ಸೂರಜ್ ಹೆಗ್ಡೆ ಪಾರ್ಥಿವ ಶರೀರಕ್ಕೆ ರಾಹುಲ್ ಗಾಂಧಿ, ಸಿಎಂ ಡಿ ಕೆ ಶಿವಕುಮಾರ್ ಸೇರಿ ಕಾಂಗ್ರೆಸ್ ನಾಯಕರಿಂದ ಅಂತಿಮ ವಿದಾಯ  
ರಾಜ್ಯ

ಬೆಂಗಳೂರಿಗೆ ರಾಹುಲ್ ಗಾಂಧಿ ಆಗಮನ: ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ನಾಯಕರು ಸೂರಜ್ ಹೆಗ್ಡೆ ಅಂತ್ಯಕ್ರಿಯೆಯಲ್ಲಿ ಭಾಗಿ-Video

ಜೂನ್ 7ರಂದು ನಿಧನರಾದ ಸೂರಜ್ ಹೆಗ್ಡೆ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಕಾಂಗ್ರೆಸ್ ಮುಖಂಡರು ಸಂತಾಪ ಸೂಚಿಸಿ, ಸಾಂತ್ವನ ಹೇಳಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದು ಬೆಂಗಳೂರಿನಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಪದಾಧಿಕಾರಿಯಾಗಿದ್ದ ಸೂರಜ್ ಹೆಗ್ಡೆ ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.

ಜೂನ್ 7ರಂದು ನಿಧನರಾದ ಸೂರಜ್ ಹೆಗ್ಡೆ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಕಾಂಗ್ರೆಸ್ ಮುಖಂಡರು ಸಂತಾಪ ಸೂಚಿಸಿ, ಸಾಂತ್ವನ ಹೇಳಿದರು.

ಈ ಮೊದಲು ರಾಹುಲ್ ಗಾಂಧಿ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂತಾಪ ಸೂಚಿಸಿ, ಸೂರಜ್ ಹೆಗ್ಡೆ ಅವರ ನಿಧನದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಎಐಸಿಸಿ ಕಾರ್ಯದರ್ಶಿ ಹಾಗೂ ಭಾರತೀಯ ಯುವ ಕಾಂಗ್ರೆಸ್‌ನ ಮಾಜಿ ಉಸ್ತುವಾರಿಯಾಗಿ ಅವರು ಪಕ್ಷದ ಸಿದ್ಧಾಂತಗಳ ಮೇಲೆ ಅಪಾರ ನಂಬಿಕೆಯಿಂದ ಕೆಲಸ ಮಾಡಿದ್ದರು ಎಂದು ಬರೆದುಕೊಂಡಿದ್ದರು.

ಇಂದು ಕಾಂಗ್ರೆಸ್‌ನ ನ್ಯಾಯ ಮತ್ತು ಪ್ರಜಾಪ್ರಭುತ್ವದ ಬದ್ಧತೆಯನ್ನು ಮುಂದುವರಿಸುತ್ತಿರುವ ಅನೇಕ ಯುವಕರಿಗೆ ಅವರು ಮಾರ್ಗದರ್ಶನ ನೀಡಿದ್ದರು. ಅವರ ನಿಧನ ಕಾಂಗ್ರೆಸ್ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬ, ಸಹೋದ್ಯೋಗಿಗಳು ಹಾಗೂ ಅವರಿಂದ ಪ್ರೇರಿತರಾದ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರಿಗೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಸೂರಜ್ ಹೆಗ್ಡೆ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ, ನನ್ನ ಆತ್ಮೀಯ ಸಹೋದ್ಯೋಗಿ ಸೂರಜ್ ಹೆಗ್ಡೆ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ಆಘಾತಕ್ಕೊಳಗಾಗಿದ್ದೇನೆ. ಅವರು ಎಐಸಿಸಿ ಪದಾಧಿಕಾರಿ, ಕೆಪಿಸಿಸಿ ಉಪಾಧ್ಯಕ್ಷ ಹಾಗೂ ರಾಜ್ಯ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸಂಘಟನಾ ಕೌಶಲ್ಯ ಮತ್ತು ಜನಪರ ಕಾಳಜಿಯ ಮೂಲಕ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವಲ್ಲಿ ಅವರ ಕೊಡುಗೆ ಅಪಾರವಾಗಿದೆ ಎಂದು ಹೇಳಿದ್ದಾರೆ.

