ಎಸಿ ಹೆಲ್ಮೆಟ್ 
ರಾಜ್ಯ

ಬೆಂಗಳೂರು ಸಂಚಾರ ಪೊಲೀಸರ ತಲೆ ತಂಪಾಗಿಸಲು ಎಸಿ ಹೆಲ್ಮೆಟ್‌!

ಹವಾಮಾನ ಬದಲಾವಣೆ ಹಾಗೂ ಹೆಚ್ಚುತ್ತಿರುವ ಉಷ್ಣಾಂಶದ ಪರಿಣಾಮವಾಗಿ ಹೊರಾಂಗಣದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯ ಆರೋಗ್ಯ ರಕ್ಷಣೆ ಅಗತ್ಯವಾಗಿದೆ ಎಂದು ಆಯುಕ್ತರು ಹೇಳಿದರು.

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಉಷ್ಣಾಂಶದಲ್ಲಿ ಸುರಕ್ಷಿತವಾಗಿ ಕಾರ್ಯನಿರ್ವಹಿಸಲು ಅನುವಾಗುವಂತೆ ಸಂಚಾರ ಪೊಲೀಸರಿಗೆ ಹೀಟ್–ಹೆಲ್ತ್ ಪ್ರೋಟೋಕಾಲ್ ಯೋಜನೆಯಡಿ ಕೂಲಿಂಗ್‌ ಕಿಟ್‌ ನೀಡಲಾಗಿದೆ.

ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ನೇತೃತ್ವದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ, ಸಂಚಾರ ಪೊಲೀಸ್ ಸಿಬ್ಬಂದಿಗೆ ಬಿಸಿಲಿನ ಪರಿಣಾಮಗಳು, ಆರೋಗ್ಯದ ಮೇಲೆ ಉಂಟಾಗುವ ತೊಂದರೆಗಳು ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಅರಿವು ಮೂಡಿಸಿ, ಆರೋಗ್ಯ ರಕ್ಷಣೆಗಾಗಿ ‘ಎಸಿ ಹೆಲ್ಮೆಟ್ ಗಳನ್ನು ವಿತರಿಸಲಾಯಿತು.

ಸಿ40, ಸೆನ್ಸಿಂಗ್‌ ಲೋಕಲ್‌ ಹಾಗೂ ಹಸಿರು ದಳ ಸಂಸ್ಥೆಗಳ ಸಹಯೋಗದಲ್ಲಿ ‘ಹೀಟ್–ಹೆಲ್ತ್ ಪ್ರೋಟೋಕಾಲ್’ ಯೋಜನೆ ಆರಂಭಿಸಲಾಗಿದೆ. ಹವಾಮಾನ ಬದಲಾವಣೆ ಹಾಗೂ ಹೆಚ್ಚುತ್ತಿರುವ ಉಷ್ಣಾಂಶದ ಪರಿಣಾಮವಾಗಿ ಹೊರಾಂಗಣದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯ ಆರೋಗ್ಯ ರಕ್ಷಣೆ ಅಗತ್ಯವಾಗಿದೆ ಎಂದು ಆಯುಕ್ತರು ಹೇಳಿದರು.

ಉತ್ತರ ನಗರ ಪಾಲಿಕೆಯ ಪೌರಕಾರ್ಮಿಕರಿಗೆ ಇದೇ ಮಾದರಿಯ ಆರೋಗ್ಯ ರಕ್ಷಣಾ ಕಿಟ್‌ಗಳನ್ನು ವಿತರಿಸಲಾಗಿದೆ. ಇದೀಗ ಸಂಚಾರ ಪೊಲೀಸ್ ಸಿಬ್ಬಂದಿಗೂ ವಿತರಿಸಲಾಗುತ್ತಿದೆ. ಕಿಟ್‌ಗಳ ಬಳಕೆ ಮತ್ತು ಪರಿಣಾಮಕಾರಿತ್ವದ ಕುರಿತು ಅಭಿಪ್ರಾಯಗಳನ್ನು ಸಂಗ್ರಹಿಸಿ, ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಗೆ ಈ ಸೌಲಭ್ಯವನ್ನು ವಿಸ್ತರಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬೆಂಗಳೂರು ನಗರದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಿಸಿಲಿನಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯ ಆರೋಗ್ಯ ಕಾಪಾಡಲು ಈ ಕಿಟ್‌ಗಳು ಸಹಕಾರಿಯಾಗಲಿವೆ. ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆರೋಗ್ಯ ರಕ್ಷಿಸಿಕೊಳ್ಳುವಂತೆ ಸಲಹೆ ನೀಡಿದರು.

ಮುಂದಿನ ದಿನಗಳಲ್ಲಿ ಇಂದಿರಾ ಕ್ಯಾಂಟೀನ್‌ಗಳು ಹಾಗೂ ಕೆಲವು ಸರ್ಕಾರಿ ಕಚೇರಿಗಳಲ್ಲಿ ಶಾಖ ನಿಯಂತ್ರಣ ಮತ್ತು ತಂಪು ವಾತಾವರಣ ಕಲ್ಪಿಸುವ ವ್ಯವಸ್ಥೆಗಳನ್ನು ರೂಪಿಸುವ ಕುರಿತು ಯೋಜನೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿ ಕೆ ಶಿವಕುಮಾರ್ ಸರ್ಕಾರದ ಮೊದಲ ವಿಕೆಟ್ ಪತನ: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ-Video

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಮೂವರು ಕುಕಿ ಗ್ರಾಮಸ್ಥರ ಹತ್ಯೆ; ಏಳು ಮನೆಗಳಿಗೆ ಬೆಂಕಿ!

ಹಿಜಾಬ್ ವಿರೋಧಿಸಿ ಪ್ರತಿಭಟನೆ: ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಯತ್ನಿಸಿದ ಯತ್ನಾಳ್, ಬೆಂಬಲಿಗರು ಪೊಲೀಸ್ ವಶಕ್ಕೆ

ಅಣ್ಣಾಮಲೈ ರಾಜೀನಾಮೆ ಕೊನೆಗೂ ಅಂಗೀಕಾರ: ಆರು ವರ್ಷಗಳ ಬಿಜೆಪಿ ಸಂಬಂಧಕ್ಕೆ ತಿಲಾಂಜಲಿ!

Rajya sabha election: ಕರ್ನಾಟಕದಿಂದ ನಾಮಪತ್ರ ಸಲ್ಲಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

SCROLL FOR NEXT