ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ. 
ರಾಜ್ಯ

Rajya sabha election: ಕರ್ನಾಟಕದಿಂದ ನಾಮಪತ್ರ ಸಲ್ಲಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಎಐಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ಪವನ್‌ ಖೇರಾ, ಎಐಸಿಸಿ ಕಾರ್ಯದರ್ಶಿ ಮನ್ಸೂರ್‌ ಆಲಿ ಖಾನ್‌ ಕೂಡ ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಗೆ ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸಲಿದ್ದು, ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಯಾಗಿರುವ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಎಐಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ಪವನ್‌ ಖೇರಾ, ಎಐಸಿಸಿ ಕಾರ್ಯದರ್ಶಿ ಮನ್ಸೂರ್‌ ಆಲಿ ಖಾನ್‌ ಕೂಡ ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ, ಕೆಸಿ ವೇಣುಗೋಪಾಲ್ ಮತ್ತು ಹಲವಾರು ಸಚಿವರು ಈ ವೇಳೆ ಇದ್ದರು.

ಖರ್ಗೆ ಅವರು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದು, ಕರ್ನಾಟಕವನ್ನು ಪ್ರತಿನಿಧಿಸುತ್ತಿದ್ದಾರೆ. ಸಂಸತ್ತಿನ ಮೇಲ್ಮನೆಯಲ್ಲಿ ಅವರ ಅವಧಿ ಜೂನ್ 25 ರಂದು ಕೊನೆಗೊಳ್ಳಲಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ, ನಾರಾಯಣ ಕೊರಗಪ್ಪ, ಈರಣ್ಣ ಕಡಾಡಿ ಅವರ ಅವಧಿ ಮುಕ್ತಾಯವಾಗಲಿದ್ದು, ಕರ್ನಾಟಕದಿಂದ ಆಯ್ಕೆಯಾಗಬೇಕಾದ ರಾಜ್ಯಸಭೆಯ ಈ ನಾಲ್ಕು ಸ್ಥಾನಗಳು ಸೇರಿ ರಾಜ್ಯಸಭೆಯ ಒಟ್ಟು 24 ಸ್ಥಾನಗಳಿಗೆ ಇದೇ 18 ರಂದು ಚುನಾವಣೆ ನಡೆಯಲಿದೆ.

ವಿಧಾನಸಭೆಯಲ್ಲಿ ಈಗಿರುವ ಸದಸ್ಯರ ಬಲದಲ್ಲಿ ಕಾಂಗ್ರೆಸ್ 3 ಹಾಗೂ ವಿರೋಧ ಪಕ್ಷ ಬಿಜೆಪಿ ಒಂದು ಸ್ಥಾನ ಗೆಲ್ಲಬಹುದಾಗಿದೆ.

ನಾಮಪತ್ರ ಸಲ್ಲಿಸಲು ಜೂನ್ 8 ಕೊನೆ ದಿನವಾಗಿದ್ದು, ನಾಮಪತ್ರಗಳ ಪರಿಶೀಲನೆ 9ಕ್ಕೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು 10 ಕೊನೆ ದಿನವಾಗಿದೆ. ಮತದಾನ ನಡೆದ ಜೂನ್ 18 ರಂದು ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿ ಕೆ ಶಿವಕುಮಾರ್ ಸರ್ಕಾರದ ಮೊದಲ ವಿಕೆಟ್ ಪತನ: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ-Video

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಮೂವರು ಕುಕಿ ಗ್ರಾಮಸ್ಥರ ಹತ್ಯೆ; ಏಳು ಮನೆಗಳಿಗೆ ಬೆಂಕಿ!

ಅಣ್ಣಾಮಲೈ ರಾಜೀನಾಮೆ ಕೊನೆಗೂ ಅಂಗೀಕಾರ: 6 ವರ್ಷಗಳ ಬಿಜೆಪಿ ಸಂಬಂಧಕ್ಕೆ ತಿಲಾಂಜಲಿ!

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆಯೂ Repo ದರ ಯಥಾಸ್ಥಿತಿ: ಶೇ.5.25ದಲ್ಲೇ ಮುಂದುವರಿಸಿದ RBI, ಸಾಲಗಾರರಿಗೆ ಬಿಗ್ ರಿಲೀಫ್..!

ಮೋದಿ ಮೇಲೆ ಒತ್ತಡ ಹೇರುವುದು ವ್ಯರ್ಥ, ಭಾರತ-ರಷ್ಯಾ ಸಂಬಂಧ ದುರ್ಬಲಗೊಳಿಸುವ ಪಾಶ್ಚಾತ್ಯ ರಾಷ್ಟ್ರಗಳ ತಂತ್ರ ಫಲಿಸುವುದಿಲ್ಲ: ಪುಟಿನ್

SCROLL FOR NEXT