ಕುಳಿತು ಕೊಳ್ಳುವ ಮುನ್ನ ಕುರ್ಚಿಗೆ ಸಿಎಂ ನಮನ 
ರಾಜ್ಯ

ಸಿಎಂ ಕುರ್ಚಿ ನನ್ನದಲ್ಲ, ಜನರದ್ದು: ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ; ಸಿಎಂ ಡಿಕೆ ಶಿವಕುಮಾರ್

ನನ್ನ ವೈಯಕ್ತಿಕ ವಿಚಾರ ಬದಿಗೊತ್ತಿ, ರಾಜ್ಯದ ಜನರ ಸೇವೆಗೆ ಸಂಕಲ್ಪ ಮಾಡಿ ಈ ಅಧಿಕಾರ ಸ್ವೀಕರಿಸಿದ್ದೇನೆ. 'ಹಿಂದಿನ ಹೆಜ್ಜೆಗಳನ್ನು ಮರೆತವನು ಮುಂದಿನ ಹೆಜ್ಜೆ ಇಡಲಾರ' ಎಂಬ ಮಾತನ್ನು ನಂಬಿರುವವನು ನಾನು. ನಾವು ನಮ್ಮ ಬೇರು ಮರೆತರೆ ಫಲ ಸಿಗುವುದಿಲ್ಲ ಎಂದು ಹೇಳುತ್ತಿರುತ್ತೇನೆ.

ಬೆಂಗಳೂರು: ಸಿಎಂ ಕುರ್ಚಿ ಈ ಡಿ ಕೆ ಶಿವಕುಮಾರನದ್ದಲ್ಲ, ಇದು ಜನರ ಕುರ್ಚಿ. ಜನರು ಕೊಟ್ಟಿರುವ ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದಲ್ಲಿ ಬುಧವಾರ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿ ಮೊದಲ ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು.

“ನನ್ನ ವೈಯಕ್ತಿಕ ವಿಚಾರ ಬದಿಗೊತ್ತಿ, ರಾಜ್ಯದ ಜನರ ಸೇವೆಗೆ ಸಂಕಲ್ಪ ಮಾಡಿ ಈ ಅಧಿಕಾರ ಸ್ವೀಕರಿಸಿದ್ದೇನೆ. 'ಹಿಂದಿನ ಹೆಜ್ಜೆಗಳನ್ನು ಮರೆತವನು ಮುಂದಿನ ಹೆಜ್ಜೆ ಇಡಲಾರ' ಎಂಬ ಮಾತನ್ನು ನಂಬಿರುವವನು ನಾನು. ನಾವು ನಮ್ಮ ಬೇರು ಮರೆತರೆ ಫಲ ಸಿಗುವುದಿಲ್ಲ ಎಂದು ಹೇಳುತ್ತಿರುತ್ತೇನೆ.

ಇಂದು ಹೊಸ ದಿನ. ಹೊಸ ಕೆಲಸ ಮಾಡಿ, ಹೊಸ ಅವಕಾಶಗಳನ್ನು ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯದ ಜನತೆ ನೀಡಿದ್ದಾರೆ. ಬಾಕಿ ಇರುವ 2 ವರ್ಷಗಳಲ್ಲಿ ರಾಜ್ಯದ ಜನರ ಸೇವೆ ಮಾಡಲು ಏನೆಲ್ಲಾ ಸೇವೆ ಮಾಡಬಹುದು, ರಾಜ್ಯದ ಕಲ್ಯಾಣಕ್ಕೆ ನಾನು ಹೊಸ ಅವಕಾಶಗಳನ್ನು ಹುಡುಕುತ್ತಿದ್ದೇನೆ” ಎಂದು ತಿಳಿಸಿದರು. ಎಲ್ಲಾ ಗೊಂದಲಗಳಿಗೆ ಹೈಕಮಾಂಡ್ ನಾಯಕರು ತೆರೆ ಎಳೆದಿದ್ದಾರೆ“ಮಾಧ್ಯಮಗಳು ಇಷ್ಟು ದಿನ ಅಧಿಕಾರ ಹಸ್ತಾಂತರ, ನಾಯಕತ್ವ ಬದಲಾವಣೆ ವಿಚಾರವಾಗಿ ಅನೇಕ ಸುದ್ದಿ, ಹೇಳಿಕೆಗಳನ್ನು ಪ್ರಸಾರ ಮಾಡುತ್ತಿದ್ದವು.

ಮಲಗಿದ್ದವರನ್ನು ಎಬ್ಬಿಸಿ, ಎದ್ದಿದ್ದವರನ್ನು ಮಲಗಿಸುತ್ತಿದ್ದರು. ನಮ್ಮ ಪಕ್ಷದ ವರಿಷ್ಠರು ಇದಕ್ಕೆಲ್ಲ ಈಗ ತೆರೆ ಎಳೆದಿದ್ದಾರೆ. ಶುಭ ಗಳಿಗೆ, ಶುಭ ಮುಹೂರ್ತ ಬರುತ್ತದೆ. ಸ್ವಲ್ಪ ತಾಳ್ಮೆಯಿಂದ ಕಾಯಿರಿ ಎಂದು ಹೇಳುತ್ತಲೇ ಇದ್ದೆ. ಇಂದು ಸಂಜೆ 4.15ಕ್ಕೆ ಶುಭ ಗಳಿಗೆ, ಶುಭ ಮುಹೂರ್ತಕ್ಕೆ ಮಾಧ್ಯಮಗಳು ಹಾಗೂ ರಾಜ್ಯದ ಜನತೆ ಸಾಕ್ಷಿಯಾಗಿದ್ದಾರೆ” ಎಂದು ತಿಳಿಸಿದರು.

