ಡಿ.ಕೆ ಶಿವಕುಮಾರ್ 
ರಾಜ್ಯ

ಬಿಜೆಪಿ, ಜೆಡಿಎಸ್ ನಿಂದ ಮತ್ತೊಬ್ಬ ಡಿ.ಕೆ. ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ

ಪಿಜಿಆರ್ ಸಿಂಧ್ಯಾ, ವಿಶ್ವನಾಥ್, ನಾರಾಯಣ ಗೌಡರು, ಯು.ಕೆ. ಸ್ವಾಮಿ ಅವರು ನನ್ನ ವಿರುದ್ಧ ಚುನಾವಣೆಯಲ್ಲಿ ನಿಂತಿದ್ದರು. ಅವರು ಈಗ ನನ್ನ ಪರವಾಗಿ ನನ್ನ ಜತೆ ನಿಂತಿದ್ದಾರೆ. ಅವರೇನೂ ದಡ್ಡರಾ?

ಕನಕಪುರ: ಈ ಜಿಲ್ಲೆಯಲ್ಲಿ ಮತ್ತೊಬ್ಬ ಡಿ.ಕೆ. ಶಿವಕುಮಾರ್ ನನ್ನು ಹುಟ್ಟುಹಾಕಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಸಾಧ್ಯವೇ? ಖಂಡಿತಾ ಇಲ್ಲ. ಇದನ್ನು ಬಿಜೆಪಿ ಹಾಗೂ ದಳದ ಕಾರ್ಯಕರ್ತರು ಮನದಟ್ಟು ಮಾಡಿಕೊಳ್ಳಬೇಕು" ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ಭಾನುವಾರ ತವರು ಕ್ಷೇತ್ರ ಕನಕಪುರದ ವಿವಿಧ ಭಾಗಗಳಿಗೆ ಭೇಟಿ ನೀಡಿ ಜನರಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದರು.

ನೀವು ಯಾರನ್ನು ಒಪ್ಪಿಸದಿದ್ದರೂ ನಿಮ್ಮ ಆತ್ಮಸಾಕ್ಷಿ ಒಪ್ಪಬೇಕು. ಪಿಜಿಆರ್ ಸಿಂಧ್ಯಾ, ವಿಶ್ವನಾಥ್, ನಾರಾಯಣ ಗೌಡರು, ಯು.ಕೆ. ಸ್ವಾಮಿ ಅವರು ನನ್ನ ವಿರುದ್ಧ ಚುನಾವಣೆಯಲ್ಲಿ ನಿಂತಿದ್ದರು. ಅವರು ಈಗ ನನ್ನ ಪರವಾಗಿ ನನ್ನ ಜತೆ ನಿಂತಿದ್ದಾರೆ. ಅವರೇನೂ ದಡ್ಡರಾ? ಮತ್ತೊಬ್ಬ ಶಿವಕುಮಾರ್ ಬರುವುದಿಲ್ಲ, ಜನರಿಗೆ ಒಳ್ಳೆಯದಾಗಲಿ ಎಂದು ಅವರು ನನ್ನ ಜತೆ ಕೈ ಜೋಡಿಸಿದ್ದಾರೆ" ಎಂದು ತಿಳಿಸಿದರು.

ನಿಮ್ಮಲ್ಲಿ ವೈಷಮ್ಯ ಇದ್ದರೆ ಮರೆಯಿರಿ. ಈ ಊರಿಗೆ ಒಳ್ಳೆಯದಾಗಲಿ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡೋಣ ಎಂದು ಬೇರೆ ಪಕ್ಷದ ಮುಖಂಡರಿಗೆ ಈ ಮೂಲಕ ತಿಳಿಸುತ್ತೇನೆ" ಎಂದು ತಿಳಿಸಿದರು. ನಮ್ಮ ಬದುಕು ಶಾಶ್ವತವಲ್ಲ. ನಾವು ಬಿಟ್ಟು ಹೋಗುವ ಸಾಕ್ಷಿ ಗುಡ್ಡೆಗಳೇ ಶಾಶ್ವತ.

ನಾನು ಕೇವಲ ಎರಡು ವರ್ಷ ಮಾತ್ರ ಸಿಎಂ ಆಗಿರಬೇಕೇ..? ನಿಮ್ಮ ಆಶೀರ್ವಾದದಿಂದ 2028 ರಲ್ಲಿ ಮತ್ತೇ ಗೆಲ್ಲಬೇಕು. ಅದಕ್ಕೆ ನೀವು ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ. ಒಳ್ಳೆ ರೀತಿಯಲ್ಲಿ ಅಧಿಕಾರ ನಡೆಸಿ ಸಾಕ್ಷಿ ಗುಡ್ಡೆಗಳನ್ನು ಬಿಟ್ಟು ಹೋಗೋಣ" ಎಂದು ಕರೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಸೂಚನೆಗೆ ಕ್ಯಾರೆ ಎನ್ನದ ಇಸ್ರೇಲ್: ಇರಾನ್ ಮೇಲೆ ವೈಮಾನಿಕ ದಾಳಿ; ಟೆಹ್ರಾನ್ ವಾಯುಪ್ರದೇಶ ಬಂದ್, ಯುದ್ಧ ಪುನರಾರಂಭ ಸಾಧ್ಯತೆ

2028ರ ಚುನಾವಣಾ ತಯಾರಿಯಲ್ಲಿ ಕಾಂಗ್ರೆಸ್! ಬಿಜೆಪಿ-ಜೆಡಿಎಸ್ ಮತ ವಿಭಜನೆಯ ಚಿಂತೆ; ಉಳಿಯುತ್ತಾ NDA ಮೈತ್ರಿ?

Women's T20 World Cup 2026: ಭಾರತ vs ಪಾಕಿಸ್ತಾನ ಪಂದ್ಯ, ಎಲ್ಲಿ, ಯಾವಾಗ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ..

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: ಇರಾನ್ ಕ್ಷಿಪಣಿ ದಾಳಿ, ಗಾಜಾ ಗಡಿದ್ವಾರ ಬಂದ್; ‘ಪ್ರತಿದಾಳಿ ಬೇಡ’- ನೆತನ್ಯಾಹುಗೆ ಟ್ರಂಪ್ ಖಡಕ್ ಸಂದೇಶ

ಸಾಮಾನ್ಯವಾದ ನೀರಿನ ಬಾಟಲಿಗೂ ವಿಮಾನ ನಿಲ್ದಾಣಗಳು ಹೆದರುತ್ತವೇಕೆ?

SCROLL FOR NEXT