ನಿನ್ನೆ ಶನಿವಾರ ತುಮಕೂರು ಜಿಲ್ಲೆಯಲ್ಲಿ ಇರುವ ಶ್ರೀ ಕಾಡಸಿದ್ಧೇಶ್ವರ ಮಠದ ಗಂಗಾಧರೇಶ್ವರ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪೂಜೆ ಸಲ್ಲಿಸಿದರು. 
ರಾಜ್ಯ

'ಮಲ್ಲಘಟ್ಟ ಗಂಗಾಧರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದಾಗಲೆಲ್ಲಾ ನನಗೆ ಮನ:ಶಾಂತಿ ಸಿಗುತ್ತದೆ:ಡಿ ಕೆ ಶಿವಕುಮಾರ್ ರೋಡ್‌ಶೋ; ಬೆಂಬಲಿಗರ ಸಂಭ್ರಮ-Video

ಡಿ ಕೆ ಶಿವಕುಮಾರ್ ಅವರು ಬುದುದೇಘಟ್ಟದಲ್ಲಿರುವ ಜ್ಯೋತಿಷಿ ನಾಗರಾಜ ಶಾಸ್ತ್ರಿ ಅವರನ್ನು ಕೂಡ ಭೇಟಿ ಮಾಡಿದರು. ಇವರೊಂದಿಗೆ ಅವರಿಗೆ ದೀರ್ಘಕಾಲದ ಸಂಪರ್ಕವಿದೆ ಎನ್ನಲಾಗಿದೆ.

ತುಮಕೂರು: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ನಿನ್ನೆ ಶನಿವಾರ ತಿಪಟೂರು ಸಮೀಪದ ನೊಣವಿನಕೆರೆಯ ಕಾಡಸಿದ್ಧೇಶ್ವರ ಮಠದಲ್ಲಿರುವ ತಮ್ಮ ಆರಾಧ್ಯ ದೈವ ‘ಗಂಗಾಧರ ಅಜ್ಜಯ್ಯ’ರ ದರ್ಶನ ಪಡೆದು ಹರಕೆ ತೀರಿಸಿದರು.

ಅಪಾರ ಧಾರ್ಮಿಕ ನಂಬಿಕೆ ಹೊಂದಿರುವ ಡಿ ಕೆ ಶಿವಕುಮಾರ್ ತಾವು ರಾಜ್ಯದ ಅತ್ಯುನ್ನತ ಸಿಎಂ ಹುದ್ದೆ ವಹಿಸಿಕೊಳ್ಳಲು ದೇವರ ಆಶೀರ್ವಾದ ಕಾರಣ ಎಂಬ ನಂಬಿಕೆಯಿದೆ. ಇದೇ ವೇಳೆ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಕೂಡ ನಗರಕ್ಕೆ ಭೇಟಿ ನೀಡಿ ತಮ್ಮ ಬೆಂಬಲಿಗರೊಂದಿಗೆ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದರು. ವಿಶೇಷವಾಗಿ ಮಾಜಿ ಸಚಿವ ಕೆ ಎನ್ ರಾಜಣ್ಣ ಅವರ ಬೆಂಬಲಿಗರು ಉತ್ಸಾಹದಿಂದ ಪಾಲ್ಗೊಂಡಿದ್ದರು.

ಇಬ್ಬರೂ ನಾಯಕರು ಒಬ್ಬರ ನಂತರ ಒಬ್ಬರು ನಗರಕ್ಕೆ ಆಗಮಿಸಿದಾಗ ನಗರ ಪ್ರವೇಶ ದ್ವಾರದಲ್ಲಿ ಭವ್ಯ ಸ್ವಾಗತ ಕೋರಲಾಯಿತು.

