ಡಿಕೆ ಶಿವಕುಮಾರ್ 
ರಾಜ್ಯ

ಅಭಿವೃದ್ಧಿ ನಿಧಿ ಹಂಚಿಕೆಯಲ್ಲಿ ತಾರತಮ್ಯ ಮಾಡಬೇಡಿ: ಸಿಎಂ ಡಿಕೆ ಶಿವಕುಮಾರ್ ಗೆ ಜೆಡಿಎಸ್ ಶಾಸಕರ ಮನವಿ

ಅಭಿವೃದ್ಧಿ ನಿಧಿ ಹಂಚಿಕೆ ಮಾಡುವಾಗ ನಮ್ಮ ಪಕ್ಷದ ಶಾಸಕರ ವಿರುದ್ಧ ತಾರತಮ್ಯ ಮಾಡಬೇಡಿ ಎಂದು ನಾವು ಸಿಎಂ ಅವರನ್ನು ಒತ್ತಾಯಿಸಿದ್ದೇವೆ.

ಬೆಂಗಳೂರು: ಅಭಿವೃದ್ಧಿ ನಿಧಿ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ನಡೆದುಕೊಳ್ಳಿ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜೆಡಿಎಸ್ ಶಾಸಕರ ನಿಯೋಗ ಮನವಿ ಮಾಡಿದೆ.

ಕನಕಪುರದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಶಿವಕುಮಾರ್, ಜೆಡಿಎಸ್ ಕಾರ್ಯಕರ್ತರಿಗೆ ಮುಕ್ತ ಆಹ್ವಾನ ನೀಡಿದ ಒಂದು ದಿನದ ನಂತರ ಸಿಎಂ ಅವರನ್ನು ಭೇಟಿ ಮಾಡಿದ ನಿಯೋಗ ಮನವಿ ಸಲ್ಲಿಸಿದೆ. ನಾನು ಕಾಂಗ್ರೆಸ್ ಕಾರ್ಯಕರ್ತರಿಗೆ ಮಾತ್ರ ಸಿಎಂ ಅಲ್ಲ. ನನ್ನ ಬಾಗಿಲುಗಳು ಜೆಡಿಎಸ್ ಸದಸ್ಯರಿಗೂ ತೆರೆದಿರುತ್ತವೆ ಎಂದು ಶಿವಕುಮಾರ್ ಹೇಳಿದರು.

ಶಾಸಕ ಸಿ.ಬಿ. ಸುರೇಶ್ ಬಾಬು ನೇತೃತ್ವದ ಜೆಡಿ(ಎಸ್) ನಿಯೋಗದಲ್ಲಿ ಕರೆಮ್ಮ ನಾಯಕ್, ಎ. ಮಂಜು, ಜಿ.ಟಿ. ಹರೀಶ್ ಗೌಡ, ಸ್ವರೂಪ್ ಪ್ರಕಾಶ್, ಸಿ.ಎನ್. ಬಾಲಕೃಷ್ಣ, ವೆಂಕಟಶಿವ ರೆಡ್ಡಿ ಮತ್ತು ನೇಮಿರಾಜ್ ನಾಯಕ್ ಇದ್ದರು.

ಅಭಿವೃದ್ಧಿ ನಿಧಿ ಹಂಚಿಕೆ ಮಾಡುವಾಗ ನಮ್ಮ ಪಕ್ಷದ ಶಾಸಕರ ವಿರುದ್ಧ ತಾರತಮ್ಯ ಮಾಡಬೇಡಿ ಎಂದು ನಾವು ಸಿಎಂ ಅವರನ್ನು ಒತ್ತಾಯಿಸಿದ್ದೇವೆ. ಆದರೆ ಈ ರೀತಿ ಆಗುವುದಿಲ್ಲ ಎಂದು ಸಿಎಂ ನಮಗೆ ಭರವಸೆ ನೀಡಿದ್ದಾರೆ ಎಂದು ಸುರೇಶ್ ಬಾಬು ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

H-1B ವೀಸಾ ಅರ್ಜಿದಾರರಿಗೆ ಬಿಗ್ ರಿಲೀಫ್: ಟ್ರಂಪ್ ಹೇರಿದ್ದ ಭಾರೀ ಶುಲ್ಕ ರದ್ದು, 'fast-track fee' ಕಾನೂನುಬಾಹಿರ ಎಂದ ಫೆಡರಲ್ ಕೋರ್ಟ್

ಅಮೆರಿಕಾ ಜೊತೆ ಯಾಕೆ ಸಂಘರ್ಷ?’: ಟ್ರಂಪ್ ಒತ್ತಡಕ್ಕೆ ಮಣಿದ ಇಸ್ರೇಲ್, ಇರಾನ್ ಮೇಲಿನ ಭಾರೀ ದಾಳಿ ಕೈಬಿಟ್ಟ ನೆತನ್ಯಾಹು

ಸಿಎಂಗೆ ಮುಖ್ಯ ಸಲಹೆಗಾರರಾಗಿ ಸುನೀಲ್‌ ಕನುಗೋಳು ನೇಮಕ: ಸಂಪುಟ ದರ್ಜೆ ಸಚಿವರ ಸ್ಥಾನಮಾನ

ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಗೃಹ ಸಚಿವ ಖರ್ಗೆ ಖಡಕ್ ಸೂಚನೆ; ಇಲ್ಲಿದೆ ಕಾರಣ

INDIA ಮೈತ್ರಿಕೂಟದಲ್ಲಿ ಗದ್ದಲ: DMK, AAP ಗೈರು ಹಿನ್ನಲೆ ರಾಹುಲ್ ಗಾಂಧಿ, ಕಾಂಗ್ರೆಸ್ ವಿರುದ್ಧ ವ್ಯಾಪಕ ಆಕ್ರೋಶ!

SCROLL FOR NEXT