ಡಿಕೆ.ಶಿವಕುಮಾರ್  
ರಾಜ್ಯ

ರಾಜಕೀಯ ಬದಿಗಿಟ್ಟು ಜನರ ಅಭಿವೃದ್ಧಿಗೆ ಕೈಜೋಡಿಸೋಣ: ಸಿಎಂ ಡಿ.ಕೆ ಶಿವಕುಮಾರ್ ಕರೆ

ಪ್ರಧಾನಿ ಮೋದಿ ಅವರು ನನಗೆ ಶುಭ ಹಾರೈಸಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದಗಳು. ನಾನು ಗೌರವಯುತವಾಗಿ ಅವರನ್ನು ಭೇಟಿ ಮಾಡುತ್ತೇನೆ. ಅವರು ರಾಜಕೀಯ ಮಾಡಬೇಕಾಗಿಲ್ಲ, ನಾವೂ ರಾಜಕೀಯ ಮಾಡಬೇಕಾಗಿಲ್ಲ.

ಬೆಂಗಳೂರು: ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ರಾಜ್ಯದ ಜನರ ಅಭಿವೃದ್ಧಿಗಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಶನಿವಾರ ಕರೆ ನೀಡಿದ್ದಾರೆ. ಇದೇ ವೇಳೆ ತಾವು ಶೀಘ್ರದಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುತ್ತಿರುವುದಾಗಿಯೂ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿ ಬದಲಾವಣೆ ಜನರ ಆಕ್ರೋಶದ ಪರಿಣಾಮ ಎಂಬ ಪ್ರಧಾನಿ ಮೋದಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು, "ಪ್ರಧಾನಿ ಮೋದಿ ಅವರು ನನಗೆ ಶುಭ ಹಾರೈಸಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದಗಳು. ನಾನು ಗೌರವಯುತವಾಗಿ ಅವರನ್ನು ಭೇಟಿ ಮಾಡುತ್ತೇನೆ. ಅವರು ರಾಜಕೀಯ ಮಾಡಬೇಕಾಗಿಲ್ಲ, ನಾವೂ ರಾಜಕೀಯ ಮಾಡಬೇಕಾಗಿಲ್ಲ. ರಾಜ್ಯದ ಜನರ ಹಿತದೃಷ್ಟಿಯಿಂದ ಎಲ್ಲರೂ ಒಂದಾಗಿ ಅಗತ್ಯ ಕೆಲಸಗಳನ್ನು ಮಾಡೋಣ ಎಂದು ಹೇಳಿದ್ದಾರೆ.

ಇದೇ ವೇಳೆ ರಾಜ್ಯ ಬಿಜೆಪಿಯು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಸಚಿವರಿಗೆ ಖಾತೆ ಹಂಚಿಕೆ ವಿಚಾರವಾಗಿ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯಗಳನ್ನು ಉಲ್ಲೇಖಿಸಿರುವ ಬಿಜೆಪಿ, ಕರ್ನಾಟಕದ ಜನರು ಉತ್ತಮ ಆಡಳಿತಕ್ಕಾಗಿ ಮತ ನೀಡಿದ್ದರು. ಆದರೆ. ಅವರಿಗೆ ಸಿಕ್ಕಿರುವುದು ಅಸ್ಥಿರತೆ, ಒಳಜಗಳ ಮತ್ತು ಅಧಿಕಾರಕ್ಕಾಗಿ ನಿರಂತರ ಹೋರಾಟ ಎಂದು ಟೀಕಿಸಿದೆ.

ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ, ಮುಖ್ಯಮಂತ್ರಿ ಹುದ್ದೆಗಾಗಿ ನಡೆದ ಅಧಿಕಾರದ ಕದನ ಕಾಂಗ್ರೆಸ್‌ನ ನಾಯಕತ್ವದ ಬಿಕ್ಕಟ್ಟನ್ನು ಬಯಲು ಮಾಡಿದೆ ಎಂದು ಆರೋಪಿಸಿದೆ. ರಾಜ್ಯ ನಾಯಕತ್ವದಿಂದ ಹಿಡಿದು ಪಕ್ಷದ ಹೈಕಮಾಂಡ್‌ವರೆಗೆ ನಾಯಕತ್ವದ ಕೊರತೆ ಸ್ಪಷ್ಟವಾಗಿದೆ ಎಂದು ಹೇಳಿದೆ.

ಹಿಂದಿನ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಮತ್ತು ಆಡಳಿತ ವೈಫಲ್ಯದ ಆರೋಪಗಳು ಕೇಳಿಬಂದರೂ ಕಾಂಗ್ರೆಸ್ ಹೈಕಮಾಂಡ್ ಮೌನವಾಗಿತ್ತು. ಇದೀಗ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಖಾತೆ ಹಂಚಿಕೆ ಕುರಿತ ಅಸಮಾಧಾನ ಮತ್ತು ಸಾರ್ವಜನಿಕ ಭಿನ್ನಾಭಿಪ್ರಾಯಗಳು ಬಹಿರಂಗವಾಗುತ್ತಿವೆ.

ಕಾಂಗ್ರೆಸ್ ನಾಯಕರಿಗೆ ಜನಪರ ಆಡಳಿತಕ್ಕಿಂತ ಅಧಿಕಾರ, ಹುದ್ದೆ ಮತ್ತು ರಾಜಕೀಯ ಉಳಿವಿನ ಚಿಂತೆಯೇ ಹೆಚ್ಚಾಗಿದೆ. ಆಡಳಿತ ಹಿಂಬದಿಗೆ ಸರಿದಿದ್ದು, ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಈ ಬಿಕ್ಕಟ್ಟಿನ ಸಂದರ್ಭದಲ್ಲೂ ಕಾಣಿಸಿಕೊಳ್ಳುತ್ತಿಲ್ಲ ಎಂದು ಟೀಕಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

DKS ಸಿಎಂ ಆದ ಬೆನ್ನಲ್ಲೇ ಹಲವು ಅಧಿಕಾರಿಗಳ ವರ್ಗ: ಧರ್ಮಸ್ಥಳ ಕೇಸ್ ತನಿಖೆ ನಡೆಸಿದ್ದ ಪ್ರಣಬ್ ಮೊಹಂತಿ CID ಡಿಜಿಪಿಯಾಗಿ ನೇಮಕ!

ಬೆಂಗಳೂರಿಗೆ ಜೂ. 9ರಂದು Red Alert, ಬಿರುಗಾಳಿ ಸಹಿತ ಭಾರೀ ಮಳೆ: ರಾಜ್ಯದಲ್ಲಿ ಮುಂದಿನ 8 ದಿನ ಮಳೆಯಾಘಾತ; IMD ಎಚ್ಚರಿಕೆ!

HYDRAA ಹೆಸರಿಡಲು ಹಿಟ್ಲರ್ ಸ್ಫೂರ್ತಿ: ವಿವಾದಕ್ಕೆ ಗುರಿಯಾದ CM ರೇವಂತ್ ರೆಡ್ಡಿ ಹೇಳಿಕೆ!

ಪಕ್ಷ ಇಬ್ಭಾಗದ ಭೀತಿಯ ನಡುವೆ INDI ಮೈತ್ರಿಕೂಟ ಸಭೆಯಲ್ಲಿ ಭಾಗವಹಿಸಲಿರುವ ಮಮತಾ ಬ್ಯಾನರ್ಜಿ

ನಟಿಯನ್ನು ಯಾಕೆ ದೂಷಿಸುತ್ತೀರಾ? Peddi ಚಿತ್ರದಲ್ಲಿನ ಜಾಹ್ನವಿ ಉಡುಪು ವಿವಾದಕ್ಕೆ ನಟಿ ಆಶಿಕಾ ರಂಗನಾಥ್ ಗರಂ

SCROLL FOR NEXT