ಯಾರೂ ಆ ಪ್ರಭಾವಿ ನಾಯಕ?

ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಸಂಬಂಧಿತ ರಸ್ತೆ ತಡೆ ಪ್ರಕರಣ: 31 ಜನರ ವಿರುದ್ಧ ಎನ್‌ಐಎ ಚಾರ್ಜ್ ಶೀಟ್

ಸಿನಿಮೀಯ ಶೈಲಿಯಲ್ಲಿ ಮಾಜಿ MLC ಕಿಡ್ನ್ಯಾಪ್: 3 ಕೋಟಿ ರೂ ಗೆ ಡಿಮ್ಯಾಂಡ್; ದುಷ್ಟರಿಂದ ದಯಾನಂದ ರೆಡ್ಡಿ ಬಚಾವ್​​ ಆಗಿದ್ದೇ ರೋಚಕ!

SCROLL FOR NEXT