ಜಮೀರ್ ಪರ ಬೆಂಬಲಿಗರ ಪ್ರತಿಭಟನೆ 
ರಾಜ್ಯ

ಸಚಿವ ಸಂಪುಟದಲ್ಲಿ ಜಮೀರ್ ಕೈಬಿಟ್ಟಿದ್ದಕ್ಕೆ ಅಸಮಾಧಾನ: ಮುಸ್ಲಿಮರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವಂತೆ ಅಂಜುಮನ್-ಇ-ಇಸ್ಲಾಂ ಆಗ್ರಹ

ರಾಜ್ಯ ಸರ್ಕಾರ ಪ್ರಕಟಿಸಿದ ಮೊದಲ ಹಂತದ ಸಚಿವರ ಪಟ್ಟಿಯಲ್ಲಿ ಜಮೀರ್ ಅಹ್ಮದ್ ಖಾನ್ ಅವರ ಹೆಸರು ಕೈಬಿಟ್ಟ ಹಿನ್ನೆಲೆ ಆಗ್ರಹಗಳು ವ್ಯಕ್ತವಾಗುತ್ತಿವೆ.

ಧಾರವಾಡ: ರಾಜ್ಯ ಸಚಿವ ಸಂಪುಟದಲ್ಲಿ ಜಮೀರ್ ಅಹ್ಮದ್ ಖಾನ್ ಅವರಿಗೆ ಸ್ಥಾನ ಕಲ್ಪಿಸುವುದರ ಜೊತೆಗೆ ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡುವಂತೆ ಅಂಜುಮನ್-ಇ-ಇಸ್ಲಾಂ ಸಂಘಟನೆಯ ಮುಖಂಡರು ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರ ಪ್ರಕಟಿಸಿದ ಮೊದಲ ಹಂತದ ಸಚಿವರ ಪಟ್ಟಿಯಲ್ಲಿ ಜಮೀರ್ ಅಹ್ಮದ್ ಖಾನ್ ಅವರ ಹೆಸರು ಕೈಬಿಟ್ಟ ಹಿನ್ನೆಲೆ ಆಗ್ರಹಗಳು ವ್ಯಕ್ತವಾಗುತ್ತಿವೆ. ಅಲ್ಪಸಂಖ್ಯಾತ ಸಮುದಾಯಕ್ಕೆ ನ್ಯಾಯಯುತ ಪ್ರತಿನಿಧಿತ್ವ ಸಿಗಬೇಕು ಎಂದು ಮುಖಂಡರು ಆಗ್ರಹಿಸಿದ್ದಾರೆ.

ಈ ಕುರಿತು ಅಂಜುಮನ್-ಇ-ಇಸ್ಲಾಂ ಉಪಾಧ್ಯಕ್ಷ ಭಸೀರ್ ಅಹ್ಮದ್ ಜಹಾಗೀರ್ಡಾರ್ ಮಾತನಾಡಿ, ಜಮೀರ್ ಅಹ್ಮದ್ ಖಾನ್ ಸೇರಿದಂತೆ ಇನ್ನೂ ನಾಲ್ವರು ಮುಸ್ಲಿಂ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕರನ್ನು ಭೇಟಿಯಾಗಿ ಮುಸ್ಲಿಂ ಸಮುದಾಯಕ್ಕೆ ಐದು ಸಚಿವ ಸ್ಥಾನಗಳನ್ನು ನೀಡುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಹಾಗೂ ಇತರ ವಂಚಿತ ಸಮುದಾಯಗಳು ಕಾಂಗ್ರೆಸ್ ಪಕ್ಷದ ಪ್ರಮುಖ ಆಧಾರಸ್ತಂಭಗಳಾಗಿದ್ದು, ಸರ್ಕಾರದಲ್ಲೂ ಅವರಿಗೆ ಸಮಾನ ಪ್ರಾತಿನಿಧ್ಯ ದೊರಕಬೇಕು ಎಂದು ವಾದಿಸಿದರು.

ಇದೇ ವೇಳೆ ಜಮೀರ್ ಅಹ್ಮದ್ ಖಾನ್ ವಿರುದ್ಧ ಕೆಲವರು ಸಂಚು ರೂಪಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಮೊದಲ ಸಚಿವರ ಪಟ್ಟಿಯಲ್ಲಿ ಅವರ ಹೆಸರು ಕೈಬಿಟ್ಟಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷವು ಈ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಮುಖಂಡ ದೀಪಕ್ ಚಿಂಚೋರ್ ಮಾತನಾಡಿ, ಮುಸ್ಲಿಮರು, ದಲಿತರು ಮತ್ತು ಇತರೆ ಹಿಂದುಳಿದ ವರ್ಗಗಳು ಕಾಂಗ್ರೆಸ್ ಪಕ್ಷದ ಪ್ರಮುಖ ಮತಬ್ಯಾಂಕ್ ಆಗಿದ್ದು, ಸಚಿವ ಸಂಪುಟದಲ್ಲಿ ಅವರಿಗೆ ಸೂಕ್ತ ಪ್ರಾತಿನಿಧ್ಯ ಸಿಗುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET ಹೋರಾಟಕ್ಕೆ ದೆಹಲಿ ಪೊಲೀಸರ ಗ್ರೀನ್ ಸಿಗ್ನಲ್; ಜಂತರ್ ಮಂತರ್‌ಗೆ ಬನ್ನಿ, ಬೆಂಬಲಿಗರಿಗೆ 'Cockroach Janta Party' ಸಂಸ್ಥಾಪಕ ಅಭಿಜೀತ್ ದೀಪ್ಕೆ ಕರೆ..!

US-Iran war: ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ; ರಾಡಾರ್ ಕೇಂದ್ರಗಳ ಮೇಲೆ ಭಾರೀ ದಾಳಿ, ಹಾರ್ಮುಜ್ ಜಲಸಂಧಿ ಬಳಿ ಉದ್ವಿಗ್ನತೆ ಹೆಚ್ಚಳ..!

ಟ್ರಬಲ್ ಶೂಟರ್ ಡಿಕೆ. ಶಿವಕುಮಾರ್ ಸಂಧಾನ ಯಶಸ್ವಿ?: ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ಸಾಧ್ಯತೆ..!

ನಾರ್ವೆ ಚೆಸ್ ಟೂರ್ನಿ: ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಗೆದ್ದು ಇತಿಹಾಸ ಬರೆದ ಪ್ರಜ್ಞಾನಂದ!

‘ನೀವು ಇಂಡಿಯಾದವರಾ?’: ಭಾರತೀಯ ಪತ್ರಕರ್ತನಿಗೆ ಟ್ರಂಪ್ ಪ್ರಶ್ನೆ, ಭಾರೀ ವಿವಾದ

SCROLL FOR NEXT