ಸಾಂದರ್ಭಿಕ ಚಿತ್ರ 
ರಾಜ್ಯ

rowdyismಗೆ ಬ್ರೇಕ್ ಹಾಕಲು ಸರ್ಕಾರ ದಿಟ್ಟ ಹೆಜ್ಜೆ: ರಾಜ್ಯದಾದ್ಯಂತ Anti-Rowdy Squad ರಚನೆಗೆ ಆದೇಶ; ಇನ್ನು ಪುಂಡರ ಮೇಲೆ 24x7 ಪೊಲೀಸರ ನಿಗಾ..!

ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಸಮಾಜಘಾತುಕ ಶಕ್ತಿಗಳು, ರೌಡಿಶೀಟರ್‌ಗಳು ಮತ್ತು ಅಪರಾಧಿ ಗುಂಪುಗಳ ವಿರುದ್ಧ ಇನ್ನಷ್ಟು ಪರಿಣಾಮಕಾರಿ ಕಾರ್ಯಾಚರಣೆ ನಡೆಸುವ ಉದ್ದೇಶ ಹೊಂದಿದೆ.

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ರೌಡಿಸಂ, ಸಂಘಟಿತ ಅಪರಾಧ ಚಟುವಟಿಕೆಗಳು ಹಾಗೂ ಸಮಾಜಘಾತುಕ ಕೃತ್ಯಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ.

ರಾಜ್ಯದ ಎಲ್ಲಾ ಪೊಲೀಸ್ ವಲಯಗಳು ಹಾಗೂ ಪೊಲೀಸ್ ಠಾಣೆ ಮಟ್ಟದಲ್ಲಿ ವಿಶೇಷ ಆ್ಯಂಟಿ-ರೌಡಿ ಸ್ಕ್ವಾಡ್‌ಗಳನ್ನು ರಚಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾ ನಿರೀಕ್ಷಕ ಎಂ.ಎ.ಸಲೀಂ ಅವರು ಆದೇಶ ಹೊರಡಿಸಿದ್ದಾರೆ.

ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಸಮಾಜಘಾತುಕ ಶಕ್ತಿಗಳು, ರೌಡಿಶೀಟರ್‌ಗಳು ಮತ್ತು ಅಪರಾಧಿ ಗುಂಪುಗಳ ವಿರುದ್ಧ ಇನ್ನಷ್ಟು ಪರಿಣಾಮಕಾರಿ ಕಾರ್ಯಾಚರಣೆ ನಡೆಸುವ ಉದ್ದೇಶ ಹೊಂದಿದೆ.

ವಿಶೇಷವಾಗಿ ನಗರ ಪ್ರದೇಶಗಳ ಜೊತೆಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿಯೂ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಈ ಸ್ಕ್ವಾಡ್‌ಗಳು ಕಾರ್ಯನಿರ್ವಹಿಸಲಿವೆ.

ಹೊಸ ಆದೇಶದ ಪ್ರಕಾರ, ಪ್ರತಿ ಪೊಲೀಸ್ ವಲಯದಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ವಿಶೇಷ ರೌಡಿ ಸ್ಕ್ವಾಡ್ ಕಾರ್ಯನಿರ್ವಹಿಸಲಿದೆ. ಅದೇ ರೀತಿ, ಪೊಲೀಸ್ ಇನ್ಸ್‌ಪೆಕ್ಟರ್ ನೇತೃತ್ವದ ಪೊಲೀಸ್ ಠಾಣೆಗಳಲ್ಲಿಯೂ ಪ್ರತ್ಯೇಕ ಠಾಣೆ ಮಟ್ಟದ ಸ್ಕ್ವಾಡ್ ರಚಿಸಲಾಗುತ್ತದೆ.

