ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಸುಂಕಲ್ ಪಾಳ್ಯ ಕೆರೆಯಲ್ಲಿ ಕಲುಷಿತ ನೀರಿನಿಂದ ನೂರಾರು ಮೀನುಗಳ ಸಾವು!

ಕೆರೆಯಲ್ಲಿ ತೇಲುತ್ತಿದ್ದ ಮೀನುಗಳನ್ನು ಕೆಲವರು ಗಮನಿಸಿದ್ದು, ಬಳಿಕ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ

ಬೆಂಗಳೂರು: ಬೆಂಗಳೂರು ಪಶ್ಚಿಮ ನಗರ ಪಾಲಿಕೆ (BWCC) ವ್ಯಾಪ್ತಿಯ ಸುಂಕಲ್ ಪಾಳ್ಯ ಕೆರೆಯಲ್ಲಿ ಕಲುಷಿತ ನೀರು ಹಾಗೂ ಆಮ್ಲಜನಕದ ಮಟ್ಟ ಕುಸಿದಿದ್ದರಿಂದ ನೂರಾರು ಮೀನುಗಳು ಸಾವನ್ನಪ್ಪಿವೆ ಎಂದು ವರದಿಯಾಗಿದೆ.

ಕೆರೆಯಲ್ಲಿ ತೇಲುತ್ತಿದ್ದ ಮೀನುಗಳನ್ನು ಕೆಲವರು ಗಮನಿಸಿದ್ದು, ಬಳಿಕ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ಈ ಕುರಿತು ಮಾತನಾಡಿದ ಸುಂಕಲ್ ಪಾಳ್ಯ ನಿವಾಸಿ ದೀಪು ನಾಯರ್, ಅಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸಿದೆ. ಆದರೆ, ಅವರು ಇತರ ಅಧಿಕಾರಿಗಳ ನಂಬರ್ ನೀಡಿ, ಈ ವಿಷಯ ಕುರಿತು ತಿಳಿಸುವಂತೆ ಹೇಳಿದೆ. ಇದು ಹೀಗೆಯೇ ಇದೆ, ಸಮಸ್ಯೆಯನ್ನು ಪರಿಹರಿಸಲಾಗಿಲ್ಲ ಎಂದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಹಿರಿಯ ಅಧಿಕಾರಿಯೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸಲಾಗಿದೆ. ಆದರೆ ಯಾವುದೇ ಉತ್ತರ ಬರಲಿಲ್ಲ. ಕೆರೆಗಳ ನಿರ್ವಹಣೆಯನ್ನು ಬಿಡಿಎಯಿಂದ ಜಿಬಿಎಗೆ ವರ್ಗಾಯಿಸಲಾಗಿದೆ ಎಂಬುದು ತದನಂತರ ಗೊತ್ತಾಯಿತು ಎಂದು ಅವರು ತಿಳಿಸಿದರು.

ಮೃತಪಟ್ಟ ಮೀನುಗಳನ್ನು ಸಂಗ್ರಹಿಸಲು ಕೆಲವು ಕಾರ್ಮಿಕರನ್ನು ಅಧಿಕಾರಿಗಳು ನಿಯೋಜಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಇದು ನಡೆಯುತ್ತಿದೆ. ಈ ವಿಚಾರ ಹೊರಗೆ ಬಾರದಂತೆ ಮಾಡಲಾಗುತ್ತಿದೆ. ಸತ್ತ ಮೀನುಗಳನ್ನು ತೆಗೆದುಹಾಕದಿದ್ದರೆ, ದುರ್ವಾಸನೆ ಅಸಹನೀಯವಾಗುತ್ತಿತ್ತು ಮತ್ತು ಸಮಸ್ಯೆ ದೊಡ್ಡದಾಗುತ್ತಿತ್ತು ಎಂದು ಅವರು ಹೇಳಿದರು.

