ಹೈಕೋರ್ಟ್  
ರಾಜ್ಯ

ಬಡ ಭೂಮಾಲೀಕರ ಹಿತಾಸಕ್ತಿಗೆ ಧಕ್ಕೆ ತಂದು ಸರ್ಕಾರ ಭೂಮಿ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ: ಹೈಕೋರ್ಟ್

2013ರಲ್ಲಿ ಭೂಮಾಲೀಕರು ಸಲ್ಲಿಸಿದ್ದ ಮೇಲ್ಮನವಿಗಳನ್ನು ಅಂಗೀಕರಿಸಿದ ನ್ಯಾಯಪೀಠವು, KIADB ಮತ್ತು IMTMA ಸಲ್ಲಿಸಿದ್ದ ಮೇಲ್ಮನವಿಗಳನ್ನು ವಜಾಗೊಳಿಸಿದೆ. ಜೊತೆಗೆ, ಏಕಸದಸ್ಯ ನ್ಯಾಯಮೂರ್ತಿಗಳ ಆದೇಶವನ್ನು ರದ್ದುಪಡಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನೇ ಅಮಾನ್ಯಗೊಳಿಸಿದೆ.

ಬೆಂಗಳೂರು: ಲಾಭ ಗಳಿಸುವ ಖಾಸಗಿ ಸಂಸ್ಥೆಯ ವಿಸ್ತರಣೆಗೆ ಭೂಮಿ ಸ್ವಾಧೀನಪಡಿಸಿಕೊಳ್ಳುವುದು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಕಾಯ್ದೆಯ ಉದ್ದೇಶಕ್ಕೆ ವಿರುದ್ಧವಾಗಿದ್ದು, ಅಲ್ಪ ಪರಿಹಾರ ನೀಡಿ ಜನರ ಭೂಮಿಯನ್ನು ಕಸಿದುಕೊಳ್ಳಲು ಅಧಿಕಾರಿಗಳು ಕಾನೂನಿನ ಮೇಲೆ ನಡೆಸಿದ ವಂಚನೆಯಾಗಿದೆ ಎಂದು ಹೈಕೋರ್ಟ್ ಛೀಮಾರಿ ಹಾಕಿದೆ.

ಇಂತಹ ಅಧಿಕಾರ ಬಳಕೆ ಕಾನೂನುಬದ್ಧ ಹಾಗೂ ಸಂವಿಧಾನಾತ್ಮಕ ವಂಚನೆಯಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರ (BIEC)ದ ಪಾರ್ಕಿಂಗ್ ವಲಯಕ್ಕಾಗಿ ಸ್ವಾಧೀನಪಡಿಸಿಕೊಂಡಿದ್ದ ಭೂಮಿಯ ಸ್ವಾಧೀನ ಪ್ರಕ್ರಿಯೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

ನ್ಯಾಯಮೂರ್ತಿಗಳಾದ ಡಿ ಕೆ ಸಿಂಗ್ ಮತ್ತು ಟಿ ಎಂ ನಡಾಫ್ ಅವರಿದ್ದ ವಿಭಾಗೀಯ ಪೀಠ ಮಹತ್ವದ ತೀರ್ಪು ನೀಡಿದೆ. ಈ ಭೂಮಿಯನ್ನು M/s Indian Machine Tools Manufacturers’ Association (IMTMA) ಸ್ಥಾಪಿಸಿರುವ ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದ ಪಾರ್ಕಿಂಗ್ ಪ್ರದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳಲಾಗಿತ್ತು.

“IMTMAಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಸಂಪೂರ್ಣ ಪ್ರಕ್ರಿಯೆಯು ಸಂವಿಧಾನಾತ್ಮಕ ವ್ಯವಸ್ಥೆಗೆ ವಿರುದ್ಧವಾಗಿದೆ,” ಎಂದು ನ್ಯಾಯಪೀಠ ಹೇಳಿದೆ.

2013ರಲ್ಲಿ ಭೂಮಾಲೀಕರು ಸಲ್ಲಿಸಿದ್ದ ಮೇಲ್ಮನವಿಗಳನ್ನು ಅಂಗೀಕರಿಸಿದ ನ್ಯಾಯಪೀಠವು, KIADB ಮತ್ತು IMTMA ಸಲ್ಲಿಸಿದ್ದ ಮೇಲ್ಮನವಿಗಳನ್ನು ವಜಾಗೊಳಿಸಿದೆ. ಜೊತೆಗೆ, ಏಕಸದಸ್ಯ ನ್ಯಾಯಮೂರ್ತಿಗಳ ಆದೇಶವನ್ನು ರದ್ದುಪಡಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನೇ ಅಮಾನ್ಯಗೊಳಿಸಿದೆ.

