ಜಗದೀಶ್ ಶೆಟ್ಟರ್ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್ 
ರಾಜ್ಯ

ಹಿರಿಯರ ಅನುಭವ, ಮಾರ್ಗದರ್ಶನ ಬೇಕು: ಸಮಯ ಕೊಟ್ಟರೆ ಕುಮಾರಸ್ವಾಮಿ ಭೇಟಿ ಮಾಡುವೆ; ಡಿ.ಕೆ ಶಿವಕುಮಾರ್

ಈ ನಾಯಕರು ರಾಜ್ಯದ ಹಿತಕ್ಕೆ ಕೆಲಸ ಮಾಡಿದವರು. ಪ್ರತಿಯೊಬ್ಬರೂ ಜನರ ಹಿತಕ್ಕಾಗಿ ನಿರ್ಧಾರ ಕೈಗೊಂಡಿದ್ದಾರೆ. ಉದಾಹರಣೆಗೆ ಸದಾನಂದ ಗೌಡರು ಸಕಾಲ ಜಾರಿಗೆ ತಂದಿದ್ದಾರೆ.

ಬೆಂಗಳೂರು: ರಾಜ್ಯಕ್ಕೆ ಸೇವೆ ಮಾಡಿರುವ ಹಿರಿಯರ ಅನುಭವ ಹಾಗೂ ಮಾರ್ಗದರ್ಶನ ಕೇಳಬೇಕು" ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಬೆಂಗಳೂರಿನಲ್ಲಿರುವ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಜಗದೀಶ್ ಶೆಟ್ಟರ್, ಸದಾನಂದ ಗೌಡ ಅವರ ನಿವಾಸಕ್ಕೆ ಶಿವಕುಮಾರ್ ಅವರು ಸೋಮವಾರ ಸಂಜೆ ಭೇಟಿ ನೀಡಿ ಆಶೀರ್ವಾದ ಪಡೆದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಭೇಟಿಯ ಬಗ್ಗೆ ಕೇಳಿದಾಗ, "ನಾನು ಮೊಯ್ಲಿ ಅವರನ್ನು ಮಾತ್ರವಲ್ಲ, ಜಗದೀಶ್ ಶೆಟ್ಟರ್, ಸದಾನಂದ ಗೌಡರು ಮತ್ತು ಬೊಮ್ಮಾಯಿ ಅವರನ್ನು ಭೇಟಿ ಮಾಡಿರುವೆ. ಸಮಯ ಕೊಟ್ಟರೆ ಕುಮಾರಸ್ವಾಮಿ ಅವರನ್ನೂ ಭೇಟಿ ಮಾಡುವೆ. ಇವರೆಲ್ಲರೂ ರಾಜ್ಯಕ್ಕೆ ಸೇವೆ ಮಾಡಿದ್ದು, ಅವರಿಗೆ ನೀಡಬೇಕಾದ ಗೌರವ ಕೊಡಲೇಬೇಕು" ಎಂದರು.

"ಈ ನಾಯಕರು ರಾಜ್ಯದ ಹಿತಕ್ಕೆ ಕೆಲಸ ಮಾಡಿದವರು. ಪ್ರತಿಯೊಬ್ಬರೂ ಜನರ ಹಿತಕ್ಕಾಗಿ ನಿರ್ಧಾರ ಕೈಗೊಂಡಿದ್ದಾರೆ. ಉದಾಹರಣೆಗೆ ಸದಾನಂದ ಗೌಡರು ಸಕಾಲ ಜಾರಿಗೆ ತಂದಿದ್ದಾರೆ. ಅವರು ನನಗಿಂತ ಹಿರಿಯರು. ಅವರ ಮಾರ್ಗದರ್ಶನ ಪಡೆಯಲು ಬಂದಿರುವೆ.

ನಮ್ಮ ನಡುವೆ ಪಕ್ಷ ಹಾಗೂ ಸೈದ್ದಾಂತಿಕ ಭಿನ್ನಾಭಿಪ್ರಾಯ ಇರುವುದು ಬೇರೆ ವಿಚಾರ" ಎಂದರು.ಇಂದು ನಡೆದ ಇಂಡಿಯಾ ಒಕ್ಕೂಟ ಸಭೆ ಬಗ್ಗೆ ಕೇಳಿದಾಗ, "ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿ ಬೆಳೆಯಲಿದ್ದು, ನಾವೆಲ್ಲರೂ ಪ್ರಜಾಪ್ರಭುತ್ವ ವ್ಯವಸ್ಥೆ ರಕ್ಷಣೆ ಮಾಡಬೇಕಿದೆ" ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

H-1B ವೀಸಾ ಅರ್ಜಿದಾರರಿಗೆ ಬಿಗ್ ರಿಲೀಫ್: ಟ್ರಂಪ್ ಹೇರಿದ್ದ ಭಾರೀ ಶುಲ್ಕ ರದ್ದು, 'fast-track fee' ಕಾನೂನುಬಾಹಿರ ಎಂದ ಫೆಡರಲ್ ಕೋರ್ಟ್

ಸಿಎಂಗೆ ಮುಖ್ಯ ಸಲಹೆಗಾರರಾಗಿ ಸುನೀಲ್‌ ಕನುಗೋಳು ನೇಮಕ: ಸಂಪುಟ ದರ್ಜೆ ಸಚಿವರ ಸ್ಥಾನಮಾನ

ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಗೃಹ ಸಚಿವ ಖರ್ಗೆ ಖಡಕ್ ಸೂಚನೆ; ಇಲ್ಲಿದೆ ಕಾರಣ

INDIA ಮೈತ್ರಿಕೂಟದಲ್ಲಿ ಗದ್ದಲ: DMK, AAP ಗೈರು ಹಿನ್ನಲೆ ರಾಹುಲ್ ಗಾಂಧಿ, ಕಾಂಗ್ರೆಸ್ ವಿರುದ್ಧ ವ್ಯಾಪಕ ಆಕ್ರೋಶ!

ಡಿಕೆಶಿ ಸಂಪುಟದ 13 ಸಚಿವರಿಗೆ ಕೊಠಡಿ ಹಂಚಿಕೆ; ಖಾತೆ ಬಗ್ಗೆ ಕ್ಯಾತೆ ತೆಗೆದಿದ್ದ ರಾಮಲಿಂಗಾರೆಡ್ಡಿಗೆ ಬಂಪರ್!

SCROLL FOR NEXT