ಬಿಡಬ್ಲ್ಯೂಸಿಸಿಯ ಕಾರ್ಯನಿರ್ವಾಹಕ ಎಂಜಿನಿಯರ್ (ಕೆರೆಗಳು) ಗೀತಾ ಮಾತನಾಡಿ, ಬಿಜಿಎಸ್ ಆಸ್ಪತ್ರೆ ಬದಿಯ ಬಳಿಯಿರುವ ಬಡಾವಣೆಗಳಲ್ಲಿ ಸೂಕ್ತವಾದ ಒಳಚರಂಡಿಯ ಅಗತ್ಯವಿದೆ. 15.4 ಎಕರೆ ವಿಸ್ತೀರ್ಣದ ಕೆರೆಗೆ ಒಳಚರಂಡಿ ನೀರು ಹರಿಯುವುದನ್ನು ತಡೆಯಲು ತಿರುವು ಮಾರ್ಗವನ್ನು ಸ್ಥಾಪಿಸಲಾಗುವುದು ಎಂದು BWSSB ತಿಳಿಸಿರುವುದಾಗಿ ಹೇಳಿದರು.

ನಾವು ಈ ವಿಷಯವನ್ನು ತಿಳಿಸಿದ್ದೇವೆ ಮತ್ತು ಕೆರೆಯು ಒಳಚರಂಡಿಯಿಂದ ಕಲುಷಿತವಾಗದಂತೆ ನೋಡಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಳಿಕೊಂಡಿದ್ದೇವೆ. ನಾಗರಿಕ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ಸಹ ಭರವಸೆ ನೀಡಿದ್ದಾರೆ ಎಂದು ಗೀತಾ ತಿಳಿಸಿದರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಸ್ವಾಯತ್ತ ಸಂಸ್ಥೆಯಾಗಿದ್ದು, ಈ ಸಮಸ್ಯೆಯನ್ನು ಪರಿಹರಿಸಲು ನೋಟಿಸ್ ನೀಡುವ ಮೂಲಕ ಮತ್ತು ಬಿಡಬ್ಲ್ಯೂಎಸ್ಎಸ್ಬಿಯನ್ನು ತರಾಟೆಗೆ ತೆಗೆದುಕೊಳ್ಳುವ ಮೂಲಕ ಈ ಸಮಸ್ಯೆಯನ್ನು ಪರಿಹರಿಸಬಹುದು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.“KSPCB ಜಲಮಂಡಳಿಯನ್ನು ತರಾಟೆಗೆ ತೆಗೆದುಕೊಂಡರೆ, ಕಾಮಗಾರಿಗಳು ವೇಗ ಪಡೆಯುತ್ತವೆ ಮತ್ತು ಕೆರೆ ಮಾಲಿನ್ಯವನ್ನು ಸರಿಪಡಿಸಬಹುದು” ಎಂದು ಅಧಿಕಾರಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೋದಿ ಸರ್ಕಾರದ ವಿರುದ್ಧ ಮಹಾಸಮರಕ್ಕೆ INDIA ಮೈತ್ರಿಕೂಟ ಸಜ್ಜು: ಭಿನ್ನಾಭಿಪ್ರಾಯಗಳ ನಡುವೆಯೂ ಬಲ ತುಂಬುವ ಯತ್ನ, ‘ಒಗ್ಗಟ್ಟೇ ನಮ್ಮ ಶಕ್ತಿ’ ಎಂದ ಮಲ್ಲಿಕಾರ್ಜುನ ಖರ್ಗೆ..!

ಪರಮೇಶ್ವರಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕಿತ್ತಾ?: 3 ಬಾರಿ ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ಕಣ್ಣೀರಿಟ್ಟ DCM!

ಆರ್. ಮಾಧವನ್‌ ಹಿರಿಮೆಗೆ ಮತ್ತೊಂದು ಗರಿ: ಬಹುಮುಖ ಪ್ರತಿಭೆ ನಟ, ಚಿತ್ರಕಥೆಗಾರ, ನಿರ್ದೇಶಕನಿಗೆ Padma Shri ಪ್ರಶಸ್ತಿ

India vs Afghanistan: 2 ಎಸೆತದಲ್ಲಿ 3 ವಿಕೆಟ್, 36 ಓವರ್ ನಲ್ಲೇ ಆಪ್ಘನ್ ಹೆಡೆಮುರಿ ಕಟ್ಟಿದ ಭಾರತ, Gill ಪಡೆಗೆ ಇನ್ನಿಂಗ್ಸ್ ಜಯ

ರಾಜ್ಯಸಭೆಗೆ ಸಾಮಾನ್ಯ ಕಾರ್ಯಕರ್ತನನ್ನು BJP ಅಭ್ಯರ್ಥಿ ಮಾಡಿದೆ, ದೇವೇಗೌಡರ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ: BY Vijayendra

SCROLL FOR NEXT