ಡಿ.ಕೆ ಶಿವಕುಮಾರ್ 
ರಾಜ್ಯ

ಇನ್ನೂ ಸಾಕಷ್ಟು ಹುದ್ದೆಗಳು ಖಾಲಿಯಿವೆ: ಸಂಪುಟದಲ್ಲಿ 'ಸ್ತ್ರೀಶಕ್ತಿ' ಗೆ ಆದ್ಯತೆ ನೀಡದ ಟೀಕೆಗೆ ಸಿಎಂ ಡಿಕೆಶಿ ಉತ್ತರ

ನಾವು ಮಹಿಳೆಯರಿಗಾಗಿ ಎಷ್ಟೆಲ್ಲಾ ಯೋಜನೆಗಳನ್ನು ಪರಿಚಯಿಸಿದ್ದೇವೆ ನೋಡಿ. ಮಹಿಳೆಯರನ್ನು ಹೇಗೆ ಸಬಲೀಕರಣಗೊಳಿಸುವುದು ಮತ್ತು ಬೆಂಬಲಿಸುವುದು ಎಂಬುದರ ಕುರಿತು ನಾವು ಇಡೀ ದೇಶಕ್ಕೆ ಮಾದರಿಯಾಗಿದ್ದೇವೆ ಎಂದಿದ್ದಾರೆ.

ಬೆಂಗಳೂರು: ಮೊದಲ ಕಂತಿನ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಆದ್ಯತೆ ನೀಡದಿರುವುದರ ಕುರಿತು ಬಿಜೆಪಿ ಟೀಕೆಗೆ ಉತ್ತರಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇನ್ನೂ ಬಹಳಷ್ಟು ಹುದ್ದೆಗಳು ಖಾಲಿ ಇವೆ, ನೋಡೋಣ ಎಂದಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ ಹಾಗೂ ಇತರೆ 12 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದರೆ ಮೊದಲ ಕಂತಿನ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶ ನೀಡದಿರುವುದಕ್ಕೆ ಸಾಕಷ್ಟು ಟೀಕೆಗಳು ಎದುರಾಗಿವೆ.

ಈ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ, 'ಕೇವಲ ಒಬ್ಬ ವ್ಯಕ್ತಿಗೆ ಸಂಬಂಧಿಸಿದ್ದಲ್ಲ. ನಾವೆಲ್ಲವೂ ಒಗ್ಗಟ್ಟಾಗಿದ್ದೇವೆ. ಜನರಿಗೋಸ್ಕರ ಮಾಡುವ ಕೆಲಸವನ್ನು ಒಬ್ಬನಿಂದಲೇ ಮಾಡಲು ಸಾಧ್ಯವಿಲ್ಲ' ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆಯೂ ಮುಖ್ಯಮಂತ್ರಿ ಗಮನ ಸೆಳೆದರು. ನಾವು ಮಹಿಳೆಯರಿಗಾಗಿ ಎಷ್ಟೆಲ್ಲಾ ಯೋಜನೆಗಳನ್ನು ಪರಿಚಯಿಸಿದ್ದೇವೆ ನೋಡಿ. ಮಹಿಳೆಯರನ್ನು ಹೇಗೆ ಸಬಲೀಕರಣಗೊಳಿಸುವುದು ಮತ್ತು ಬೆಂಬಲಿಸುವುದು ಎಂಬುದರ ಕುರಿತು ನಾವು ಇಡೀ ದೇಶಕ್ಕೆ ಮಾದರಿಯಾಗಿದ್ದೇವೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೋದಿ ಮೇಲೆ ಒತ್ತಡ ಹೇರುವುದು ವ್ಯರ್ಥ, ಭಾರತ-ರಷ್ಯಾ ಸಂಬಂಧ ದುರ್ಬಲಗೊಳಿಸುವ ಪಾಶ್ಚಾತ್ಯ ರಾಷ್ಟ್ರಗಳ ತಂತ್ರ ಫಲಿಸುವುದಿಲ್ಲ: ಪುಟಿನ್

ಮೋದಿ ನನ್ನ ಉತ್ತಮ ಸ್ನೇಹಿತ, ಶೀಘ್ರದಲ್ಲೇ ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: ಡೊನಾಲ್ಡ್ ಟ್ರಂಪ್

'ಒಬ್ಬರಿಗೆ ಒಂದು ಹುದ್ದೆ' ಸೂತ್ರ ಪಾಲನೆ: ಸಿಎಂ ಆಗಲು ಕೆಪಿಸಿಸಿ ಅಧ್ಯಕ್ಷರಾಗಿರಬೇಕೆಂಬ ನಿಯಮವಿಲ್ಲ, ಸಿದ್ದು ಉದಾಹರಣೆ ನೀಡಿದ ಸತೀಶ್ ಜಾರಕಿಹೊಳಿ

ವಿಧಾನ ಪರಿಷತ್ ಚುನಾವಣೆ; ಕಾಂಗ್ರೆಸ್ ಪಕ್ಷದಿಂದ ಐವರು ಅಭ್ಯರ್ಥಿಗಳು ಕಣಕ್ಕೆ: ಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದ ಆರ್ಥಿಕ ಸ್ಥಿತಿಗತಿ ಕುರಿತು ಶ್ವೇತಪತ್ರ ಮಂಡಿಸಿ: ಡಿ.ಕೆ.ಶಿವಕುಮಾರ್‌ಗೆ BJP ಆಗ್ರಹ

SCROLL FOR NEXT