ಡಿಕೆ ಶಿವಕುಮಾರ್, ಮನೋಹರಲಾಲ್ ಖಟ್ಟರ್ 
ರಾಜ್ಯ

ಕೇಂದ್ರ ಸಚಿವರನ್ನು ಭೇಟಿಯಾದ ಸಿಎಂ ಶಿವಕುಮಾರ್: Metro ವಿಸ್ತರಣೆ, ಡಬಲ್ ಡೆಕ್ಕರ್ ಸೇರಿ ಹಲವು ಯೋಜನೆಗಳ ಅನುಮತಿಗೆ ಮನವಿ!

ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ ಮನೋಹರಲಾಲ್ ಖಟ್ಟರ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಅಹವಾಲು ಸಲ್ಲಿಸಿದರು.

ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ ಮನೋಹರಲಾಲ್ ಖಟ್ಟರ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಅಹವಾಲು ಸಲ್ಲಿಸಿದರು. ಸದ್ಯ ದೆಹಲಿಯಲ್ಲಿರುವ ಶಿವಕುಮಾರ್ ಅವರು, ಹಲವು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದಾರೆ.

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ

ಮೆಟ್ರೋ ಮೂರನೇ ಹಂತ ಯೋಜನೆಯಲ್ಲಿ 44.65 ಕಿ.ಮೀ ಉದ್ದದ ಡಬಲ್ ಡೆಕ್ಕರ್ ಮೆಲ್ಸೇತುವೆ ನಿರ್ಮಾಣಕ್ಕೆ ಬಿಎಂಆರ್ ಸಿಎಲ್ ಮುಂದಾಗಿದ್ದು, ದಿನಾಂಕ 13-09-2024ರಂದು ಕೇಂದ್ರ ಸರ್ಕಾರ ಇದಕ್ಕೆ ಅನುಮತಿ ನೀಡಿತ್ತು. ಈ ಯೋಜನೆಯ ವೆಚ್ಚ 9,700 ಕೋಟಿ ರೂ. ಅನ್ನು ಕರ್ನಾಟಕ ಸರ್ಕಾರವೇ ಭರಿಸಲಿದೆ. 19-01-2026ರಂದು ಬಿಎಂಆರ್ ಸಿಎಲ್ ಮಂಡಳಿಯ 118ನೇ ಸಭೆಯಲ್ಲಿ ಸಣ್ಣ ಬದಲಾವಣೆ ಪ್ರಸ್ತಾಪ ಮಾಡಿದ್ದು, ಕೇಂದ್ರ ಸರ್ಕಾರ ಈ ಯೋಜನೆಯನ್ನು ಆರಂಭಿಸಲು ಬಿಎಂಆರ್ ಸಿಎಲ್ ಗೆ ಅನುಮತಿ ನೀಡಬೇಕು.

ಮೆಟ್ರೋ ಎರಡನೇ ಹಂತದ ಪರಿಷ್ಕೃತ ಯೋಜನಾ ವೆಚ್ಚಕ್ಕೆ ಅನುಮತಿ

ಈ ಯೋಜನೆಗೆ ಕೇಂದ್ರ ಸರ್ಕಾರ 21-02-2014ರಂದು 26,405.14 ಕೋಟಿ ರೂ. ಅಂದಾಜು ವೆಚ್ಚಕ್ಕೆ ಅನುಮತಿ ನೀಡಿತ್ತು. 72.095 ಕಿ.ಮೀ ಉದ್ದ ಹಾಗೂ 61 ನಿಲ್ದಾಣಗಳನ್ನು ಒಳಗೊಂಡಿರುವ ಈ ಯೋಜನೆ ಅಂದಾಜು ವೆಚ್ಚ ಈಗ 40,425.02 ಕೋಟಿ ರೂ.ಗೆ ಅಂದರೆ 14,019.88 ಕೋಟಿ ರೂ. ಏರಿಕೆ ಮಾಡಲಾಗಿದ್ದು, ಆದಷ್ಟು ಬೇಗ ಈ ಪರಿಷ್ಕೃತ ಯೋಜನಾ ವೆಚ್ಚಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕು.

