ತುಮಕೂರಿನಲ್ಲಿ ಭಾನುವಾರ ಡಿಸಿಎಂ ಡಾ. ಜಿ. ಪರಮೇಶ್ವರ ಅವರನ್ನು ಬಿಜೆಪಿ ಶಾಸಕರಾದ ಬಿ. ಸುರೇಶ್ ಗೌಡ ಮತ್ತು ಜಿ. ಬಿ. ಜ್ಯೋತಿಗಣೇಶ್ ಸ್ವಾಗತಿಸಿದರು. 
ರಾಜ್ಯ

ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: CM ಜೊತೆ ಚರ್ಚಿಸುವೆ ಎಂದ DCM ಪರಮೇಶ್ವರ್

ನಾನು ಇನ್ನೂ ಆ ಜಾಹೀರಾತುಗಳನ್ನು ಗಮನಿಸಿಲ್ಲ. ಬೆಂಗಳೂರಿಗೆ ಹಿಂತಿರುಗಿದ ಬಳಿಕ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ. ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಈ ಲೋಪ ಮಾಡಿದ್ದರೆ ಅವರೊಂದಿಗೂ ಚರ್ಚಿಸುತ್ತೇನೆ.

ತುಮಕೂರು: ಸರ್ಕಾರದ ಅಧಿಕೃತ ಜಾಹೀರಾತುಗಳಲ್ಲಿ ತಮ್ಮ ಫೋಟೋ ಕೈಬಿಡಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದು, ಈ ವಿಷಯವನ್ನು ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರೊಂದಿಗೆ ಚರ್ಚಿಸುವುದಾಗಿ ಹೇಳಿದ್ದಾರೆ.

ತುಮಕೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಅಧಿಕಾರಿಗಳ ಮಟ್ಟದಲ್ಲಿ ನಡೆದಿರುವ ಲೋಪವಾಗಿದ್ದರೆ ಅದನ್ನು ಸರಿಪಡಿಸಲಾಗುವುದು. ಈಗ ಸರ್ಕಾರದ ಕೆಲಸ ಮಾಡುವುದು ನಮಗೆ ಮುಖ್ಯ, ಫೋಟೋ ಬಗ್ಗೆ ಹೆಚ್ಚು ಚಿಂತಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ನಾನು ಇನ್ನೂ ಆ ಜಾಹೀರಾತುಗಳನ್ನು ಗಮನಿಸಿಲ್ಲ. ಬೆಂಗಳೂರಿಗೆ ಹಿಂತಿರುಗಿದ ಬಳಿಕ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ. ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಈ ಲೋಪ ಮಾಡಿದ್ದರೆ ಅವರೊಂದಿಗೂ ಚರ್ಚಿಸುತ್ತೇನೆ. ಫೋಟೋ ಕೈಬಿಟ್ಟಿರುವ ಉದ್ದೇಶ ಅಥವಾ ಕಾರಣ ಏನು ಎಂಬುದು ನನಗೆ ಗೊತ್ತಿಲ್ಲ. ಅದನ್ನು ಪರಿಶೀಲಿಸಿ ಸರಿಪಡಿಸುತ್ತೇವೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜು ಅರಸು ಅವರ ಜನ್ಮದಿನದ ಅಂಗವಾಗಿ ಹಿಂದುಳಿದ ವರ್ಗಗಳ ಇಲಾಖೆ ಬಿಡುಗಡೆ ಮಾಡಿದ್ದ ಸರ್ಕಾರಿ ಜಾಹೀರಾತುಗಳಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರ ಪ್ರಮುಖವಾಗಿ ಪ್ರಕಟವಾಗಿದ್ದರೆ, ಹಿಂದುಳಿದ ವರ್ಗಗಳ ಕಲ್ಯಾಣ ಖಾತೆಯನ್ನೂ ಹೊಂದಿರುವ ಡಿಸಿಎಂ ಪರಮೇಶ್ವರ್ ಅವರ ಫೋಟೋ ಇರಲಿಲ್ಲ. ಈ ವಿಚಾರವನ್ನು ಜೆಡಿಎಸ್ ಹಾಗೂ ಕೆಲವು ದಲಿತ ಸಂಘಟನೆಗಳು ಪ್ರಶ್ನಿಸಿದ್ದವು.

ಇದರ ನಡುವೆ ತುಮಕೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪರಮೇಶ್ವರ್ ಅವರು ಅಲೆಮಾರಿ ಸಮುದಾಯದ 209 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿದರು. ಮುಂದಿನ ದಿನಗಳಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಈ ಕುಟುಂಬಗಳಿಗೆ ಮನೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಗೌಡ ಅವರು ಸರ್ಕಾರದ ಕಾರ್ಯವನ್ನು ಶ್ಲಾಘಿಸಿದರು.

ತುಮಕೂರು ಜಿಲ್ಲೆಯಲ್ಲಿ ಉತ್ತಮ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಕಾಂಗ್ರೆಸ್ ಸರ್ಕಾರ ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಪರಮೇಶ್ವರ್ ಅವರು ಇನ್ನಷ್ಟು ಯೋಜನೆಗಳನ್ನು ಜಾರಿಗೆ ತಂದು ಜಿಲ್ಲೆಯ ಅಭಿವೃದ್ಧಿಗೆ ತಮ್ಮದೇ ಛಾಪು ಮೂಡಿಸಲಿ ಎಂದು ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಸೂಚನೆಗೆ ಕ್ಯಾರೆ ಎನ್ನದ ಇಸ್ರೇಲ್: ಇರಾನ್ ಮೇಲೆ ವೈಮಾನಿಕ ದಾಳಿ; ಟೆಹ್ರಾನ್ ವಾಯುಪ್ರದೇಶ ಬಂದ್, ಯುದ್ಧ ಪುನರಾರಂಭ ಸಾಧ್ಯತೆ

2028ರ ಚುನಾವಣಾ ತಯಾರಿಯಲ್ಲಿ ಕಾಂಗ್ರೆಸ್! ಬಿಜೆಪಿ-ಜೆಡಿಎಸ್ ಮತ ವಿಭಜನೆಯ ಚಿಂತೆ; ಉಳಿಯುತ್ತಾ NDA ಮೈತ್ರಿ?

Women's T20 World Cup 2026: ಭಾರತ vs ಪಾಕಿಸ್ತಾನ ಪಂದ್ಯ, ಎಲ್ಲಿ, ಯಾವಾಗ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ..

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: ಇರಾನ್ ಕ್ಷಿಪಣಿ ದಾಳಿ, ಗಾಜಾ ಗಡಿದ್ವಾರ ಬಂದ್; ‘ಪ್ರತಿದಾಳಿ ಬೇಡ’- ನೆತನ್ಯಾಹುಗೆ ಟ್ರಂಪ್ ಖಡಕ್ ಸಂದೇಶ

ಸಾಮಾನ್ಯವಾದ ನೀರಿನ ಬಾಟಲಿಗೂ ವಿಮಾನ ನಿಲ್ದಾಣಗಳು ಹೆದರುತ್ತವೇಕೆ?

SCROLL FOR NEXT