ಭಾರತೀಯ ರೈಲು 
ರಾಜ್ಯ

ಬೆಂಗಳೂರು-ತುಮಕೂರು ರೈಲು ಮಾರ್ಗದಲ್ಲಿ ಮಹತ್ವದ ಬದಲಾವಣೆ; ಸಾಮರ್ಥ್ಯ ಹೆಚ್ಚಿಸಲು 162 ಕೋಟಿ ರೂ. ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ..!

ಈ ಯೋಜನೆಯ ಮೂಲಕ ಸುಮಾರು 120 ಟ್ರ್ಯಾಕ್ ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಹಾಲಿ ವಿದ್ಯುತ್ ಟ್ರಾಕ್ಷನ್ ವ್ಯವಸ್ಥೆಯನ್ನು ಸುಧಾರಿತ ವ್ಯವಸ್ಥೆಯಾಗಿ ಪರಿವರ್ತಿಸಲಾಗುತ್ತದೆ. ಬೆಂಗಳೂರು-ತುಮಕೂರು ಮಾರ್ಗವು ನೈಋತ್ಯ ರೈಲ್ವೆ ವ್ಯಾಪ್ತಿಯ ಪ್ರಮುಖ ಸಂಚಾರ ದಟ್ಟಣೆಯ ರೈಲು ಕಾರಿಡಾರ್‌ಗಳಲ್ಲಿ ಒಂದಾಗಿದೆ.

ಬೆಂಗಳೂರು: ಕರ್ನಾಟಕದ ಅತ್ಯಂತ ಬ್ಯುಸಿ ರೈಲು ಮಾರ್ಗಗಳಲ್ಲಿ ಒಂದಾದ ಬೆಂಗಳೂರು-ತುಮಕೂರು ರೈಲು ಮಾರ್ಗದ ಸಾಮರ್ಥ್ಯ ಹೆಚ್ಚಿಸುವ ಉದ್ದೇಶದಿಂದ ಭಾರತೀಯ ರೈಲ್ವೆ 162.57 ಕೋಟಿ ರೂ. ವೆಚ್ಚದ ಮಹತ್ವಾಕಾಂಕ್ಷಿ ಯೋಜನೆಗೆ ಅನುಮೋದನೆ ನೀಡಿದೆ.

ಈ ಯೋಜನೆಯಡಿ ನೈಋತ್ಯ ರೈಲ್ವೆ ವ್ಯಾಪ್ತಿಯಲ್ಲಿರುವ ಬೆಂಗಳೂರು-ತುಮಕೂರು ವಿಭಾಗದ ವಿದ್ಯುತ್ ಟ್ರಾಕ್ಷನ್ ವ್ಯವಸ್ಥೆಯನ್ನು ಅತ್ಯಾಧುನಿಕ ತಂತ್ರಜ್ಞಾನಕ್ಕೆ ಮೇಲ್ದರ್ಜೆಗೇರಿಸಲಾಗುತ್ತದೆ.

ಈ ಯೋಜನೆಯ ಮೂಲಕ ಸುಮಾರು 120 ಟ್ರ್ಯಾಕ್ ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಹಾಲಿ ವಿದ್ಯುತ್ ಟ್ರಾಕ್ಷನ್ ವ್ಯವಸ್ಥೆಯನ್ನು ಸುಧಾರಿತ ವ್ಯವಸ್ಥೆಯಾಗಿ ಪರಿವರ್ತಿಸಲಾಗುತ್ತದೆ. ಬೆಂಗಳೂರು-ತುಮಕೂರು ಮಾರ್ಗವು ನೈಋತ್ಯ ರೈಲ್ವೆ ವ್ಯಾಪ್ತಿಯ ಪ್ರಮುಖ ಸಂಚಾರ ದಟ್ಟಣೆಯ ರೈಲು ಕಾರಿಡಾರ್‌ಗಳಲ್ಲಿ ಒಂದಾಗಿದೆ.

ಈ ಮಾರ್ಗವು ಪುಣೆ-ಹುಬ್ಬಳ್ಳಿ-ಚಿಕ್ಜಾಜೂರು-ಬೀರೂರು-ತುಮಕೂರು-ಬೆಂಗಳೂರು-ಸೇಲಂ-ಕನ್ನಿಯಾಕುಮಾರಿ ರೈಲು ಕಾರಿಡಾರ್‌ನ ಭಾಗವಾಗಿದ್ದು, ದೇಶದ ಪ್ರಮುಖ ಕೈಗಾರಿಕಾ ಹಾಗೂ ಆರ್ಥಿಕ ಕೇಂದ್ರಗಳನ್ನು ಸಂಪರ್ಕಿಸುವ ಪ್ರಮುಖ ರೈಲು ಸಂಪರ್ಕ ಮಾರ್ಗವಾಗಿದೆ.