ಮೆಟ್ರೋ ಮೂರನೇ ಎ ಹಂತಕ್ಕೆ ಅನುಮತಿ

ಈ ಯೋಜನೆ ಸರ್ಜಾಪುರದಿಂದ ಹೆಬ್ಬಾಳದವರೆಗೆ ಒಟ್ಟು 37.804 ಕಿ.ಮೀ (14.28 ಕಿ.ಮೀ ಸುರಂಗ ಹಾಗೂ 23.524 ಕಿ.ಮೀ ಮೇಲ್ಸೇತುವೆ) ಉದ್ದವಿದ್ದು, ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಕೆಲವು ಮಾರ್ಪಾಡು ಮಾಡಲಾಗಿದ್ದು, 25,999 ಕೋಟಿ ರೂ. ಅಂದಾಜು ವೆಚ್ಚದ ಪರಿಷ್ಕೃತ ಡಿಪಿಆರ್ ಅನ್ನು 29-04-2026ರಂದು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದ್ದು, ಆದಷ್ಟು ಬೇಗ ಇದಕ್ಕೆ ಅನುಮತಿ ನೀಡಬೇಕು.

ಪ್ರಾದೇಶಿಕ ಕ್ಷಿಪ್ರ ರೈಲು ಸಾರಿಗೆ ವ್ಯವಸ್ಥೆ (RRTS) ಜಾರಿಗೆ ಅನುಮತಿ

ಬೆಂಗಳೂರು- ಮೈಸೂರು, ಬೆಂಗಳೂರು- ಕನಕಪುರ, ಬೆಂಗಳೂರು- ತುಮಕೂರು, ಬೆಂಗಳೂರು- ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು- ಕೋಲಾರ ನಡುವೆ ಪ್ರಾದೇಶಿಕ ಕ್ಷಿಪ್ರ ರೈಲು ಸಾರಿಗೆ ವ್ಯವಸ್ಥೆ (RRTS) ಜಾರಿಗೆ ಅನುಮತಿ ನೀಡಬೇಕು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

140 ಕೋಟಿ ಭಾರತೀಯರ ಆಶೀರ್ವಾದ ನನ್ನ ದೊಡ್ಡ ಶಕ್ತಿ: Narendra Modi

'ಜೈಲಿನಲ್ಲಿ ಕ್ರಿಮಿನಲ್ ಗಂಡ, ಬಾಯ್‌ಫ್ರೆಂಡ್ ಜತೆ ಹೆಂಡತಿ ಸುತ್ತಾಟ' ಪೋಸ್ಟ್: ಕೆರಳಿದ ದರ್ಶನ್ ಪತ್ನಿ ವಿಜಯಲಕ್ಷ್ಮೀ ಪೊಲೀಸರಿಗೆ ದೂರು!

ಬಿಟ್ ಕಾಯಿನ್ ಹಗರಣದಲ್ಲಿ ಯಾರೇ ಭಾಗಿಯಾಗಿರಲಿ ಬಿಡೋ ಪ್ರಶ್ನೆಯೇ ಇಲ್ಲ- ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪಂದ್ಯದ ಮಧ್ಯೆಯೇ ಪಿರಿಯಡ್ಸ್, ಮೈದಾನ ಬಿಟ್ಟು ಓಡಿದ ಮಂಧಾನ: ನೋವಿನ ಕಥೆ ಬಿಚ್ಚಿಟ್ಟ ಸ್ಮೃತಿ!

CM ಕಚೇರಿ ಸೇರಿದಂತೆ ಮುಂಬೈನ ಹಲವು ಕಡೆ ಬಾಂಬ್ ಸ್ಫೋಟಿಸುವುದಾಗಿ ಖಲಿಸ್ತಾನ್ ಬೆದರಿಕೆ!

SCROLL FOR NEXT