ಮೂಲಗಳ ಪ್ರಕಾರ, ಡಿ ಕೆ ಶಿವಕುಮಾರ್ ಅವರು ಬುದುದೇಘಟ್ಟದಲ್ಲಿರುವ ಜ್ಯೋತಿಷಿ ನಾಗರಾಜ ಶಾಸ್ತ್ರಿ ಅವರನ್ನು ಕೂಡ ಭೇಟಿ ಮಾಡಿದರು. ಇವರೊಂದಿಗೆ ಅವರಿಗೆ ದೀರ್ಘಕಾಲದ ಸಂಪರ್ಕವಿದೆ ಎನ್ನಲಾಗಿದೆ.

ನಾನು ಕಾಡಸಿದ್ಧೇಶ್ವರ ಮಠಕ್ಕೆ ಮುಖ್ಯಮಂತ್ರಿಯಾಗಿ ಅಲ್ಲ, ಭಕ್ತನಾಗಿ ಬಂದಿದ್ದೇನೆ. ಈ ಮಠ ನನಗೆ ಹೊಸದಲ್ಲ. ಕಳೆದ 25 ವರ್ಷಗಳಿಂದ ಇಲ್ಲಿ ಬರುತ್ತಿದ್ದೇನೆ. ನನ್ನ ಜೀವನದ ಪ್ರತಿಯೊಂದು ಹಂತದಲ್ಲೂ ಸೇವೆ ಮಾಡಲು, ಪ್ರಾರ್ಥನೆ ಸಲ್ಲಿಸಲು ಮತ್ತು ಮಾರ್ಗದರ್ಶನ ಪಡೆಯಲು ಇಲ್ಲಿಗೆ ಬಂದಿದ್ದೇನೆ. ಚುನಾವಣೆಗೂ ಮುನ್ನ, ಚುನಾವಣೆಯ ನಂತರ ಹಾಗೂ ಅಧಿಕಾರ ಸ್ವೀಕರಿಸಿದ ಬಳಿಕವೂ ಇಲ್ಲಿಗೆ ಬಂದಿದ್ದೇನೆ. ಇಲ್ಲಿ ಭಕ್ತ ಮತ್ತು ದೇವರ ನಡುವಿನ ವಿಶೇಷ ಸಂಬಂಧವಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಈ ಪ್ರದೇಶದ ಪವಿತ್ರ ಮಲ್ಲಘಟ್ಟ ಕೆರೆಯ ಅಭಿವೃದ್ಧಿಗೆ ಈಗಾಗಲೇ 35 ಕೋಟಿ ರೂಪಾಯಿ ಮೌಲ್ಯದ ಕಾಮಗಾರಿ ನಡೆಯುತ್ತಿದ್ದು, ಅದರ ಮುಂದಿನ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವುದಾಗಿ ಡಿ ಕೆ ಶಿವಕುಮಾರ್ ಹೇಳಿದರು. ಅವರು ಮಲ್ಲಘಟ್ಟ ಹಾಗೂ ನೊಣವಿನಕೆರೆ ಕೆರೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.

ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಹಿಂದೂ ಸಂಪ್ರದಾಯಗಳನ್ನು ಅನುಸರಿಸುವ ಮೂಲಕ ಯಾವ ಸಂದೇಶ ನೀಡಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ನನ್ನ ಧರ್ಮವನ್ನು ಬಿಡುವುದಿಲ್ಲ. ಎಲ್ಲ ಧರ್ಮಗಳಿಗೂ ಗೌರವ ಕೊಡುತ್ತೇನೆ ಎಂದರು.

