ಡಿ ಕೆ ಶಿವಕುಮಾರ್  
ರಾಜ್ಯ

LPG ಸಿಲಿಂಡರ್ ಬೆಲೆ ಏರಿಕೆ: ವರದಿ ಕೇಳಿದ ಸಿಎಂ ಡಿ.ಕೆ ಶಿವಕುಮಾರ್

ಕೇಂದ್ರ ಸರ್ಕಾರವು 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗೆ 29 ರೂಪಾಯಿ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರು: ಎಲ್‌ಪಿಜಿ (LPG) ಬೆಲೆ ಏರಿಕೆ ಕುರಿತು ಅಧಿಕಾರಿಗಳಿಂದ ವರದಿ ಕೇಳಿರುವುದಾಗಿ ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಜೊತೆಗೆ ಕೈಗಾರಿಕಾ ಅನಿಲ ಹಾಗೂ ಕೈಗಾರಿಕಾ ಡೀಸೆಲ್ ದರಗಳು ಆತಂಕಕಾರಿ ಮಟ್ಟದಲ್ಲಿ ಏರಿಕೆಯಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರವು 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗೆ 29 ರೂಪಾಯಿ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಜಾಗತಿಕ ಇಂಧನ ವೆಚ್ಚಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಒತ್ತಡ ಎದುರಿಸುತ್ತಿರುವ ಕಾರಣ, ಕಳೆದ ಮೂರು ತಿಂಗಳಲ್ಲಿ ಇದು ಎರಡನೇ ಬಾರಿ ದರ ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್, ಎಲ್ ಪಿಜಿ ದರ ಏರಿಕೆ ಬಗ್ಗೆ ನಾನು ವರದಿ ಕೇಳಿದ್ದೇನೆ. ಅದಕ್ಕಿಂತಲೂ ಹೆಚ್ಚು ಕೈಗಾರಿಕಾ ಅನಿಲ ಮತ್ತು ಕೈಗಾರಿಕಾ ಡೀಸೆಲ್ ದರಗಳು ಆತಂಕಕಾರಿ ಪ್ರಮಾಣದಲ್ಲಿ ಏರಿಕೆ ಕಂಡಿವೆ. ಈ ಕುರಿತು ವರದಿ ಪಡೆಯುತ್ತಿದ್ದೇನೆ. ನಾಳೆ ಈ ವಿಷಯದ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದರು.

ಪಶ್ಚಿಮ ಏಷ್ಯಾದಲ್ಲಿ ಸಂಘರ್ಷದಿಂದ ಜಾಗತಿಕ ಮಟ್ಟದಲ್ಲಿ ಎಲ್‌ಪಿಜಿ ದರಗಳು ಗಣನೀಯವಾಗಿ ಏರಿಕೆಯಾಗಿದ್ದರೂ, ಭಾರತದಲ್ಲಿ ಇನ್ನೂ ವಿಶ್ವದಲ್ಲೇ ಅತ್ಯಂತ ಕಡಿಮೆ ಅಡುಗೆ ಅನಿಲ ದರವಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಇದೇ ವರ್ಷದ ಮಾರ್ಚ್ 7ರಂದು ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 60 ರೂಪಾಯಿ ಹೆಚ್ಚಿಸಲಾಗಿತ್ತು. ಇದೀಗ ಮತ್ತೊಮ್ಮೆ 29 ರೂಪಾಯಿ ಏರಿಕೆ ಮಾಡಲಾಗಿದೆ.

ಇತ್ತೀಚಿನ ಪರಿಷ್ಕರಣೆಗೆ ಮುನ್ನ, ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಮಾರಾಟವಾಗುವ ಪ್ರತಿಯೊಂದು ಎಲ್‌ಪಿಜಿ ಸಿಲಿಂಡರ್ ಮೇಲೂ ಸುಮಾರು 703 ರೂಪಾಯಿ ನಷ್ಟ ಅನುಭವಿಸುತ್ತಿದ್ದವು ಎಂದು ಅಂದಾಜಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

DKS ಸಿಎಂ ಆದ ಬೆನ್ನಲ್ಲೇ ಹಲವು ಅಧಿಕಾರಿಗಳ ವರ್ಗ: ಧರ್ಮಸ್ಥಳ ಕೇಸ್ ತನಿಖೆ ನಡೆಸಿದ್ದ ಪ್ರಣಬ್ ಮೊಹಂತಿ CID ಡಿಜಿಪಿಯಾಗಿ ನೇಮಕ!

ಬೆಂಗಳೂರಿಗೆ ಜೂ. 9ರಂದು Red Alert, ಬಿರುಗಾಳಿ ಸಹಿತ ಭಾರೀ ಮಳೆ: ರಾಜ್ಯದಲ್ಲಿ ಮುಂದಿನ 8 ದಿನ ಮಳೆಯಾಘಾತ; IMD ಎಚ್ಚರಿಕೆ!

HYDRAA ಹೆಸರಿಡಲು ಹಿಟ್ಲರ್ ಸ್ಫೂರ್ತಿ: ವಿವಾದಕ್ಕೆ ಗುರಿಯಾದ CM ರೇವಂತ್ ರೆಡ್ಡಿ ಹೇಳಿಕೆ!

ಪಕ್ಷ ಇಬ್ಭಾಗದ ಭೀತಿಯ ನಡುವೆ INDI ಮೈತ್ರಿಕೂಟ ಸಭೆಯಲ್ಲಿ ಭಾಗವಹಿಸಲಿರುವ ಮಮತಾ ಬ್ಯಾನರ್ಜಿ

ನಟಿಯನ್ನು ಯಾಕೆ ದೂಷಿಸುತ್ತೀರಾ? Peddi ಚಿತ್ರದಲ್ಲಿನ ಜಾಹ್ನವಿ ಉಡುಪು ವಿವಾದಕ್ಕೆ ನಟಿ ಆಶಿಕಾ ರಂಗನಾಥ್ ಗರಂ

SCROLL FOR NEXT