ಸಾಂದರ್ಭಿಕ ಚಿತ್ರ 
ರಾಜ್ಯ

Karnataka CET Result 2026: ಬೆಂಗಳೂರಿನ ಆರ್ ವಿ ಕಾಲೇಜಿನ ತನಿಷಾ ಕಾರ್ತಿಕ್ ಮೊದಲ ಸ್ಥಾನ; 2,92,782 ಅಭ್ಯರ್ಥಿಗಳು ಪ್ರವೇಶಕ್ಕೆ ಅರ್ಹತೆ!

ಬೆಂಗಳೂರಿನ ಆರ್ ವಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿನಿ ತನಿಷಾ ಕಾರ್ತಿಕ್ ಮೊದಲ ಸ್ಥಾನ ಪಡೆದಿದ್ದಾರೆ. ಸೃಜನ್ ಗೆ 2ನೇ rank ಹಾಗೂ ನಿನಾದ್ ವಸಿಷ್ಠ ಮೂರನೇ rank ಪಡೆದುಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (kea) ನಡೆಸಿದ್ದ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಶನಿವಾರ ಪ್ರಕಟವಾಗಿದೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಮೆಡಿಕಲ್, ಎಂಜಿನಿಯರಿಂಗ್ ಸೇರಿದಂತೆ ವಿವಿಧ ಕೋರ್ಸ್ ಗಳಿಗೆ 2,92,782 ಮಂದಿ ವಿದ್ಯಾರ್ಥಿಗಳು ಅರ್ಹತೆ ಪಡೆದಿದ್ದಾರೆ.

ಬೆಂಗಳೂರಿನ ಆರ್ ವಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿನಿ ತನಿಷಾ ಕಾರ್ತಿಕ್ ಮೊದಲ ಸ್ಥಾನ ಪಡೆದಿದ್ದಾರೆ. ಸೃಜನ್ ಗೆ 2ನೇ rank ಹಾಗೂ ನಿನಾದ್ ವಸಿಷ್ಠ ಮೂರನೇ rank ಪಡೆದುಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಎಂಜಿನಿಯರಿಂಗ್ ಗೆ 2,82,603 ಮಂದಿ, ಬಿಎಸ್ಸಿ (ಕೃಷಿ, ರೇಷ್ಮೆ, ಆಹಾರ ವಿಜ್ಞಾನ) ಗೆ 2,09,220 ಮಂದಿ, ಬಿ.ವಿ.ಎಸ್ಸಿ (ಪಶು ವೈದ್ಯಕೀಯ) 2,12,909 ಮಂದಿ, ಬಿ. ಫಾರ್ಮ್ ಗೆ 2,86,609 ಮಂದಿ, BSC ನರ್ಸಿಂಗ್ ಗೆ 2,18,785 ಮಂದಿ, BNYS ಗೆ 2,12, 730 ಮಂದಿ, ಕೃಷಿ ಪ್ರಾಯೋಗಿಕ 21, 775 ಮಂದಿ ಮತ್ತು BVSC ಪ್ರಾಯೋಗಿಕ ವಿಭಾಗದಲ್ಲಿ 21, 838 ಮಂದಿ ಅರ್ಹತೆ ಪಡೆದಿದ್ದಾರೆ.

ರಾಜ್ಯದ 745 ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ 23 ಮತ್ತು 24 ರಂದು ಸಿಇಟಿ ಪರೀಕ್ಷೆ ನಡೆಸಲಾಗಿತ್ತು. 23 ರಂದು ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ ಹಾಗೂ 24 ರಂದು ಗಣಿತ, ಜೀವ ವಿಜ್ಞಾನ ಪರೀಕ್ಷೆಗಳು ನಡೆದಿದ್ದವು.

ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಏಪ್ರಿಲ್ 22 ರಂದು ಕನ್ನಡ ಭಾಷಾ ಪರೀಕ್ಷೆ ಬೆಂಗಳೂರು, ಮಂಗಳೂರು,ವಿಜಯಪುರ ಮತ್ತು ಬೆಳಗಾವಿ ನಗರಗಳ ಒಟ್ಟು ಐದು ಕೇಂದ್ರಗಳಲ್ಲಿ ನಡೆದಿತ್ತು. ಸುಮಾರು 3.30 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು. ಈ ಪೈಕಿ 2,92,782 ಅಭ್ಯರ್ಥಿಗಳು ಪ್ರವೇಶಕ್ಕೆ ಅರ್ಹರಾಗಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಈ ಕೆಳಗಿನ ಲಿಂಕ್ ಗಳನ್ನು ಕ್ಲಿಕ್ಕಿಸಿ ಫಲಿತಾಂಶ ಪಡೆಯಬಹುದಾಗಿದೆ.

keaonline.karnataka.gov.in/ugcet-2026-results/

cetonline.karnataka.gov.in

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಪಕ್ಷಗಳ ಪ್ರತಿಭಟನೆಯ ನಡುವೆ, ಲೋಕಸಭೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ನಿಗ್ರಹ ತಿದ್ದುಪಡಿ ಮಸೂದೆ ಮಂಡನೆ

"ಪ್ರತಿಭಟನೆ ನಡೆಸುತ್ತಿದ್ದಾರೆ" ಎಂಬ ಕಾರಣಕ್ಕೆ ಲಾಠಿ ಚಾರ್ಜ್ ಸಾಧ್ಯವಿಲ್ಲ": ಸುಪ್ರೀಂ ಕೋರ್ಟ್

NEET ಪರೀಕ್ಷೆ ಆನ್‌ಲೈನ್‌ಗೆ ಶಿಫ್ಟ್? ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್? ನೀಲೇಕಣಿ ಸಮಿತಿ ವರದಿಯತ್ತ ಎಲ್ಲರ ಚಿತ್ತ

NEET protests: 'ಶಾಂತಿಯುತ ಪ್ರತಿಭಟನೆ ಪ್ರತಿಯೊಬ್ಬರ ಸಾಂವಿಧಾನಿಕ ಹಕ್ಕು'; ನಾಳೆ ಪೊಲೀಸ್ ದೌರ್ಜನ್ಯ ಅರ್ಜಿಗಳ ವಿಚಾರಣೆ: ಸುಪ್ರೀಂ ಕೋರ್ಟ್

ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣ: ದೆಹಲಿಗೆ ತೆರಳುವ ಮುನ್ನ ಸಿಎಂ ಡಿಕೆ ಶಿವಕುಮಾರ್ ಹೇಳಿಕೆ