ಡಿಕೆ ಶಿವಕುಮಾರ್, ರಾಹುಲ್ ಗಾಂಧಿ 
ರಾಜ್ಯ

ಮನವೊಲಿಸಿ, ಮನವೊಲಿಕೆಗೆ ಬಗ್ಗದಿದ್ದರೆ ರಾಜೀನಾಮೆ ಅಂಗೀಕರಿಸಿ: ರಾಹುಲ್ ಗಾಂಧಿ ಖಡಕ್ ಸೂಚನೆ!

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಖಾತೆ ಹಂಚಿಕೆ ವಿಷಯದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸರ್ಕಾರ ರಚನೆ ಆದ ಮೂರೇ ದಿನದಲ್ಲಿ ಮೊದಲ ವಿಕೆಟ್​ ಪತನವಾಗಿದೆ. ಖಾತೆ ಹಂಚಿಕೆ ವಿಚಾರವಾಗಿ ರಾಮಲಿಂಗಾರೆಡ್ಡಿ ಅಸಮಾಧಾನಗೊಂಡಿದ್ದು ರಾಜೀನಾಮೆ ನೀಡಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಖಾತೆ ಹಂಚಿಕೆ ವಿಷಯದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸರ್ಕಾರ ರಚನೆ ಆದ ಮೂರೇ ದಿನದಲ್ಲಿ ಮೊದಲ ವಿಕೆಟ್​ ಪತನವಾಗಿದೆ. ಖಾತೆ ಹಂಚಿಕೆ ವಿಚಾರವಾಗಿ ರಾಮಲಿಂಗಾರೆಡ್ಡಿ ಅಸಮಾಧಾನಗೊಂಡಿದ್ದು ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಕೆ.ಹೆಚ್​​ ಮುನಿಯಪ್ಪ ಕೂಡ ಅಸಮಾಧಾನ ಹೊರಹಾಕಿದ್ದಾರೆ. ಇದು ಸದ್ಯ ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ತೋರಿಸುತ್ತಿದೆ.

ಇನ್ನು ರಾಜ್ಯ ಕಾಂಗ್ರೆಸ್ ನಲ್ಲಿ ಸಚಿವರು ಅಸಾಧಾನಗೊಂಡಿರುವ ವಿಚಾರ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ಗಮನಕ್ಕೆ ತರಲಾಗಿದೆ. ಈ ಬಗ್ಗೆ ರಾಜ್ಯ ಕಾಂಗ್ರೆಸ್​​ ಉಸ್ತುವಾರಿ ರಣದೀಪ್​​ ಸುರ್ಜೆವಾಲಾಗೆ ರಾಹುಲ್​ ಗಾಂಧಿಗೆ ಮಾಹಿತಿ ನೀಡಿದರು. ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿರುವ ರಾಹುಲ್ ಗಾಂಧಿ, ಮನವೊಲಿಸಿ, ಮನವೊಲಿಕೆಗೆ ಬಗ್ಗದಿದ್ದರೆ ರಾಜೀನಾಮೆ ಅಂಗೀಕರಿಸಿ ಎಂದು ಕಡ್ಡಿಮುರಿದಂತೆ ರಾಜ್ಯ ನಾಯಕರಿಗೆ ಖಡಕ್ ಸೂಚನೆ ನೀಡಿದ್ದಾರೆ.

ಇನ್ನು ರಾಮಲಿಂಗಾರೆಡ್ಡಿ ರಾಜಿನಾಮೆ ನೀಡಿದ ಬಳಿಕ ಯಾರ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಅಸಮಾಧಾನ ತಣಿಸಲು ಸಿಎಂ ಡಿಕೆ ಶಿವಕುಮಾರ್​ ಅವರು ರಾಮಲಿಂಗಾರೆಡ್ಡಿ ಸಂಪರ್ಕಕ್ಕೆ ಪ್ರಯತ್ನಿಸಿದ್ದು ಆದರೆ ರಾಮಲಿಂಗಾರೆಡ್ಡಿ ಮೊಬೈಲ್​ ಸ್ವಿಚ್​ ಆಫ್ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ರಾಮಲಿಂಗಾರೆಡ್ಡಿ ಬೆಂಗಳೂರು ನಗರಾಭಿವೃದ್ಧಿ ಖಾತೆಗಾಗಿ ಪಟ್ಟು ಹಿಡಿದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಮಲಿಂಗಾರೆಡ್ಡಿಗೆ ಮಾತು ಕೊಟ್ಟಿದ್ದು ನಿಜ, ಆದ್ರೆ...: ಖಾತೆ ಕೈತಪ್ಪಲು ಕಾರಣ ಬಿಚ್ಚಿಟ್ಟ CM ಡಿಕೆ ಶಿವಕುಮಾರ್

ಅಧಿಕಾರ ಹೋದ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ; ಎದುರಿಗೆ ಬಂದರೂ DKS-Siddu ನಡುವೆ ಮಾತಿಲ್ಲ, ಕಥೆಯಿಲ್ಲ, Video!

ಗಡಿಭದ್ರತೆಗೆ ಹೈಟೆಕ್ ಟಚ್: ಶೀಘ್ರದಲ್ಲೇ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಸ್ಮಾರ್ಟ್ ಬಾರ್ಡರ್; ಅಮಿತ್ ಶಾ

ಮಹಾರಾಜ ಟ್ರೋಫಿ 2026 ಹರಾಜು: IPL ಮುಗಿದ ಬೆನ್ನಲ್ಲೇ ಹೊಸ ಟಿ20 ತಂಡ ಸೇರಿಕೊಂಡ ಪಡಿಕ್ಕಲ್

ರೆಬೆಲ್ ಶಾಸಕರ ಸಂಪರ್ಕದಲ್ಲಿ 23 TMC ಸಂಸದರು! ಮಮತಾ ಬ್ಯಾನರ್ಜಿಗೆ ಹೆಚ್ಚಿದ ಸಂಕಷ್ಟ- ಮೂಲಗಳು

SCROLL FOR NEXT