ಡಿಕೆ ಶಿವಕುಮಾರ್, ಮುಸ್ಲಿಂ ಮುಖಂಡರು PTI
ರಾಜ್ಯ

ಮುಸ್ಲಿಂ ಸಮುದಾಯಕ್ಕೆ 5 ಸಚಿವ ಸ್ಥಾನ ಕೊಡಿ, ಇಲ್ಲವೆ ಪರಿಣಾಮ ನೆಟ್ಟಗಿರಲ್ಲ: ಕಾಂಗ್ರೆಸ್‌ಗೆ ಮೌಲ್ವಿಗಳ ನೇರ ಎಚ್ಚರಿಕೆ

ಕರ್ನಾಟಕದಲ್ಲಿ ಐವರು ಮುಸ್ಲಿಂ ಸದಸ್ಯರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಮುಸ್ಲಿಂ ಧಾರ್ಮಿಕ ಮುಖಂಡರು ಮತ್ತು ಮೌಲ್ವಿಗಳು ಒತ್ತಾಯಿಸಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ಮುಸ್ಲಿಂ ಮತದಾರರ ಬೆಂಬಲದೊಂದಿಗೆ ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಪ್ರತಿಪಾದಿಸಿದರು.

ಹುಬ್ಬಳ್ಳಿ: ಕರ್ನಾಟಕದಲ್ಲಿ ಐವರು ಮುಸ್ಲಿಂ ಸದಸ್ಯರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಮುಸ್ಲಿಂ ಧಾರ್ಮಿಕ ಮುಖಂಡರು ಮತ್ತು ಮೌಲ್ವಿಗಳು ಒತ್ತಾಯಿಸಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ಮುಸ್ಲಿಂ ಮತದಾರರ ಬೆಂಬಲದೊಂದಿಗೆ ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಪ್ರತಿಪಾದಿಸಿದ್ದಾರೆ. ತಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಕಾಂಗ್ರೆಸ್ ನಾಯಕತ್ವಕ್ಕೆ ಎಚ್ಚರಿಕೆ ನೀಡಿದ್ದಾರೆ.

ಹುಬ್ಬಳ್ಳಿಯ ಬೆಳ್ಳಿನಗರದ ಹಜರತ್ ಸೈಯದ್ ಫತೇಹ್ ಶಾ ವಾಲಿ ದರ್ಗಾದಲ್ಲಿ ನಡೆದ ಮುಸ್ಲಿಂ ನಾಯಕರು ಮತ್ತು ಧರ್ಮಗುರುಗಳ ಸಭೆಯಲ್ಲಿ ಈ ಬೇಡಿಕೆಯನ್ನು ಇಟ್ಟಿದ್ದಾರೆ. ಅಲ್ಲಿ ವಿಶೇಷ ಪ್ರಾರ್ಥನೆಗಳನ್ನು ಸಹ ಸಲ್ಲಿಸಿದರು. ಜಮೀರ್ ಅಹ್ಮದ್ ಖಾನ್, ಎನ್ಎ ಹ್ಯಾರಿಸ್, ತನ್ವೀರ್ ಸೇಠ್ ಮತ್ತು ಸಲೀಮ್ ಅಹ್ಮದ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವಂತೆಯೂ ಕರೆ ನೀಡಲಾಯಿತು.

ಐದು ಮುಸ್ಲಿಮರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡದಿದ್ದರೆ, ಮುಂದಿನ ದಿನಗಳಲ್ಲಿ ನೀವು ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಆ ಪರಿಸ್ಥಿತಿಗೆ ನೀವೇ ಜವಾಬ್ದಾರರು ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ ಎಂದು ಧಾರ್ಮಿಕ ಮುಖಂಡರೊಬ್ಬರು ಹೇಳಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರುವಲ್ಲಿ ಮುಸ್ಲಿಂ ಸಮುದಾಯವು ಪ್ರಮುಖ ಪಾತ್ರವಹಿಸಿದೆ. ಸರ್ಕಾರದಲ್ಲಿ ಹೆಚ್ಚಿನ ಪ್ರಾತಿನಿಧ್ಯಕ್ಕೆ ಅರ್ಹವಾಗಿದೆ ಎಂದು ನಾಯಕರು ಸಮರ್ಥಿಸಿಕೊಂಡರು.