ರಾಜ್ಯದ ಆಡಳಿತದಲ್ಲಿ ಹೊಸ ಬೆಳಕು ಮೂಡಿಸಲು ನನ್ನ 40 ವರ್ಷಗಳ ರಾಜಕೀಯ ಅನುಭವದಲ್ಲಿ ಪ್ರಯತ್ನ ಮಾಡುತ್ತೇನೆ. 1985ರಿಂದ ಇಲ್ಲೆಯವರೆಗೂ ಕಷ್ಟ ನೋಡಿದ್ದೇನೆ, ಸುಖ ನೋಡಿದ್ದೇನೆ. ಚಿಕ್ಕ ವಯಸ್ಸಿನಲ್ಲೇ ಅಧಿಕಾರ ನೋಡಿದ್ದೇನೆ. ಅನೇಕ ರಾಜಕೀಯ ತಂತ್ರಗಳ ಬಲೆಗೆ ಬಿದ್ದಿದ್ದೇನೆ. ತಿಹಾರ್ ಜೈಲಿಗೆ ಹೋಗುವ ಪರಿಸ್ಥಿತಿ ಬಂತು. ನಾನು ಎಂದಿಗೂ ಎದೆಗುಂದಲಿಲ್ಲ. ನಾನು ಭರವಸೆಗಳ ಮೇಲೆ ಬದುಕಿದೆ. ಇದೇ ವಿಶ್ವಾಸ ಮತ್ತೆ ರಾಜ್ಯದ ಜನರ ಸೇವೆ ಮಾಡಿ, ಸಾಕ್ಷಿಗುಡ್ಡೆ ಬಿಟ್ಟು ಹೋಗಲು ಅವಕಾಶ ಸಿಕ್ಕಿದೆ” ಎಂದು ತಿಳಿಸಿದರು.

ಕಾಂಗ್ರೆಸ್ ಕಾರ್ಯಕರ್ತರು, ಜನರು ಬಹಳ ನಂಬಿಕೆಯಿಂದ ಕೊಟ್ಟಿರುವ ಅವಕಾಶ. ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಈ ತೀರ್ಮಾನ ಮಾಡಿದ್ದಾರೆ. ಇದು ಸ್ವಲ್ಪ ತಡವಾಗಿದೆ. ಆದರೂ ನಮ್ಮ ನಾಯಕರಾದ ಸಿದ್ದರಾಮಯ್ಯ ಅವರು ಕೊಟ್ಟ ಮಾತಿನಂತೆ ನಡೆದಿದ್ದಾರೆ.

ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಿರುವುದಾಗಿ ಅವರು ಹೇಳುತ್ತಲೇ ಇದ್ದರು. ನಮ್ಮ ವರಿಷ್ಠರು ನಮ್ಮಿಬ್ಬರನ್ನು ಕರೆಸಿ ಈ ತೀರ್ಮಾನ ಮಾಡಿದಾಗ, ಸಿದ್ದರಾಮಯ್ಯ ಅವರು ಬಹಳ ಸಂತೋಷದಿಂದ ನನಗೆ ಜಾಗ ಮಾಡಿಕೊಟ್ಟಿದ್ದಾರೆ. ನಮ್ಮ ಪಕ್ಷದ ಎಲ್ಲಾ ನಾಯಕರು ಒಗ್ಗಟ್ಟಿನಿಂದ ಬೆಂಬಲ ನೀಡಿ ಜವಾಬ್ದಾರಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಸ್ರೇಲ್ ಪ್ರಧಾನಿ ನೆತನ್ಯಾಹು ಜೊತೆ ಅಸಮಾಧಾನ: ಖಮೇನಿ ಭೇಟಿಗೆ ಟ್ರಂಪ್ ಒಲವು, ಇರಾನ್ ಕಡೆ ಸ್ನೇಹದ ಹಸ್ತ..?

ಹಿಜ್ಬುಲ್ಲಾಗೆ ಕಟ್ಟುನಿಟ್ಟಿನ ಕಡಿವಾಣ: ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗೆ ಇಸ್ರೇಲ್-ಲೆಬನಾನ್ ಮಹತ್ವದ ಒಪ್ಪಂದ, ಅಮೆರಿಕಾ ಮಧ್ಯಸ್ಥಿಕೆ..!

ಅಮೆರಿಕದಲ್ಲಿ ಭಾರತದ ತ್ರಿವರ್ಣ ಧ್ವಜಕ್ಕೆ ಅವಮಾನ: ‘F* India’ ಘೋಷಣೆ ಕೂಗಿ, ಬಾವುಟ ಹರಿದು ಹೀನ ಕೃತ್ಯ, ಭಾರೀ ಆಕ್ರೋಶ..!

ಬಿಹಾರ: ಮುಜಫರ್‌ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: ಮೂವರ ಸಾವು, 20ಕ್ಕೂ ಹೆಚ್ಚು ರೋಗಿಗಳಿಗೆ ಗಾಯ

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್; ಭಾರತ್ ಜೋಡೋ ಯುವ ಸಂಘಕ್ಕೆ 10 ಲಕ್ಷ ರೂ: ನೂತನ CM ಡಿಕೆಶಿ ಹಲವು ಘೋಷಣೆ

SCROLL FOR NEXT