ಶರಣು ಸಲಗರ್‌ 
ರಾಜ್ಯ

ಬಕ್ರೀದ್ ಕುರ್ಬಾನಿ ವಿಚಾರದಲ್ಲಿ ಗಲಾಟೆ ಕೇಸ್: BJP ಶಾಸಕ ಶರಣು ಸಲಗರ್‌ಗೆ ಬಂಧನ ಭೀತಿ!

ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ 42ನೇ ಎಸಿಜೆಎಂ ಕೋರ್ಟ್ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್‌ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ್ದು ಶಾಸಕರಿಗೆ ಬಂಧನ ಭೀತಿ ಶುರುವಾಗಿದೆ.

ಬೆಂಗಳೂರು: ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ 42ನೇ ಎಸಿಜೆಎಂ ಕೋರ್ಟ್ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್‌ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ್ದು ಶಾಸಕರಿಗೆ ಬಂಧನ ಭೀತಿ ಶುರುವಾಗಿದೆ. ಅಕ್ರಮವಾಗಿ ಗೋ ಹತ್ಯೆ ಮಾಡಿದ್ದಾರೆಂದು ಆರೋಪಿ ಶಾಸಕ ಶರಣು ಸಲಗರ್ 2023ರ ಜುಲೈ 1ರಂದು ಬಕ್ರೀದ್ ಹಬ್ಬದ ವೇಳೆ ಗಲಾಟೆ ಮಾಡಿದ್ದರು. ಮುಸ್ಲಿಂ ಸಮುದಾಯದ ಮನೆಯೊಂದಕ್ಕೆ ನುಗ್ಗಿ ಗಲಾಟೆ ಮಾಡಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಈ ಕುರಿತು ತನಿಖೆ ನಡೆಸಿದ ಪೊಲೀಸರು ಈಗಾಗಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ಸಾಕ್ಷ್ಯ ವಿಚಾರಣೆ ವೇಳೆ ಕೋರ್ಟ್‌ಗೆ ಶಾಸಕರು ಗೈರಾಗಿದ್ದರಿಂದ ಇಂದು ಕೋರ್ಟ್ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಹೀಗಾಗಿ ಪೊಲೀಸರು ಯಾವುದೇ ಕ್ಷಣದಲ್ಲಾದರೂ ಶರಣು ಸಲಗರ್ ಅವರನ್ನು ಬಂಧಿಸುವ ಸಾಧ್ಯತೆ ಇದೆ. ಇನ್ನು ಸಲಗರ್ ಸೇರಿದಂತೆ ಸುಮಾರು 9 ಜನರ ವಿರುದ್ಧ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ. ಶರಣು ಸಲಗರ್ ಜೊತೆ ಲಿಂಗರಾಜ್, ಸಂತೋಷ್, ಶಿವಕುಮಾರ್, ವಿನೋದ್, ಸಚಿನ್, ರಾಜಕುಮಾರ್, ಶಂಬುಲಿಂಗ್ ಹಾಗೂ ಶರಣಬಸಪ್ಪ ಎಂಬುವರ ವಿರುದ್ಧ ಕೋರ್ಚ್ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಸಚಿವ ಸಂಪುಟ ಭಿನ್ನಮತ ಶಮನ: ರಾಜೀನಾಮೆ ವಾಪಸ್ ಪಡೆದ ರಾಮಲಿಂಗಾ ರೆಡ್ಡಿ!

Karnataka CET Result 2026 Announced: ಬೆಂಗಳೂರಿನ ಆರ್ ವಿ ಕಾಲೇಜಿನ ತನಿಷಾ ಕಾರ್ತಿಕ್ ಮೊದಲ ಸ್ಥಾನ, 2,92,782 ಅಭ್ಯರ್ಥಿಗಳು ಪ್ರವೇಶಕ್ಕೆ ಅರ್ಹತೆ!

'ನಮ್ಮ ಪೋಸ್ಟ್‌ಗಳನ್ನು ಡಿಲೀಟ್ ಮಾಡಬಹುದು, ಆದರೆ ನಮ್ಮನ್ನು ಅಳಿಸಲು ಸಾಧ್ಯವಿಲ್ಲ': Cockroach Janta Party ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕೇರಳದಲ್ಲಿ ಮುಂಗಾರು ಅಬ್ಬರ: ರಾತ್ರಿಯಿಡೀ ಭಾರಿ ಮಳೆ; ರಸ್ತೆಗಳು ಜಲಾವೃತ, ಧರೆಗುರುಳಿದ ಮರಗಳು, ಒಂದು ಸಾವು; 5 ಜಿಲ್ಲೆಗಳಿಗೆ ರೆಡ್ ಅಲರ್ಟ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೇಡಿಕೆ ಕೇವಲ ಆರಂಭ ಅಷ್ಟೇ.. CJP ಪ್ರತಿಭಟನೆಯಲ್ಲಿ ಸೋನಮ್ ವಾಂಗ್‌ಚುಕ್ ಗುಡುಗು!

SCROLL FOR NEXT