ರೈಲ್ವೆ ಇಲಾಖೆ ಪ್ರಕಟಿಸಿರುವ ಮಾಹಿತಿಯ ಪ್ರಕಾರ, ಈ ಯೋಜನೆ ನೂತನ ವಿದ್ಯುತ್ ಟ್ರಾಕ್ಷನ್ ವ್ಯವಸ್ಥೆ ರೈಲುಗಳ ಕಾರ್ಯಾಚರಣೆಗೆ ಅಗತ್ಯವಿರುವ ವಿದ್ಯುತ್ ಪೂರೈಕೆಯನ್ನು ಮತ್ತಷ್ಟು ಬಲಪಡಿಸಲಿದ್ದು, ಇದರಿಂದ ಈ ಮಾರ್ಗದಲ್ಲಿ ಹೆಚ್ಚು ಸಂಖ್ಯೆಯ ರೈಲುಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದೆ.

ಇದರ ಜೊತೆಗೆ, ಉದ್ದವಾದ ಪ್ರಯಾಣಿಕರ ರೈಲುಗಳು ಮತ್ತು ಹೆಚ್ಚಿನ ಸರಕು ಸಾಗಣೆ ಸಾಮರ್ಥ್ಯ ಹೊಂದಿರುವ ರೈಲುಗಳ ಸಂಚಾರಕ್ಕೂ ಇದು ನೆರವಾಗಲಿದೆ. ವಿದ್ಯುತ್ ಟ್ರಾಕ್ಷನ್ ಜಾಲದ ವಿಶ್ವಾಸಾರ್ಹತೆಯೂ ಹೆಚ್ಚಲಿದ್ದು, ರೈಲು ಸಂಚಾರದ ನಿರಂತರತೆಯನ್ನು ಸುಧಾರಿಸಲಿದೆ ಎಂದು ಮಾಹಿತಿ ನೀಡಿದೆ.

ಯೋಜನೆಯಿಂದ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಈ ಮಾರ್ಗದಲ್ಲಿ ಆಗಾಗ ಉಂಟಾಗುವ ಸಂಚಾರ ದಟ್ಟಣೆ ಕಡಿಮೆಯಾಗುವ ನಿರೀಕ್ಷೆಯಿದೆ.

ಪ್ರಯಾಣಿಕರ ಹಾಗೂ ಸರಕು ಸಾಗಣೆ ರೈಲುಗಳ ಸುಗಮ ಸಂಚಾರಕ್ಕೆ ಯೋಜನೆ ನೆರವಾಗಲಿದ್ದು, ಕರ್ನಾಟಕ ಹಾಗೂ ದಕ್ಷಿಣ ಭಾರತದ ರೈಲು ಸಂಪರ್ಕ ವ್ಯವಸ್ಥೆಗೆ ಈ ಯೋಜನೆ ಮತ್ತಷ್ಟು ಬಲ ನೀಡಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

BDA, BMRDA ಇಲ್ಲದ ಬೆಂಗಳೂರು ಅಭಿವೃದ್ಧಿ ಖಾತೆಗೆ ಬೆಲೆಯೇ ಇಲ್ಲ: ರಾಮಲಿಂಗಾ ರೆಡ್ಡಿ ಬಳಿಕ ಕೃಷ್ಣ ಬೈರೇಗೌಡ ಸಿಟ್ಟು, ಹೈಕಮಾಂಡ್‌ಗೆ ದೂರು..?

H-1B ವೀಸಾ ಅರ್ಜಿದಾರರಿಗೆ ಬಿಗ್ ರಿಲೀಫ್: ಟ್ರಂಪ್ ಹೇರಿದ್ದ ಭಾರೀ ಶುಲ್ಕ ರದ್ದು, 'fast-track fee' ಕಾನೂನುಬಾಹಿರ ಎಂದ ಫೆಡರಲ್ ಕೋರ್ಟ್

'ಸಂಪೂರ್ಣ ಗೆಲುವಿ'ನೊಂದಿಗೆ ಇನ್ನೂ 18 ದಿನಗಳಲ್ಲಿ ಇರಾನ್ ವಿರುದ್ಧದ ಯುದ್ಧ ಅಂತ್ಯ: ಡೊನಾಲ್ಡ್ ಟ್ರಂಪ್ ಭರವಸೆ

ಅಮೆರಿಕಾ ಜೊತೆ ಯಾಕೆ ಸಂಘರ್ಷ?’: ಟ್ರಂಪ್ ಒತ್ತಡಕ್ಕೆ ಮಣಿದ ಇಸ್ರೇಲ್, ಇರಾನ್ ಮೇಲಿನ ಭಾರೀ ದಾಳಿ ಕೈಬಿಟ್ಟ ನೆತನ್ಯಾಹು

ಸಿದ್ದರಾಮಯ್ಯ ನಿರ್ಗಮನದ ನಂತರ ಬಿಜೆಪಿಯಿಂದ ಕುರುಬ ಸಮುದಾಯದ ನಾಗರಾಜ್ ಆಯ್ಕೆ: ದೇವೇಗೌಡರ 'ಸುವರ್ಣ ರಾಜಕೀಯ'ದ ಯುಗಾಂತ್ಯ!

SCROLL FOR NEXT