ಸಂಗ್ರಹ ಚಿತ್ರ 
ರಾಜ್ಯ

ಮುಂಗಾರು ಚುರುಕು: ಕೇರಳಕ್ಕೆ ಇಂದು ಎಂಟ್ರಿ; 2 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್ ಘೋಷಣೆ..!

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು: ರಾಜ್ಯದ ಜನರು ಕಾತರದಿಂದ ಕಾಯುತ್ತಿರುವ ನೈಋತ್ಯ ಮುಂಗಾರು (SWM) ಕೊನೆಗೂ ಚುರುಕುಗೊಂಡಿದ್ದು, ಗುರುವಾರ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಕೇರಳ ಪ್ರವೇಶಿಸಿದ ಬಳಿಕ ಮುಂದಿನ ಎರಡು ದಿನಗಳಲ್ಲಿ ಮುಂಗಾರು ಕರ್ನಾಟಕಕ್ಕೂ ಆಗಮಿಸುವ ನಿರೀಕ್ಷೆಯಿದೆ.

ಈ ಕುರಿತು ಮಾಹಿತಿ ನೀಡಿರುವ ಎನ್. ಪುವಿಯರಸನ್, ಮುಂಗಾರು ಪ್ರವೇಶಕ್ಕೆ ಅಗತ್ಯವಿರುವ ಹವಾಮಾನ ಪರಿಸ್ಥಿತಿಗಳು ಅನುಕೂಲಕರವಾಗಿವೆ ಎಂದು ತಿಳಿಸಿದ್ದಾರೆ. ಗಾಳಿಯ ದಿಕ್ಕು, ವೇಗ ಹಾಗೂ ವಾತಾವರಣದಲ್ಲಿನ ವಿವಿಧ ಅಂಶಗಳು ಮುಂಗಾರು ಮುಂದುವರಿಯಲು ನೆರವಾಗುತ್ತಿವೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಮುಂಗಾರು ಅಧಿಕೃತವಾಗಿ ಯಾವ ದಿನ ಪ್ರವೇಶಿಸಲಿದೆ ಎಂಬುದನ್ನು ಗುರುವಾರ ಮುಂಗಾರು ಗಾಳಿಯ ವ್ಯಾಪ್ತಿಯನ್ನು ಪರಿಶೀಲಿಸಿದ ಬಳಿಕ ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ.

ಇದರ ನಡುವೆಯೇ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಮುಂದಿನ ಐದು ದಿನಗಳ ಕಾಲ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಗುಡುಗು, ಮಿಂಚು, ಬಿರುಗಾಳಿ ಹಾಗೂ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ನೈಋತ್ಯ ಮುಂಗಾರು ಅರಬ್ಬಿ ಸಮುದ್ರದ ನೈಋತ್ಯ ಮತ್ತು ಆಗ್ನೇಯ ಭಾಗಗಳು, ಲಕ್ಷದ್ವೀಪ, ಕೇರಳ ಮತ್ತು ತಮಿಳುನಾಡಿನ ಕೆಲವು ಪ್ರದೇಶಗಳು ಹಾಗೂ ಬಂಗಾಳ ಕೊಲ್ಲಿಯ ಹಲವು ಭಾಗಗಳತ್ತ ಮುಂದುವರಿಯಲು ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ ಹವಾಮಾನ ತಜ್ಞರು ಹೇಳಿದ್ದಾರೆ.

ಇದಲ್ಲದೆ, ಪಶ್ಚಿಮ ಉತ್ತರ ಪ್ರದೇಶದಿಂದ ಉತ್ತರ ತಮಿಳುನಾಡುವರೆಗೆ ವಿಸ್ತರಿಸಿರುವ ವಾಯುಭಾರ ಕುಸಿತ ವಾತಾವರಣ, ದಕ್ಷಿಣ ಕೇರಳ ಕರಾವಳಿ ಸಮೀಪ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮಟ್ಟದ ಚಂಡಮಾರುತೀಯ ವಲಯ ಹಾಗೂ ಕರಾವಳಿ ಕರ್ನಾಟಕದ ಸಮೀಪದ ವಾತಾವರಣದ ಬೆಳವಣಿಗೆಗಳು ಮುಂಗಾರು ಚುರುಕುಗೊಳ್ಳಲು ನೆರವಾಗುತ್ತಿವೆ.

ಗಮನಾರ್ಹ ಸಂಗತಿಯೆಂದರೆ, ಹವಾಮಾನ ಇಲಾಖೆ ಈ ಹಿಂದೆ ಮೇ 26 ಅಥವಾ 27ರ ವೇಳೆಗೆ ಮುಂಗಾರು ಕೇರಳ ಪ್ರವೇಶಿಸಬಹುದು ಎಂದು ಅಂದಾಜಿಸಿತ್ತು. ಆದರೆ, ಅನುಕೂಲಕರವಲ್ಲದ ಹವಾಮಾನ ಪರಿಸ್ಥಿತಿಗಳಿಂದಾಗಿ ಮುಂಗಾರು ಪ್ರವೇಶ ವಿಳಂಬವಾಗಿತ್ತು.

ಇದೀಗ ಪರಿಸ್ಥಿತಿಗಳು ಅನುಕೂಲಕರವಾಗಿರುವುದರಿಂದ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಗಗಳಲ್ಲಿ ಮಳೆ ಚಟುವಟಿಕೆಗಳು ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಸ್ರೇಲ್ ಪ್ರಧಾನಿ ನೆತನ್ಯಾಹು ಜೊತೆ ಅಸಮಾಧಾನ: ಖಮೇನಿ ಭೇಟಿಗೆ ಟ್ರಂಪ್ ಒಲವು, ಇರಾನ್ ಕಡೆ ಸ್ನೇಹದ ಹಸ್ತ..?

ಹಿಜ್ಬುಲ್ಲಾಗೆ ಕಟ್ಟುನಿಟ್ಟಿನ ಕಡಿವಾಣ: ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗೆ ಇಸ್ರೇಲ್-ಲೆಬನಾನ್ ಮಹತ್ವದ ಒಪ್ಪಂದ, ಅಮೆರಿಕಾ ಮಧ್ಯಸ್ಥಿಕೆ..!

ಮುಂದಿನ ಶತಮಾನ ಯಾರಿಗೆ ಸೇರಿದ್ದು? ನಿರ್ಧರಿಸುವುದು R&D ಮೇಲಿನ ಹೂಡಿಕೆ! (ಹಣಕ್ಲಾಸು)

ಅಮೆರಿಕದಲ್ಲಿ ಭಾರತದ ತ್ರಿವರ್ಣ ಧ್ವಜಕ್ಕೆ ಅವಮಾನ: ‘F* India’ ಘೋಷಣೆ ಕೂಗಿ, ಬಾವುಟ ಹರಿದು ಹೀನ ಕೃತ್ಯ, ಭಾರೀ ಆಕ್ರೋಶ..!

ಬಿಹಾರ: ಮುಜಫರ್‌ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: ಮೂವರ ಸಾವು, 20ಕ್ಕೂ ಹೆಚ್ಚು ರೋಗಿಗಳಿಗೆ ಗಾಯ

SCROLL FOR NEXT