ಸ್ಥಳೀಯ ಅಪರಾಧ ಪರಿಸ್ಥಿತಿಯನ್ನು ಆಧರಿಸಿ ಉಪ ವಿಭಾಗೀಯ ಪೊಲೀಸ್ ಅಧಿಕಾರಿ (SDPO) ಅಥವಾ ಸಹಾಯಕ ಪೊಲೀಸ್ ಆಯುಕ್ತರು (ACP) ಸ್ಕ್ವಾಡ್ ಸದಸ್ಯರ ಸಂಖ್ಯೆಯನ್ನು ಹಾಗೂ ರಚನೆಯನ್ನು ನಿರ್ಧರಿಸಲಿದ್ದಾರೆ.

ಈ ಸ್ಕ್ವಾಡ್‌ಗಳ ಪ್ರಮುಖ ಜವಾಬ್ದಾರಿಗಳಲ್ಲಿ ರೌಡಿಶೀಟರ್‌ಗಳ ಗುರುತಿಸುವಿಕೆ, ಅವರ ಚಟುವಟಿಕೆಗಳ ಮೇಲ್ವಿಚಾರಣೆ, ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಪರಿಶೀಲನೆ ಮತ್ತು ಅಗತ್ಯವಿದ್ದಲ್ಲಿ ಹೊಸ ರೌಡಿಶೀಟ್ ತೆರೆಯುವುದು ಸೇರಿದೆ. ಜೊತೆಗೆ ಅಪರಾಧಿ ಗ್ಯಾಂಗ್‌ಗಳ ಚಟುವಟಿಕೆಗಳ ಬಗ್ಗೆ ಗುಪ್ತಚರ ಮಾಹಿತಿ ಸಂಗ್ರಹಿಸಿ, ಸಮಾಜಘಾತುಕ ವ್ಯಕ್ತಿಗಳ ಮೇಲೆ ನಿರಂತರ ನಿಗಾ ಇರಿಸುವ ಕೆಲಸವನ್ನು ಕೂಡ ಸ್ಕ್ವಾಡ್ ನಿರ್ವಹಿಸಲಿದೆ.

ಇದಲ್ಲದೆ, ನ್ಯಾಯಾಲಯಗಳಿಂದ ಹೊರಡಿಸಲಾದ ವಾರಂಟ್‌ಗಳ ಜಾರಿ, ಮುನ್ನೆಚ್ಚರಿಕಾ ಕ್ರಮಗಳ ಅನುಷ್ಠಾನ, ಅಗತ್ಯವಿದ್ದಲ್ಲಿ ಗೂಂಡಾ ಕಾಯ್ದೆ ಹಾಗೂ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (KCOCA) ಅಡಿಯಲ್ಲಿ ಕ್ರಮ ಕೈಗೊಳ್ಳುವುದು, ಅಪರಾಧ ಪೀಡಿತ ಪ್ರದೇಶಗಳಲ್ಲಿ ದಿಢೀರ್ ತಪಾಸಣೆ ನಡೆಸುವುದು ಸೇರಿದಂತೆ ಹಲವು ಜವಾಬ್ದಾರಿಗಳನ್ನು ಸ್ಕ್ವಾಡ್‌ಗೆ ವಹಿಸಲಾಗಿದೆ.

ಪೊಲೀಸ್ ಇಲಾಖೆಯ ಸುತ್ತೋಲೆಯ ಪ್ರಕಾರ, ಪ್ರತಿ ಠಾಣೆಯಲ್ಲೂ ರೌಡಿಶೀಟರ್‌ಗಳ ನವೀಕೃತ ದಾಖಲೆಗಳನ್ನು ನಿರ್ವಹಿಸಬೇಕು. ಅವರ ಚಲನವಲನ, ಚಟುವಟಿಕೆಗಳು ಹಾಗೂ ಕೈಗೊಂಡ ಕ್ರಮಗಳ ಕುರಿತು ಮಾಸಿಕ ವರದಿಯನ್ನು ಸಿದ್ಧಪಡಿಸಿ ಮೇಲಾಧಿಕಾರಿಗಳಿಗೆ ಸಲ್ಲಿಸುವುದು ಕಡ್ಡಾಯವಾಗಿದೆ. ಸ್ಕ್ವಾಡ್ ರಚನೆಯ ಕುರಿತ ಅನುಷ್ಠಾನ ವರದಿಯನ್ನು ಏಳು ದಿನಗಳೊಳಗೆ ಸಲ್ಲಿಸುವಂತೆ ಎಲ್ಲಾ ಘಟಕಗಳಿಗೆ ಸೂಚಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ರೌಡಿಸಂ, ಸುಲಿಗೆ, ಬೆದರಿಕೆ ಹಾಗೂ ಸಂಘಟಿತ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತವಾಗಿತ್ತು.

ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ರಾಜ್ಯಮಟ್ಟದಲ್ಲಿ ಸಮನ್ವಯಿತ ಕಾರ್ಯಾಚರಣೆಗೆ ಮುಂದಾಗಿದ್ದು, ಹೊಸ ಆ್ಯಂಟಿ-ರೌಡಿ ಸ್ಕ್ವಾಡ್‌ಗಳು ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆ ಇದೆ.

ಪೊಲೀಸ್ ಇಲಾಖೆಯ ಈ ಕ್ರಮವನ್ನು ಕಾನೂನು ಮತ್ತು ಸುವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯೆಂದು ಪರಿಗಣಿಸಲಾಗುತ್ತಿದ್ದು, ರೌಡಿಶೀಟರ್‌ಗಳು ಹಾಗೂ ಸಂಘಟಿತ ಅಪರಾಧ ಜಾಲಗಳ ವಿರುದ್ಧ ರಾಜ್ಯಾದ್ಯಂತ ಕಟ್ಟುನಿಟ್ಟಿನ ಕ್ರಮಗಳು ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಸೂಚನೆಗೆ ಕ್ಯಾರೆ ಎನ್ನದ ಇಸ್ರೇಲ್: ಇರಾನ್ ಮೇಲೆ ವೈಮಾನಿಕ ದಾಳಿ; ಟೆಹ್ರಾನ್ ವಾಯುಪ್ರದೇಶ ಬಂದ್, ಯುದ್ಧ ಪುನರಾರಂಭ ಸಾಧ್ಯತೆ

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: ಇರಾನ್ ಕ್ಷಿಪಣಿ ದಾಳಿ, ಗಾಜಾ ಗಡಿದ್ವಾರ ಬಂದ್; ‘ಪ್ರತಿದಾಳಿ ಬೇಡ’- ನೆತನ್ಯಾಹುಗೆ ಟ್ರಂಪ್ ಖಡಕ್ ಸಂದೇಶ

'You're Crooked': ಪರ್ತಕರ್ತೆ ಕೇಳಿದ ಪ್ರಶ್ನೆಗೆ ಬೆಚ್ಚಿದ ಅಮೆರಿಕ ಅಧ್ಯಕ್ಷ, TV ಸಂದರ್ಶನ ಮೊಟಕುಗೊಳಿಸಿ, ಮಧ್ಯದಲ್ಲಿಯೇ ಹೊರನಡೆದ ಟ್ರಂಪ್! Video

ಪ್ರಬಲ ಭೂಕಂಪಕ್ಕೆ ತತ್ತರಿಸಿದ ಫಿಲಿಪೈನ್ಸ್‌: ರಿಕ್ಟರ್ ಮಾಪಕದಲ್ಲಿ 7.8 ತೀವ್ರತೆ ದಾಖಲು, ಇಂಡೋನೇಷ್ಯಾ ಸೇರಿ ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

ರಾಜ್ಯಸಭೆ, ವಿಧಾನ ಪರಿಷತ್ ಗೆ ಕರ್ನಾಟಕ ಬಿಜೆಪಿಯಿಂದ ಅಚ್ಚರಿಯ ಹೆಸರು ಘೋಷಣೆ!

SCROLL FOR NEXT