ಕೆಎಸ್ ಭಗವಾನ್ 
ರಾಜ್ಯ

ಶ್ರೀರಾಮನ ವಿರುದ್ಧ ಅವಹೇಳನಕಾರಿ ಹೇಳಿಕೆ: ಭಗವಾನ್ ವಿರುದ್ಧ ಪೊಲೀಸ್ ಮಹಾನಿರ್ದೇಶಕರಿಗೆ ದೂರು

ಶ್ರೀರಾಮ ದಶರಥನಿಗೆ ಹುಟ್ಟಿದವನಲ್ಲ. ದಶರಾಥ ಪುತ್ರ ಕಾಮೇಷ್ಠಿ ಪೂಜೆ ಮಾಡುತ್ತಾನೆ. ಆ ಪೂಜೆಯಲ್ಲಿ ರಾಣಿ ಪುರೋಹಿತರ ಜೊತೆ ರಾತ್ರಿ ಮಲಗಬೇಕು. ಅಂದರೆ ನೀವೇ ಅರ್ಥ ಮಾಡಿಕೊಳ್ಳಿ ಎಂದು ಭಗವಾನ್ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದರು.

ಬೆಂಗಳೂರು: ಮತ್ತೊಮ್ಮೆ ಶ್ರೀರಾಮನ ವಿರುದ್ಧ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಪ್ರೊ. ಕೆ.ಎಸ್. ಭಗವಾನ್ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ(ಹಿಂಜಸ) ಪೊಲೀಸ್ ಮಹಾನಿರ್ದೇಶಕರಿಗೆ ಗುರುವಾರ ದೂರು ನೀಡಿದೆ.

ಶ್ರೀರಾಮ ದಶರಥನಿಗೆ ಹುಟ್ಟಿದವನಲ್ಲ. ದಶರಾಥ ಪುತ್ರ ಕಾಮೇಷ್ಠಿ ಪೂಜೆ ಮಾಡುತ್ತಾನೆ. ಆ ಪೂಜೆಯಲ್ಲಿ ರಾಣಿ ಪುರೋಹಿತರ ಜೊತೆ ರಾತ್ರಿ ಮಲಗಬೇಕು. ಅಂದರೆ ನೀವೇ ಅರ್ಥ ಮಾಡಿಕೊಳ್ಳಿ ಎಂದು ಭಗವಾನ್ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದರು.

ಹಿಂದೂ ಧರ್ಮದ ಆರಾಧ್ಯ ದೈವವಾಗಿರುವ ಶ್ರೀರಾಮ, ಶ್ರೀಕೃಷ್ಣ, ಭಗವದ್ಗೀತೆ ಹಾಗೂ ಹಿಂದೂ ಧಾರ್ಮಿಕ ನಂಬಿಕೆಗಳ ಕುರಿತು ಅವಹೇಳನಕಾರಿ ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿರುವ ಪ್ರೊ. ಕೆ.ಎಸ್. ಭಗವಾನ್ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ದೂರು ನೀಡಿದೆ.

ಜೂ.9 ರಂದು ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ಬಿ. ಕೃಷ್ಣಪ್ಪ ಮೈತ್ರಿವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಗವಾನ್ ಶ್ರೀರಾಮ ಹಾಗೂ ಹಿಂದೂ ಧಾರ್ಮಿಕ ಪರಂಪರೆಗಳ ಕುರಿತು ಅವಹೇಳನಕಾರಿ ಮತ್ತು ವಿವಾದಾತ್ಮಕ ಹೇಳಿಕೆಗಳನ್ನು ನೀಡಿರುವುದು ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟುಮಾಡಿದೆ ಎಂದು ಸಮಿತಿ ದೂರಿನಲ್ಲಿ ತಿಳಿಸಿದೆ.

ದೂರಿನೊಂದಿಗೆ ಭಗವಾನ್ ಭಾಷಣದ ವಿಡಿಯೋ, ಧ್ವನಿಮುದ್ರಣ ಹಾಗೂ ಇತರೆ ಸಾಕ್ಷ್ಯಗಳನ್ನು ಸಲ್ಲಿಸಿದ್ದು, ಪರಿಶೀಲಿಸಿ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಮನವಿ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಹ್ಲಾದ್ ಜೋಶಿ ಕೊಳಕು ಮನುಷ್ಯ; ಅತ್ಯಾಚಾರಿಯನ್ನು ರಕ್ಷಿಸುವವರು ನೂತನ ಶಿಕ್ಷಣ ಸಚಿವರಾಗಿದ್ದಾರೆ: ರಾಹುಲ್ ಗಂಭೀರ ಆರೋಪ, Video

ಸಾಮಾಜಿಕ ಮಾಧ್ಯಮಗಳಿಗೆ ಕಡಿವಾಣ: ಮೆಟಾ, ಎಕ್ಸ್, ಗೂಗಲ್, ಸ್ನ್ಯಾಪ್‌ಚಾಟ್‌ಗೆ ಸಂಸದೀಯ ಸಮಿತಿ ಸಮನ್ಸ್

ಸಿಜೆಪಿ ನೇತೃತ್ವದ ಪ್ರತಿಭಟನೆಗೆ ಪಾಕಿಸ್ತಾನದ Gen Z ಬೆಂಬಲ: MEA ತೀಕ್ಷ್ಣ ಪ್ರತಿಕ್ರಿಯೆ! Video

'ನನ್ನ ಕಾಲುಗಳು ನಡುಗುತ್ತಿದ್ದವು'; ಕ್ಯಾರವಾನ್‌ಗೆ ನುಗ್ಗಿ ಶರ್ಟ್ ಬಿಚ್ಚಿದ...: ಆಘಾತಕಾರಿ ಅನುಭವ ಬಿಚ್ಚಿಟ್ಟ ನಟಿ Kajal Aggarwal

LS Debate: ದೇಶದ ಯುವಶಕ್ತಿಗೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬೆಚ್ಚಿಬಿದ್ದಿದೆ: ಸಂಸದೆ ಪ್ರಿಯಾಂಕಾ ವಾದ್ರಾ