ಪಕ್ಷದ ಕಾರ್ಯಕರ್ತರೊಂದಿಗೆ ಸದಾ ಉತ್ತಮ ಬಾಂಧವ್ಯ ಹೊಂದಿದ್ದ ಸಕ್ರಿಯ ನಾಯಕನನ್ನು ನಾವು ಇಂದು ಕಳೆದುಕೊಂಡಿದ್ದೇವೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಈ ನಷ್ಟವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ. ಓಂ ಶಾಂತಿ ಎಂದು ಡಿ ಕೆ ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದರು.

ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಕೂಡ ಸಂತಾಪ ಸೂಚಿಸಿ, ಅವರ ಸರಳ ವ್ಯಕ್ತಿತ್ವ, ನಾಯಕತ್ವ ಹಾಗೂ ಜನರ ಮೇಲಿನ ಕಾಳಜಿ ಸದಾ ಸ್ಮರಣೀಯವಾಗಿರುತ್ತದೆ ಎಂದು ಹೇಳಿದರು.

ಎಐಸಿಸಿ ಪದಾಧಿಕಾರಿ, ಕೆಪಿಸಿಸಿ ಉಪಾಧ್ಯಕ್ಷ ಹಾಗೂ ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಸೇರಿದಂತೆ ಹಲವು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದ ಸೂರಜ್ ಹೆಗ್ಡೆ ಅವರ ನಿಧನಕ್ಕೆ ದೇಶದಾದ್ಯಂತ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದ್ವೇಷದ ಕಾರ್ಖಾನೆಯಿಂದ ಸತ್ಯ ಮುಚ್ಚಿಡಲು ಸಾಧ್ಯವಿಲ್ಲ, ‘ಹತ್ಯಾಕಾಂಡವನ್ನು ಸೇನಾ ಕಾರ್ಯಾಚರಣೆ ಎಂದರೆ ಪಾಪ ಕಳೆಯಲ್ಲ’: Pak ವಿರುದ್ಧ ಭಾರತ ಗುಡುಗು

BDA, BMRDA ಇಲ್ಲದ ಬೆಂಗಳೂರು ಅಭಿವೃದ್ಧಿ ಖಾತೆಗೆ ಬೆಲೆಯೇ ಇಲ್ಲ: ರಾಮಲಿಂಗಾ ರೆಡ್ಡಿ ಬಳಿಕ ಕೃಷ್ಣ ಬೈರೇಗೌಡ ಸಿಟ್ಟು, ಹೈಕಮಾಂಡ್‌ಗೆ ದೂರು..?

H-1B ವೀಸಾ ಅರ್ಜಿದಾರರಿಗೆ ಬಿಗ್ ರಿಲೀಫ್: ಟ್ರಂಪ್ ಹೇರಿದ್ದ ಭಾರೀ ಶುಲ್ಕ ರದ್ದು, 'fast-track fee' ಕಾನೂನುಬಾಹಿರ ಎಂದ ಫೆಡರಲ್ ಕೋರ್ಟ್

'ಸಂಪೂರ್ಣ ಗೆಲುವಿ'ನೊಂದಿಗೆ ಇನ್ನೂ 18 ದಿನಗಳಲ್ಲಿ ಇರಾನ್ ವಿರುದ್ಧದ ಯುದ್ಧ ಅಂತ್ಯ: ಡೊನಾಲ್ಡ್ ಟ್ರಂಪ್ ಭರವಸೆ

ಅಮೆರಿಕಾ ಜೊತೆ ಯಾಕೆ ಸಂಘರ್ಷ?’: ಟ್ರಂಪ್ ಒತ್ತಡಕ್ಕೆ ಮಣಿದ ಇಸ್ರೇಲ್, ಇರಾನ್ ಮೇಲಿನ ಭಾರೀ ದಾಳಿ ಕೈಬಿಟ್ಟ ನೆತನ್ಯಾಹು

SCROLL FOR NEXT