ಮುಸ್ಲಿಮರೆಲ್ಲರೂ ಒಗ್ಗೂಡಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಬೇಕು ಎಂಬ ನಂಬಿಕೆಯೊಂದಿಗೆ ಮತ ಚಲಾಯಿಸಿದ್ದೇವೆ. ಈ ಸರ್ಕಾರವನ್ನು ಅಧಿಕಾರಕ್ಕೆ ತರಲು ನಾವು ಸಹಾಯ ಮಾಡಿದ್ದೇವೆ. ನಮ್ಮ ಸಮುದಾಯದ ಉಳಿದ ನಾಲ್ವರು ಹಿರಿಯ ನಾಯಕರಿಗೂ ಸಚಿವ ಸ್ಥಾನಗಳನ್ನು ನೀಡಬೇಕೆಂದು ನಾವು ಕೇಳುತ್ತಿದ್ದೇವೆ. ಇಂದು, ನಾವೆಲ್ಲರೂ ಇಲ್ಲಿ ಒಟ್ಟುಗೂಡಿದ್ದೂ ಸಾಮೂಹಿಕವಾಗಿ ಈ ವಿನಂತಿಯನ್ನು ಮಾಡಿದ್ದೇವೆ. ನಾವು ಒಟ್ಟಾಗಿ ಈ ಬೇಡಿಕೆಯನ್ನು ಮುಂದುವರಿಸುತ್ತೇವೆ ಎಂದು ಮತ್ತೊಬ್ಬ ಧರ್ಮಗುರು ಹೇಳಿದರು.

ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಅವರಿಗೆ ಈಗಾಗಲೇ ಪ್ರಮುಖ ಸಾಂವಿಧಾನಿಕ ಸ್ಥಾನದಲ್ಲಿ ಅವಕಾಶ ನೀಡಲಾಗಿದೆ ಎಂದು ಸಭೆಯು ಗಮನಿಸಿತು ಮತ್ತು ಇತರ ನಾಲ್ವರು ಹಿರಿಯ ಮುಸ್ಲಿಂ ಕಾಂಗ್ರೆಸ್ ನಾಯಕರನ್ನು ಸಹ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ವಾದಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಖಾತೆಗಾಗಿ ಫೈಟ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ರಾಮಲಿಂಗಾರೆಡ್ಡಿ!

ಜಾತಿ, ಧರ್ಮ ಯಾವುದೇ ಪ್ರಭಾವಕ್ಕೂ ಮಣಿಯಬೇಡಿ: ಪಾರದರ್ಶಕವಾಗಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಡಿಕೆಶಿ ಸೂಚನೆ​​

ನಾನೇರಿದೆತ್ತರಕ್ಕೆ ನೀನೇರಬಲ್ಲೆಯಾ?: ನಿರ್ಗಮನಕ್ಕೂ ಮುನ್ನ ಉನ್ನತ ಹುದ್ದೆ ಅಲಂಕರಿಸಿ ವಿರೋಧಿಗಳಿಗೆ ಸೆಡ್ಡು ಹೊಡೆದ 'ರಾಜನೀತಿಜ್ಞ' ಸಿದ್ದರಾಮಯ್ಯ!

ಬೇರೆ ದಾರಿಯೇ ಇರಲಿಲ್ಲ, ನಿರ್ಮಾಪಕರ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಸುಳ್ಳು: ನಟಿ ಶಿಲ್ಪಾ ಶಿಂಡೆ ಸ್ಫೋಟಕ ಹೇಳಿಕೆ! Video

ಹಿಜ್ಬುಲ್ಲಾಗೆ ಕಟ್ಟುನಿಟ್ಟಿನ ಕಡಿವಾಣ: ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗೆ ಇಸ್ರೇಲ್-ಲೆಬನಾನ್ ಮಹತ್ವದ ಒಪ್ಪಂದ, ಅಮೆರಿಕಾ ಮಧ್ಯಸ್ಥಿಕೆ..!

SCROLL FOR NEXT