ಬೋನಿಗೆ ಬಿದ್ದ ಹೆಣ್ಣು ಹುಲಿ ಸ್ಥಳಾಂತರ 
ರಾಜ್ಯ

ಮೈಸೂರು: ಉಪಟಳ ನೀಡುತ್ತಿದ್ದ ಹೆಣ್ಣು ಹುಲಿ ಕೊನೆಗೂ ಸೆರೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು! video

ಹುಣಸೂರು ತಾಲೂಕಿನ ಹನಗೋಡು ಹೋಬಳಿ ಕೂಡ್ಲೂರು ಗ್ರಾಮದ ಬಳಿಯ ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಎಂಬುವವರಿಗೆ ಸೇರಿದ ತೋಟದಲ್ಲಿ ಇರಿಸಿದ್ದ ಬೋನಿಗೆ ಹೆಣ್ಣು ಹುಲಿ ಬಿದ್ದಿದೆ.

ಹುಣಸೂರು: ಕಳೆದ ಎರಡು ವರ್ಷಗಳಿಂದ ಬಿಡದೆ ಕಾಡುತ್ತಿದ್ದ ಹುಲಿಯೊಂದು ಕೊನೆಗೂ ತೋಟವೊಂದರಲ್ಲಿ ಇರಿಸಿದ್ದ ಬೋನಿನಲ್ಲಿ ಇಂದು ಬಂಧಿಯಾಗುವ ಮೂಲಕ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹನಗೋಡು ಹೋಬಳಿ ಕೂಡ್ಲೂರು ಗ್ರಾಮದ ಬಳಿಯ ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಎಂಬುವವರಿಗೆ ಸೇರಿದ ತೋಟದಲ್ಲಿ ಇರಿಸಿದ್ದ ಬೋನಿಗೆ ಹೆಣ್ಣು ಹುಲಿ ಬಿದ್ದಿದೆ.

ಸುಮಾರು 4 ವರ್ಷದ ಹೆಣ್ಣು ಹುಲಿ ಇದಾಗಿದ್ದು, ಹುಲಿಯು ಆಗಾಗ್ಗೆ ಕಾಣಿಸಿಕೊಳುತ್ತ, ಹತ್ತಾರು ಜಾನುವಾರುಗಳನ್ನು ಕೊಂದು ಹಾಕಿತ್ತು. ರೈತರು ಈ ಭಾಗದಲ್ಲಿ ಓಡಾಡಲು ಹೆದರುತ್ತಿದ್ದರಲ್ಲದೆ ಸಂಜೆ ನಂತರ ಓಡಾಡುವುದನ್ನು ನಿಲ್ಲಿಸಿದ್ದರು.

ಗ್ರಾಮಸ್ಥರು ಹಾಗೂ ಮಾಜಿ ಶಾಸಕ ಮಂಜುನಾಥ್ ಸಹ ಹುಲಿ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಓತ್ತಡ ಹಾಕಿದ ಹಿನ್ನೆಲೆಯಲ್ಲಿ, ಹುಲಿ ಸೆರೆಗಾಗಿ ಮಂಜುನಾಥ್ ರ ತೋಟದಲ್ಲಿ ತಿಂಗಳ ಹಿಂದೆ ಬೋನ್ ಒಳಗೆ ಮೇಕೆಯೊಂದನ್ನು ಕಟ್ಟಿ ಹಾಕಲಾಗಿತ್ತು. ಬುಧವಾರ ಬೆಳಗಿನ ಜಾವ ಹುಲಿ ಮೇಕೆಯನ್ನು ಬೇಟೆಯಾಡಲು ಬಂದು ಬೋನಿನಲ್ಲಿ ಸೆರೆಯಾಗಿದೆ.

ಬೆಳಗ್ಗೆ ವಿಷಯ ತಿಳಿದ ಅಕ್ಕಪಕ್ಕದ ಗ್ರಾಮಸ್ಥರು, ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಬರುವ ಮುನ್ನವೆ ಹುಲಿ ನೋಡಲು ತೋಟದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ಘಟನಾ ಸ್ಥಳಕ್ಕೆ ಪ್ರಾದೇಶಿಕ ಅರಣ್ಯ ವಿಭಾಗದ ಡಿ.ಸಿ.ಎಫ್ ಆರ್.ಟಿ.ಕಿರುಬನಂದನ್ ಆರ್.ಎಫ್.ಒ ಸಂತೋಷ್ ಹೂಗಾರ್ ನೇತೃತ್ವದ ತಂಡವು ಜನರನ್ನು ನಿಯಂತ್ರಿಸಿ, ದೂರ ಕಳುಹಿಸಿದರು.

ನಾಗರಹೊಳೆ ಪಶುವೈದ್ಯ ಡಾ.ರಮೇಶ್ ಹುಲಿಗೆ ಬಂದೂಕು ಮೂಲಕ ಅರವಳಿಕೆ ಚುಚ್ಚುಮದ್ದು ನೀಡಿ ಹುಲಿಯ ಜ್ಞಾನ ತಪ್ಪಿಸಿದ ನಂತರ ಬೋನ್ ನಿಂದ್ ಹೊರತೆಗದು ಚಿಕಿತ್ಸೆ ನೀಡಿ ನಂತರ ವಾಹನದಲ್ಲಿ ಕೊಂಡೊಯ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಸಮೀಪ ದಾಳಿ: ಇಬ್ಬರು ಭಾರತೀಯ ನಾವಿಕರು ಸಾವು, ಮುಖ್ಯ ಇಂಜಿನಿಯರ್ ನಾಪತ್ತೆ

ಮಣಿಪುರದಲ್ಲಿ ಮತ್ತೆ ರಕ್ತಪಾತ: ಅಪಹರಣಕ್ಕೊಳಗಾಗಿದ್ದ ನಾಗಾ ಸಮುದಾಯದ 6 ಮಂದಿ ಶವವಾಗಿ ಪತ್ತೆ, ಇನ್ನು ಸುಮ್ಮನಿರಲ್ಲ- ಮಣಿಪುರ CM ಖಡಕ್ ಎಚ್ಚರಿಕೆ!

Hormuz ಜಲಸಂಧಿ ಮತ್ತೆ ಸ್ಥಗಿತ, ಜಗತ್ತಿಗೆ ಶಾಕ್ ಕೊಟ್ಟ Iran, ಅಮೆರಿಕ ಮುಂದಿನ ನಡೆಯೇನು?

US-Iran war: ಅಮೆರಿಕಾ ದಾಳಿಗೆ ಇರಾನ್ ತಿರುಗೇಟು; ಬಹ್ರೇನ್-ಕುವೈತ್ ನೆಲೆಗಳ ಮೇಲೆ ಕ್ಷಿಪಣಿ ದಾಳಿ, ಯುದ್ಧ ಪುನರಾರಂಭ..!

ವಾಹನ ಸವಾರರಿಗೆ Good news: Ethanol ಮಿಶ್ರಿತ ಪೆಟ್ರೋಲ್ ಮೇಲಿನ ಎಲ್ಲಾ ಸೆಸ್-ಅಬಕಾರಿ ಸುಂಕ ರದ್ದುಗೊಳಿಸಿದ ಕೇಂದ್ರ ಸರ್ಕಾರ..!

SCROLL FOR NEXT