ಪ್ರಮಾಣವಚನ ಸಮಾರಂಭಕ್ಕೆ ಎಲ್ಲ ಧರ್ಮಗಳ ಮುಖಂಡರನ್ನು ಆಹ್ವಾನಿಸಿದ್ದೆ. ಯಾವುದೇ ಧರ್ಮದವರಾಗಿರಲಿ, ತಮ್ಮ ಧರ್ಮವನ್ನು ಬಿಟ್ಟುಬಿಡಲು ಸಾಧ್ಯವಿಲ್ಲ. ನಾಮಕರಣ, ಕಿವಿ ಚುಚ್ಚಿಸುವುದು, ಉಪನಯನ ಮುಂತಾದ ಸಂಪ್ರದಾಯಗಳು ಪ್ರತಿಯೊಂದು ಮನೆಯಲ್ಲೂ ಅವರವರ ಧರ್ಮದ ಆಧಾರದ ಮೇಲೆಯೇ ನಡೆಯುತ್ತವೆ ಎಂದು ಹೇಳಿದರು.

ರಾಜ್ಯದ ಹಿತಾಸಕ್ತಿಗಳನ್ನು ಕಾಪಾಡುವ ಜವಾಬ್ದಾರಿ ನನ್ನ ಮೇಲಿದೆ. ಎಲ್ಲರ ಆಶೀರ್ವಾದ ಪಡೆದು ನಾನು ಕೆಲಸವನ್ನು ಆರಂಭಿಸಿದ್ದೇನೆ ಎಂದು ಅವರು ಹೇಳಿದರು.

ಡಾ. ಜಿ. ಪರಮೇಶ್ವರ್ ರೋಡ್‌ಶೋ

ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ, ಬಟವಾಡಿಯ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ರೋಡ್‌ಶೋದಲ್ಲಿ ಭಾಗವಹಿಸಿದರು.

ನಂತರ ಟೌನ್ ಹಾಲ್‌ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜನತೆಗೆ ಕೃತಜ್ಞತೆ ಸಲ್ಲಿಸಿದರು. ನಗರಾಭಿವೃದ್ಧಿಗಾಗಿ ಪ್ರಮುಖ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿದ ಅವರು, ನಗರದವರೆಗೆ ಮೆಟ್ರೋ ಸೇವೆ ವಿಸ್ತರಣೆಗೆ DPR (ವಿವರವಾದ ಯೋಜನಾ ವರದಿ) ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಖಾತೆ ಹಂಚಿಕೆ ಕಿತ್ತಾಟ: ಆರಂಭದಲ್ಲೇ ಅಸಮಾಧಾನದ ಅಲೆ: ಡಿಕೆಶಿ ಸರ್ಕಾರಕ್ಕಿದು ಆರಂಭಿಕ ಆಘಾತವೋ, ದೊಡ್ಡ ಸಂಕಷ್ಟದ ಮುನ್ಸೂಚನೆಯೋ?

ಗ್ರಾಹಕರ ಜೇಬಿಗೆ ಮತ್ತೆ ಕತ್ತರಿ: ಗೃಹಬಳಕೆ ಸಿಲಿಂಡರ್‌ ದರ ಮತ್ತೆ ಏರಿಕೆ, ಬರೋಬ್ಬರಿ 29 ರೂ. ಹೆಚ್ಚಳ..!

ಬರನಾಡಿನ ಭಗೀರಥ: 200 ಕೆರೆ-3,000 ಕೊಳವೆ ಬಾವಿಗಳಿಗೆ ಮರುಜೀವ; ಗದಗದ ‘ಜಲಯೋಧ’ನ ಪ್ರೇರಣಾದಾಯಕ ಯಶೋಗಾಥೆ..!

ಪ್ಲಾಸ್ಟಿಕ್ ಬಾಟಲಿ ನಿಷೇಧ ಆದೇಶ ಉಲ್ಲಂಘನೆ: ಸರ್ಕಾರಿ ಕಚೇರಿಗಳಿಗೆ KSPCB ಕಠಿಣ ಎಚ್ಚರಿಕೆ, ನೋಟಿಸ್ ಜಾರಿ..!

NEET-UG 2026: ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆ 'ಸೋರಿಕೆ' ಆರೋಪ ತಳ್ಳಿಹಾಕಿದ NTA; ಸುಳ್ಳು ಸುದ್ದಿ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

SCROLL FOR NEXT