ಜಿಬಿಎ 
ರಾಜ್ಯ

ಆದಷ್ಟು ಬೇಗ ಜಿಬಿಎ ಚುನಾವಣೆ ನಡೆಸಿ: ಹೊಸ ಸರ್ಕಾರಕ್ಕೆ ಸಿ. ನಾರಾಯಣ ಸ್ವಾಮಿ ಆಗ್ರಹ

ರಾಜ್ಯದ ಹೊಸ ಮುಖ್ಯಮಂತ್ರಿಗಳು ಈ ವಿಷಯಕ್ಕೆ ಆದ್ಯತೆ ನೀಡಬೇಕು ಮತ್ತು ಕೇಂದ್ರದಿಂದ ಬರಬೇಕಾದ ಅನುದಾನ ಪಡೆಯಬೇಕು ಎಂದು ಅವರು ಮನವಿ ಮಾಡಿದರು.

ಬೆಂಗಳೂರು: ಬಹುಕಾಲದಿಂದ ಬಾಕಿ ಉಳಿದಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಚುನಾವಣೆಗಳನ್ನು ಆದಷ್ಟು ಬೇಗ ನಡೆಸುವಂತೆ ಐದನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಮತ್ತು ಮಾಜಿ ಸಂಸತ್ ಸದಸ್ಯ ಡಾ. ಸಿ. ನಾರಾಯಣಸ್ವಾಮಿ ಹೊಸದಾಗಿ ರಚನೆಯಾದ ರಾಜ್ಯ ಸಚಿವ ಸಂಪುಟವನ್ನು ಒತ್ತಾಯಿಸಿದ್ದಾರೆ.

ಚುನಾವಣೆ ವಿಳಂಬದಿಂದಾಗಿ ಬೆಂಗಳೂರಿಗೆ ಸುಮಾರು 10,000 ಕೋಟಿ ರೂ. ಕೇಂದ್ರ ಹಣಕಾಸು ನೆರವು ಸಿಗುತ್ತಿಲ್ಲ ಎಂದು ಹೇಳಿದರು. ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಭಾರತೀಯ ಸಾರ್ವಜನಿಕ ಆಡಳಿತ ಸಂಸ್ಥೆಯ (ಐಐಪಿಎ) ಕರ್ನಾಟಕ ಪ್ರಾದೇಶಿಕ ಶಾಖೆ ಆಯೋಜಿಸಿದ್ದ "ಸ್ಥಳೀಯ ಸಂಸ್ಥೆಗಳಿಗೆ ನಿಧಿಯ ವಿಕೇಂದ್ರೀಕರಣ - ಐದನೇ ಕರ್ನಾಟಕ ರಾಜ್ಯ ಹಣಕಾಸು ಆಯೋಗದ ವರದಿ" ಎಂಬ ವಿಷಯದ ಕುರಿತು ಪ್ರಮುಖ ಭಾಷಣ ಮಾಡಿದರು.

ರಾಜ್ಯದ ಹೊಸ ಮುಖ್ಯಮಂತ್ರಿಗಳು ಈ ವಿಷಯಕ್ಕೆ ಆದ್ಯತೆ ನೀಡಬೇಕು ಮತ್ತು ಕೇಂದ್ರದಿಂದ ಬರಬೇಕಾದ ಅನುದಾನ ಪಡೆಯಬೇಕು ಎಂದು ಅವರು ಮನವಿ ಮಾಡಿದರು.1993 ರಲ್ಲಿ ಜಾರಿಗೆ ತರಲಾದ 73 ನೇ ಮತ್ತು 74 ನೇ ಸಾಂವಿಧಾನಿಕ ತಿದ್ದುಪಡಿಗಳು ಸ್ಥಳೀಯ ಸಂಸ್ಥೆಗಳಿಗೆ ಸಬಲೀಕರಣ ಮತ್ತು ಅಧಿಕಾರದ ವಿಕೇಂದ್ರೀಕರಣದ ಹೊಸ ಯುಗಕ್ಕೆ ನಾಂದಿ ಹಾಡಿದವು ಎಂದು ಡಾ. ನಾರಾಯಣಸ್ವಾಮಿ ಹೇಳಿದರು.

15ನೇ ಹಣಕಾಸು ಆಯೋಗವು ನಿಗದಿಪಡಿಸಿದ ಷರತ್ತುಗಳನ್ನು ಪಾಲಿಸಲು ಕರ್ನಾಟಕ ವಿಫಲವಾದ ಕಾರಣ ಅನುದಾನಗಳನ್ನು ತಡೆಹಿಡಿಯಲಾಗಿದೆ, ಇದರ ಪರಿಣಾಮವಾಗಿ ಆರ್ಥಿಕ ಹಿನ್ನಡೆ ಉಂಟಾಗಿದೆ ಮತ್ತು ಸ್ಥಳೀಯ ಸಂಸ್ಥೆಗಳು ಕೈಗೊಂಡ ಅಭಿವೃದ್ಧಿ ಕಾರ್ಯಗಳ ಮೇಲೆ ಪರಿಣಾಮ ಬೀರಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕುಸ್ತಿಪಟು ವಿನೇಶ್ ಫೋಗಟ್ ಪ್ರಕರಣ; WFIಗೆ ಭಾರೀ ಹಿನ್ನೆಡೆ, ಅರ್ಜಿ ಅನಗತ್ಯ ಎಂದು ವಜಾಗೊಳಿಸಿದ ಸುಪ್ರೀಂ ಕೋರ್ಟ್..!

ಇಸ್ರೇಲ್ ಪ್ರಧಾನಿ ನೆತನ್ಯಾಹು ಜೊತೆ ಅಸಮಾಧಾನ: ಖಮೇನಿ ಭೇಟಿಗೆ ಟ್ರಂಪ್ ಒಲವು, ಇರಾನ್ ಕಡೆ ಸ್ನೇಹದ ಹಸ್ತ..?

'ನಾನೇರಿದೆತ್ತರಕ್ಕೆ ನೀನೇರಬಲ್ಲೆಯಾ'? ನಿರ್ಗಮನಕ್ಕೂ ಉನ್ನತ ಹುದ್ದೆ ಅಲಂಕರಿಸಿ ವಿರೋಧಿಗಳಿಗೆ ಸೆಡ್ಡು ಹೊಡೆದ 'ರಾಜನೀತಿಜ್ಞ' ಸಿದ್ದರಾಮಯ್ಯ!

ಹಿಜ್ಬುಲ್ಲಾಗೆ ಕಟ್ಟುನಿಟ್ಟಿನ ಕಡಿವಾಣ: ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗೆ ಇಸ್ರೇಲ್-ಲೆಬನಾನ್ ಮಹತ್ವದ ಒಪ್ಪಂದ, ಅಮೆರಿಕಾ ಮಧ್ಯಸ್ಥಿಕೆ..!

ಮುಂದಿನ ಶತಮಾನ ಯಾರಿಗೆ ಸೇರಿದ್ದು? ನಿರ್ಧರಿಸುವುದು R&D ಮೇಲಿನ ಹೂಡಿಕೆ! (ಹಣಕ್ಲಾಸು)

SCROLL FOR NEXT