ಅಂತಿಮ ಅಧಿಸೂಚನೆ ಹೊರಡಿಸಿದ ದಿನಾಂಕದಿಂದ 14 ವರ್ಷಗಳಾದರೂ ಪರಿಹಾರದ ಮೊತ್ತ ನಿಗದಿಪಡಿಸುವ ಪ್ರಶಸ್ತಿ (Award) ಘೋಷಿಸಿಲ್ಲ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆಯು ಕಾಲಹರಣಗೊಂಡಿದೆ ಎಂದು ನಾವು ಅಭಿಪ್ರಾಯಪಡುತ್ತೇವೆ. ಹಣಕಾಸು ದಾಖಲೆಗಳಿಂದ ಸ್ಪಷ್ಟವಾಗುವಂತೆ ಲಾಭದಾಯಕ ಖಾಸಗಿ ಸಂಸ್ಥೆಗಾಗಿ ಸರ್ಕಾರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿರಲಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (KIADB )ಕಾಯ್ದೆಯ ಉದ್ದೇಶವು ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ಭೂಮಿ ಸ್ವಾಧೀನಪಡಿಸಿಕೊಳ್ಳುವುದೇ ಹೊರತು, ನಿರ್ದಿಷ್ಟ ಖಾಸಗಿ ಸಂಸ್ಥೆಗಾಗಿ ಭೂಮಿ ಸಂಗ್ರಹಿಸುವುದಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿಪಡಿಸಿದ ನಂತರ, ಅಲ್ಲಿ ಕೈಗಾರಿಕೆ ಸ್ಥಾಪಿಸಲು ಅರ್ಜಿದಾರರಿಗೆ ಭೂಮಿ ಹಂಚಿಕೆ ಮಾಡಬಹುದು ಎಂದು ತಿಳಿಸಿದೆ.

ಬಡ ಭೂಮಾಲೀಕರ ಹಿತಾಸಕ್ತಿಗೆ ಧಕ್ಕೆ ತಂದು ಸರ್ಕಾರ ತನ್ನ ಆಯ್ಕೆಯ ಖಾಸಗಿ ಸಂಸ್ಥೆಗೆ ಭೂಮಿಯನ್ನು ಒದಗಿಸಲು ಸಾಧ್ಯವಿಲ್ಲ. ಸರ್ಕಾರದ ‘ಎಮಿನೆಂಟ್ ಡೊಮೇನ್’ ಅಧಿಕಾರದ ಬಳಕೆ ಕಾನೂನುಬದ್ಧ ವಂಚನೆಯಾಗಬಾರದು ಅಥವಾ ಖಾಸಗಿ ಕೈಗಳಿಗೆ ಭೂಮಿ ವರ್ಗಾಯಿಸುವ ಸಾಧನವಾಗಬಾರದು ಎಂದು ನ್ಯಾಯಪೀಠ ತನ್ನ ತೀರ್ಪಿನಲ್ಲಿ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿ ಕೆ ಶಿವಕುಮಾರ್ ಸರ್ಕಾರದ ಮೊದಲ ವಿಕೆಟ್ ಪತನ: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ-Video

ಅಣ್ಣಾಮಲೈ ರಾಜೀನಾಮೆ ಕೊನೆಗೂ ಅಂಗೀಕಾರ: 6 ವರ್ಷಗಳ ಬಿಜೆಪಿ ಸಂಬಂಧಕ್ಕೆ ತಿಲಾಂಜಲಿ!

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆಯೂ Repo ದರ ಯಥಾಸ್ಥಿತಿ: ಶೇ.5.25ದಲ್ಲೇ ಮುಂದುವರಿಸಿದ RBI, ಸಾಲಗಾರರಿಗೆ ಬಿಗ್ ರಿಲೀಫ್..!

ಮೋದಿ ಮೇಲೆ ಒತ್ತಡ ಹೇರುವುದು ವ್ಯರ್ಥ, ಭಾರತ-ರಷ್ಯಾ ಸಂಬಂಧ ದುರ್ಬಲಗೊಳಿಸುವ ಪಾಶ್ಚಾತ್ಯ ರಾಷ್ಟ್ರಗಳ ತಂತ್ರ ಫಲಿಸುವುದಿಲ್ಲ: ಪುಟಿನ್

ವರ್ಷಗಳ ಕಾಲ ಅಮೆರಿಕಾವನ್ನು ದುರುಪಯೋಗಪಡಿಸಿಕೊಂಡಿದ್ದಾರೆ: ಭಾರತ ವಿರುದ್ಧ ಮತ್ತೆ ಟ್ರಂಪ್ ಕಿಡಿ

SCROLL FOR NEXT